ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ವಿಶೇಷ ಮಹಾಸಭೆ


Team Udayavani, Jul 24, 2018, 4:32 PM IST

2207mum03.jpg

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕ್ರಮ ನಿಬಂಧನೆಗಳಿಗೆ ಮಾಡಿದ ತಿದ್ದುಪಡಿಗಳಿಗೆ ಅಂಗೀಕಾರ ಪಡೆಯಲು ವಿಶೇಷ ಮಹಾಸಭೆಯು ಒಕ್ಕೂಟದ ಅಧ್ಯಕ್ಷ  ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಶ್ರೀಮತಿ ಅಮ್ಮಣಿ ರಾಮಣ್ಣ  ಶೆಟ್ಟಿ ಸಭಾಭವನದಲ್ಲಿ ನಡೆಯಿತು.

ಜಯರಾಮ ಶೆಟ್ಟಿ ಕೊಡಂಕೂರು ಅವರ ಪ್ರಾರ್ಥನೆಯೊಂದಿಗೆ ಸಭೆಯು ಪ್ರಾರಂಭಗೊಂಡಿತು. ಜತೆ ಕಾರ್ಯದರ್ಶಿ ಇಂದ್ರಾಳಿ ಜಯಕರ್‌ ಶೆಟ್ಟಿ  ಅವರು  ಸ್ವಾಗತಿಸಿ, ಸೆಪ್ಟಂಬರ್‌ 9ರಂದು ಜರಗುವ ವಿಶ್ವ ಬಂಟರ ಸಮ್ಮಿಲನ-2018 ಭಾಗ-2 ಇದರ ಪೂರ್ವ ತಯಾರಿಯ ಬಗ್ಗೆ ಮಾಹಿತಿ ನೀಡಿದರು. 

ಕಾರ್ಯದರ್ಶಿ ವಿಜಯಪ್ರಸಾದ್‌ ಆಳ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಒಕ್ಕೂಟದ ಸಮಾಜಸೇವೆ ಚಟುವಟಿಕೆಗಳಿಂದ ಆರ್ಥಿಕವಾಗಿ ಅಶಕ್ತ ಕುಟುಂಬಗಳಿಗೆ ಧನಸಹಾಯ ನೀಡಿದ ಬಗ್ಗೆ ವಿವರಣೆ ನೀಡಿದರು. ಅಲ್ಲದೇ 85ಜಿ ನವೀಕರಣವಾಗಿದ್ದು ಮತ್ತು ಭಾರತ ಸರಕಾರದಿಂದ ಸರಕಾರೇತರ ಸೇವಾ ಸಂಸ್ಥೆಯಾಗಿ ನೋಂದಣಿ ಸಂಖ್ಯೆ ಸಿಕ್ಕಿರುತ್ತದೆ. ಇದರಿಂದ ಒಕ್ಕೂಟಕ್ಕೆ ವಿದೇಶಿ ದಾನಿಗಳ ದೇಣಿಗೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕ್ರಮ ನಿಯಮ ನಿಬಂಧನೆಗಳ ತಿದ್ದುಪಡಿ ಸಮಿತಿಯ ವಕೀಲ  ಕೆ. ಪೃಥ್ವಿರಾಜ್‌ ರೈ ಅವರು,  ಅಂಗೀಕಾರಕ್ಕೆ ಪ್ರಸ್ತಾವಿಸಿದ ತಿದ್ದುಪಡಿಯ ಸಂಪೂರ್ಣ ವಿವರವನ್ನು ಸಭೆೆಗೆ ತಿಳಿಸಿದರು ಹಾಗೂ ಸದಸ್ಯರಿಂದ ಸಲಹೆ ಸೂಚನೆಯನ್ನು ಕೋರಿದರು. ಅನಂತರ ಅನೇಕ ಸದಸ್ಯರು ತಮ್ಮ ತಮ್ಮ ಸಲಹೆ ಸೂಚನೆಗಳನ್ನು ನೀಡಿ ಕೆಲವು ಬದಲಾವಣೆಯೊಂದಿಗೆ ತಿದ್ದುಪಡಿ ಮಾಡಿ ಕ್ರಮ ನಿಯಮ ನಿಬಂಧನೆಗಳ ತಿದ್ದುಪಡಿಗೆ ಸಭೆಯು ಸರ್ವಾನುಮತದಿಂದ ಅಂಗೀಕಾರ ನೀಡಲಾಯಿತು.

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತನಾಡಿ,  ಈ ಕ್ರಮ ನಿಯಮ ನಿಬಂಧನೆಗಳ ತಿದ್ದುಪಡಿಗೆ ಸಹಕರಿಸಿದ ತಿದ್ದುಪಡಿ ಸಮಿತಿಯ ಸದಸ್ಯರಿಗೂ, ಸಲಹೆ ಸೂಚನೆ ನೀಡಿದ ಗೌರವಾನ್ವಿತ ಸದಸ್ಯರುಗಳಿಗೂ ಅಭಿನಂದನೆ ಸಲ್ಲಿಸಿದರು.   ಇದೇ ವಠಾರದಲ್ಲಿ ಸೆಪ್ಟಂಬರ್‌ನಲ್ಲಿ ನಡೆಯುವ ವಿಶ್ವ ಬಂಟರ ಸಮ್ಮಿಲನ-2018 ಭಾಗ-2 ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಮಾಜ ಬಾಂಧವರು ಭಾಗವಹಿಸಿ ಸಮಾರಂಭವು ವಿಜೃಂಭಣೆೆಯಿಂದ ಜರಗಿ ಯಶಸ್ವಿಯಾಗಲು  ಸಹಕಾರ ಹಾಗೂ ಪ್ರೋತ್ಸಾಹವನ್ನು ಕೋರಿದರು. ಒಕ್ಕೂಟದ ವತಿಯಿಂದ ನಿರಂತರವಾಗಿ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ನೀಡಲು ಸಹ ಎಲ್ಲರ ಸಹಕಾರ ಕೋರಿದರು.
ಸಭೆಯಲ್ಲಿ ಹಿರಿಯರಾದ ಬಿ. ಜಗನ್ನಾಥ ಶೆಟ್ಟಿ ಬೈಂದೂರು, ಎಸ್‌. ಜಯರಾಮ ಶೆಟ್ಟಿ ಬೆಳ್ತಂಗಡಿ, ಕರ್ನಲ್‌ ಎನ್‌. ಎಸ್‌. ಭಂಡಾರಿ ಮತ್ತು  ಎಂ. ಜೆ. ಶೆಟ್ಟಿ ಸುರತ್ಕಲ್‌ ಹಾಗೂ ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ   ಕರ್ನಿರೆ ವಿಶ್ವನಾಥ ಶೆಟ್ಟಿ, ಶಿಕ್ಷಣ  ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಹಾಗೂ ಅನೇಕ ಆಡಳಿತ ಮಂಡಳಿ ಸದಸ್ಯರು ಒಕ್ಕೂಟದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಇತರ ಗಣ್ಯರು ಹಾಜರಿದ್ದರು. 
ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಅವರು ವಂದಿಸಿದರು. ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.