ಸೋಮಯ್ಯಾ ಕಾಲೇಜು ಕನ್ನಡ ವೃಂದ: ವಾರ್ಷಿಕ ವಿಹಾರಕೂಟ
Team Udayavani, Jul 11, 2018, 4:57 PM IST
ಮುಂಬಯಿ:ನಗರದಲ್ಲಿ ಕನ್ನಡ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಕನ್ನಡ ಸೇನಾನಿ ಬಿರುದಾಂಕಿತ ದಿ| ಡಾ| ಸಂಜೀವ ಶೆಟ್ಟಿ ಅವರ ನೇತೃತ್ವದಲ್ಲಿ ಬೆಳೆದು ಬಂದ ಸೋಮಯ್ನಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಬಳಗದ ಸೋಮಯ್ನಾ ಕಾಲೇಜು ಕನ್ನಡ ವೃಂದದ ವಾರ್ಷಿಕ ವಿಹಾರಕೂಟವು ಇತ್ತೀಚೆಗೆ 077 ಯುನಿವರ್ಸ್ ರೆಸಾರ್ಟ್ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಬಳಗದ ಮುಖಂಡ ಹೇಮಂತ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ವಿಹಾರಕೂಟದಲ್ಲಿ ಹೆಚ್ಚಿನ ಸದಸ್ಯ ಬಾಂಧವರು ಪಾಲ್ಗೊಂಡು ವಿವಿಧ ಸಾಂಸ್ಕೃತಿಕ ಮನೋರಂಜನೆಯಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಕಾಲೇಜಿನ ದಿನಗಳಿಂದ ಈವರೆಗೆ ಅಗಲಿದ ಶಿಕ್ಷಕರು, ಗೆಳೆಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ತಮ್ಮ ಮನೆ, ಪರಿವಾರ, ಕೆಲಸದ ಒತ್ತಡದ ನಡುವೆಯೂ ಒಂದು ಸಣ್ಣ ವಿರಾಮ ಮಾಡಿಕೊಂಡು ಆ ಹಳೆಯ ನವಿರಾದ ನೆನಪುಗಳನ್ನು ಮೆಲುಕುಹಾಕಿಕೊಂಡ ಬಳಗದ ಸದಸ್ಯರು ಬಳಗದ ಮುಖಾಂತರ ಮುಂದೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು. ಹೇಮಂತ್ ಶೆಟ್ಟಿ, ವಿನಯ್ ಪೂಜಾರಿ, ಸರೋಜಿನಿ ಕುಂದರ್, ವಸಂತಿ ಕುಂದರ್ ಇವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ