ಶೀಘ್ರದಲ್ಲೇ ಸೋಂಕಿತರ ಭೇಟಿಗೆ ವಿಶೇಷ ಸ್ಥಳ: ಟೋಪೆ
Team Udayavani, Jul 5, 2020, 5:51 PM IST
ಮುಂಬಯಿ, ಜು. 4: ಕೋವಿಡ್ ಆಸ್ಪತ್ರೆ ಎನ್ನುವ ಕಾರಣದಿಂದ ರೋಗಿಗಳ ಸಂಬಂಧಿಕರಿಗೆ ಪ್ರವೇಶ ನೀಡಲು ನಿರಾಕರಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ರೋಗಿಗಳನ್ನು ಭೇಟಿಯಾಗಲು ಸಂಬಂಧಿಕರಿಗೆ ಅವಕಾಶ ನೀಡಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಹೇಳಿದ್ದಾರೆ.
ಸಂಬಂಧಿಕರು ಸೋಂಕಿತರನ್ನು ಭೇಟಿಯಾಗಲು ಆಸ್ಪತ್ರೆಯಲ್ಲಿ ವಿಶೇಷ ಸ್ಥಳದ ವ್ಯವಸ್ಥೆ ಮಾಡಬೇಕು. ಅದಲ್ಲದೆ ಐಸಿಯುನಲ್ಲಿ ಕೆಮೆರಾ ಅಳವಡಿಸಲು ಸೂಚಿಸಲಾಗಿದೆ ಎಂದು ಟೋಪೆ ಹೇಳಿದ್ದಾರೆ. ಆ್ಯಂಬುಲೆನ್ಸ್ಗಳ ಬಗ್ಗೆ ಮುಂಬಯಿಯಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ಅನೇಕ ದೂರುಗಳು ಬರುತ್ತಿವೆ ಎಂದ ಅವರು, ಆ್ಯಂಬುಲೆನ್ಸ್ಗಳಲ್ಲಿ ಅರ್ಧ ಕಿ.ಮೀ. ಅಂತರಕ್ಕೆ ರೋಗಿಗಳಿಂದ 5ರಿಂದ 8 ಸಾವಿರ ರೂ.ಗಳನ್ನು ವಸೂಲಿ ಮಾಡಲಾಗುತ್ತದೆ. ಆದ್ದರಿಂದ ಖಾಸಗಿ ಆ್ಯಂಬ್ಯುಲೆನ್ಸ್ ವಶಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಖಾಸಗಿ ಆ್ಯಂಬುಲೆನ್ಸ್ ಗಳು ಎಷ್ಟು ದರ ಪಡೆಯಬೇಕು ಎನ್ನುವುದು ಆಯಾ ಜಿಲ್ಲೆಯ ಆರ್ಟಿಓ ನಿರ್ಧರಿಸಲಿದೆ ಎಂದು ಆರೋಗ್ಯ ಸಚಿವ ಹೇಳಿದ್ದಾರೆ.
ಕೋವಿಡ್ ಅವಧಿಯಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು ಮನಪಾ ಆಯುಕ್ತ ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಿಸಲಾಗುವುದು. ಈ ಸಮಿತಿಯು ಪ್ರತಿ ಜಿಲ್ಲೆಯಲ್ಲಿ ಸಹಾಯವಾಣಿ ಜಾರಿಗೆ ತರಲಿದೆ. ಕೋವಿಡ್ ದಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡುವ ಬಗ್ಗೆಯೂ ಸಮಿತಿ ಪರಿಶೀಲಿಸಲಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ಕೆಲವು ಪ್ರದೇಶಗಳಲ್ಲಿ ಅನಗತ್ಯ ಜನಸಂದಣಿ ಹೆಚ್ಚುತ್ತಿದೆ. ಅದ್ದರಿಂದ ಅನಗತ್ಯವಾಗಿ ಸಂಚಾರ ನಡೆಸಬಾರದು ಎಂದು ಕೆಲವೊಂದು ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದರು.
ಹಲವರು ಅನಗತ್ಯವಾಗಿ ಸಂಚಾರ ಮಾಡುತ್ತಿರುವುದರಿಂದ ಅವರ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಆದರೆ ಜನರಲ್ಲಿ ತುಂಬಾ ಕಠಿಣವಾಗಿ ವರ್ತಿಸಬಾರದಂದು ಮುಖ್ಯಮಂತ್ರಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಅನೇಕ ಸ್ಥಳಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ನನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ. ಆದ್ದರಿಂದ ಕೆಲವು ಸ್ಥಳಗಳಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ