ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ನಾವೆಲ್ಲರೂ ಸನ್ನದ್ಧರಾಗೋಣ: ಸುಭಾಷ್‌ ಶೆಟ್ಟಿ


Team Udayavani, Dec 19, 2020, 12:39 PM IST

ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ನಾವೆಲ್ಲರೂ ಸನ್ನದ್ಧರಾಗೋಣ: ಸುಭಾಷ್‌ ಶೆಟ್ಟಿ

ಪುಣೆ, ಡಿ. 18: ಪುಣೆಯ ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮೀ ದೇವಸ್ಥಾನವು ಭಕ್ತರ ಧಾರ್ಮಿಕ ಕೇಂದ್ರವಾಗಿ ಪ್ರಸಿದ್ಧಿಯನ್ನು ಪಡೆದು ಸಾವಿರಾರು ತುಳು-ಕನ್ನಡಿಗರಲ್ಲದೆ ಇತರ ಭಾಷಿಕರ ಅರಾಧನಾ ಕ್ಷೇತ್ರವಾಗಿದೆ. ಸುಮಾರು ಹದಿಮೂರು ವರ್ಷಗಳ ಹಿಂದೆ ಭವ್ಯ ದೇಗುಲ ನಿರ್ಮಾಣವಾಗಿ ಪುಣೆಯ ಧಾರ್ಮಿಕ ಕ್ಷೇತ್ರವಾಗಿ ಕಂಗೊಳಿಸುತ್ತಿದೆ. ಈ ಕ್ಷೇತ್ರದಲ್ಲಿ ನಿರಂತರವಾಗಿ ಧಾರ್ಮಿಕ ಸೇವೆಗಳ ಜತೆಯಲ್ಲಿ ಅಭಿವೃದ್ಧಿ ಕಾರ್ಯಗಳು ಕೂಡ ವಿಸ್ತಾರವಾಗಿ ನಡೆಯುತ್ತಿವೆ. ಇದು ಅಯ್ಯಪ್ಪ ಸ್ವಾಮಿಯ ಮಹಿಮೆ ಮತ್ತು ಕೃಪಾಶೀರ್ವಾದದಿಂದ ಎಂದು ಹೇಳಬಹುದು. ಕ್ಷೇತ್ರದ ಮೇಲಿನ ಭಕ್ತರ ಭಕ್ತಿಯಿಂದ, ದಾನಿಗಳು ಮತ್ತು ಸೇವಾಕರ್ತರ ಸಹಕಾರದಿಂದ ಸಾಕಾರಗೊಳ್ಳುತ್ತಿವೆ. ಅಂತೆಯೇ ದೇವಸ್ಥಾನದ ಸ್ಥಾಪನೆಯಿಂದ ಇಂದಿನವರೆಗೂ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ವಿಶ್ವಸ್ಥ ಮಂಡಳಿ, ದೇವಸ್ಥಾನದ ಕಾರ್ಯಕಾರಿ ಸಮಿತಿ ಹಾಗೂ ಭಕ್ತರ ಸಹಕಾರದೊಂದಿಗೆ ದೇವತಾ ಕಾರ್ಯಗಳು, ಸಮಾಜ ಸೇವಾ ಕಾರ್ಯಗಳು ನಡೆಯುತ್ತಿವೆ ಎಂದು ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ಅಧ್ಯಕ್ಷ ಸುಭಾಷ್‌ ಶೆಟ್ಟಿ ತಿಳಿಸಿದರು.

ಡಿ. 15ರಂದು ಕಾತ್ರಜ್‌ ಅಯ್ಯಪ್ಪ ಸ್ವಾಮೀ ದೇವಸ್ಥಾನದ ಪ್ರಾಂಗಣದಲ್ಲಿ ನಡೆದ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಯ್ಯಪ್ಪ ಸ್ವಾಮೀ ದೇವಸ್ಥಾನದ ನಿರ್ಮಾಣವಾಗಿ ಸಂಪ್ರದಾಯದಂತೆ ಮೊದಲ ಬಾರಿಗೆ ನಡೆಯಲಿರುವ ಬ್ರಹ್ಮಕಲಶೋತ್ಸವವನ್ನು  ಮುಂದಿನ ವರ್ಷದಲ್ಲಿ ನಡೆಸಬೇಕಾಗಿದೆ. ಈ ವರ್ಷ ವಿಶ್ವಕ್ಕೆ ಬಂದೊದಗಿದ ಮಹಾಮಾರಿ ಕೊರೊನಾದಿಂದ ಯಾವುದೇ ಕಾರ್ಯಗಳು ನಡೆಯುವಂತಿರಲಿಲ್ಲ. ಅದ್ದರಿಂದ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ನಮ್ಮ ಸಮಿತಿಯ ಸದಸ್ಯರು, ಭಕ್ತರು ಮತ್ತು ಎಲ್ಲರ ಒಪ್ಪಿಗೆಯಂತೆ ಬರುವ ವರ್ಷದಲ್ಲಿ ನಡೆಸುವ ತಿರ್ಮಾನವನ್ನು ಈ ಸಭೆಯಲ್ಲಿ ಕೈಗೊಂಡಿದ್ದೇವೆ. ತುಳು-ಕನ್ನಡಿಗರ ಎಲ್ಲ ಸಮಾಜದ ಸಂಘ-ಸಂಸ್ಥೆಗಳ ಸಹಕಾರ, ಭಕ್ತರ, ದಾನಿಗಳ ಸಹಾಯದೊಂದಿಗೆ ಬ್ರಹ್ಮಕಲಶೋತ್ಸವವು ನಡೆಯಲಿದೆ. ಅದಕ್ಕಾಗಿ ನಾವೆಲ್ಲರೂ ಸನ್ನದ್ಧರಾಗೋಣ ಎಂದರು.

ಸಂಘದ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ಮತ್ತು ಸಮಾಜ ಸೇವಾ ಕಾರ್ಯ ಚಟುವಟಿಕೆಗಳ ವಾರ್ಷಿಕ ವರದಿಯನ್ನು ಗೌರವ ಕಾರ್ಯದರ್ಶಿ ರಘುರಾಮ್‌ ರೈ ಸಭೆಯ ಮುಂದಿಟ್ಟರು. ಕೋಶಾಧಿಕಾರಿ ಜಗದೀಶ್‌ ಶೆಟ್ಟಿ ಅವರು 2019-2020ನೇ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿ ಅನುಮೋದನೆ ಪಡೆದರು. ಅಯ್ಯಪ್ಪ ಸ್ವಾಮಿಯ ವಾರ್ಷಿಕ ಉತ್ಸವವನ್ನು ಸರಕಾರದ ನಿಯಮಗಳನ್ನು ಪಾಲಿಸಿ, 2021ರ ಜ. 14ರ ಮಕರ ಸಂಕ್ರಾಂತಿಯಂದು ಆಚರಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ವಾರ್ಷಿಕ ಉತ್ಸವ ಆಚರಣೆಯ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ಹರೀಶ್‌ ಭಟ್‌ ಅವರು ವಿವರಣೆ ನೀಡಿದರು.

ಸಮಿತಿ ಸದಸ್ಯರು ಸಲಹೆ-ಸೂಚನೆಗಳನ್ನು ನೀಡಿದರು. ವಿಶ್ವಸ್ಥ ಮಂಡಳಿ ಸದಸ್ಯರು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಮಹಿಳೆಯರು ಸಹಿತ ಹೆಚ್ಚಿನ ಸಂಖ್ಯೆಯ ಭಕ್ತರು ಮಹಾಸಭೆಯಲ್ಲಿ ಪಾಲ್ಗೊಂಡಿದ್ದರು. ಗೌರವ ಕಾರ್ಯದರ್ಶಿ ರಘುರಾಮ್‌ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಸುಧಾಕರ್‌ ಶೆಟ್ಟಿ ವಂದಿಸಿದರು.

 

-ವರದಿ: ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.