ಶ್ರೀ ಆದಿಶಕ್ತಿ ಕನ್ನಡ ಶಾಲೆ:ಉಚಿತ ಪಠ್ಯ ಪುಸ್ತಕ ವಿತರಣೆ,ಅಭಿನಂದನೆ
Team Udayavani, Jun 24, 2018, 5:18 PM IST
ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಎಸ್ಎಸ್ಸಿಯಲ್ಲಿ ಶಾಲೆಗೆ ಶೇ. 100 ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮವು ಜೂ. 15ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ವಿ. ಕರ್ಕೇರ ಅವರು ಸ್ವಾಗತಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಹಕರಿಸಿದ ಶಿಕ್ಷಕರಿಗೆ ಮತ್ತು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘ ಹಾಗೂ ಶಾಲೆಯ ಅಧ್ಯಕ್ಷ ಭಾಸ್ಕರ್ ಎಂ. ಶೆಟ್ಟಿ ಇವರು ಮಾತನಾಡಿ, ಎಸ್ಎಸ್ಸಿಯಲ್ಲಿ ವಿದ್ಯಾರ್ಥಿಗಳ ಶೇಕಡಾ 100 ಫಲಿತಾಂಶಕ್ಕಾಗಿ ಕಾರಣಕರ್ತರಾದ ಶಿಕ್ಷಕ ವರ್ಗದವರನ್ನು ಅಭಿನಂದಿಸಿದರು. ಅಲ್ಲದೆ ವಿದ್ಯಾರ್ಥಿಗಳು ಮುಂದಿನ ಕಾಲೇಜು ಜೀವನದಲ್ಲಿಯೂ ಸಂಸ್ಕಾರವಂತರಾಗಿ ಬಾಳಬೇಕು. ಶಿಕ್ಷಣಕ್ಕೆ ಮೊದಲ ಪ್ರಾಧಾನ್ಯತೆಯನ್ನು ನೀಡಿ ವಿದ್ಯಾರ್ಥಿಗಳು ಬೆಳೆಯಬೇಕು ಎಂದು ನುಡಿದು ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಶುಭಹಾರೈಸಿದರು.
ಸಂಸ್ಥೆಯ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ ಶೆಟ್ಟಿ ಇವರು ಮಾತನಾಡಿ, ವಿದ್ಯಾರ್ಥಿಗಳ ಮುಂದಿನ ಜೀವನವನ್ನು ಆದರ್ಶಯುತವಾಗಿ ನಡೆಸಬೇಕು. ನಿಮ್ಮೆಲ್ಲರ ಜೀವನದ ಶಿಲ್ಪಿಗಳು ನೀವೆ ಆಗಬೇಕು. ಭವಿಷ್ಯದಲ್ಲಿ ಉತ್ತಮ ಹುದ್ಧೆಗಳನ್ನು ಅಲಂಕರಿಸಿದ ಈ ಶಾಲೆಯ ಋಣವನ್ನು ತೀರಿಸುವಲ್ಲೂ ಎಲ್ಲರು ಮುಂದಾಗಬೇಕು ಎಂದರು.
ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಅವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಶುಭ ಹಾರೈಸಿದರು. ಶಿಕ್ಷಕ ವೃಂದದವರಾದ ವೆಂಕಟರಮಣ ಶೆಣೈ ಮತ್ತು ಸಂತೋಷ್ ದೊಡ್ಡಮನಿ ಅವರು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭಹಾರೈಸಿದರು. ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಕಿರುಕಾಣಿಕೆಯನ್ನು ಪ್ರದಾನಿಸಲಾಯಿತು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕ ವೆಂಕಟರಮಣ ಶೆಣೈ ಕಾರ್ಯಕ್ರಮ ನಿರ್ವಹಿಸಿದರು. ಸಂತೋಷ್ ದೊಡ್ಡಮನಿ ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ