ಶ್ರೀ ಬಸವೇಶ್ವರ ಶರಣ ಮಂಡಳ ಡೊಂಬಿವಲಿ: ಶ್ರೀ ಬಸವೇಶ್ವರ ಜಯಂತ್ಯುತ್ಸವ

ಬಸವೇಶ್ವರರು ಸಮಾನತೆಯ ಹರಿಕಾರರು: ಗುರು ಮಹಾಂತ ಸ್ವಾಮೀಜಿ

Team Udayavani, May 15, 2019, 4:12 PM IST

1405MUM04

 

ಡೊಂಬಿವಲಿ: ಲಿಂಗಭೇದ, ಜಾತಿಭೇದವನ್ನು ಅಳಿಸಿ ಇಡೀ ವಿಶ್ವಕ್ಕೆ ಸಮಾನತೆಯ ಪರಿಕಲ್ಪನೆಯನ್ನು ಪರಿಚಯಿಸಿ ಕೊಂಡು ಸಮಾನತೆಯ ಹರಿಕಾರ ಎಂದೆನಿಸಿ ಕೊಂಡ ಮಹಾನ್‌ ಸಾಧಕರು ಜಗಜ್ಯೋತಿ ಬಸವೇಶ್ವರರು ಎಂದು ಇಳಕಲ್‌É ಚಿತ್ತರಗಿ ಸಂಸ್ಥಾನ ಮಠದ ಶ್ರೀ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಅವರು ಮೇ 12ರಂದು ಬೆಳಗ್ಗೆ ಇಲ್ಲಿನ ಗಣೇಶ ಮಂದಿರದ ವಕ್ರತುಂಡ ಸಭಾಗೃಹದಲ್ಲಿ ಶ್ರೀ ಬಸವೇಶ್ವರ ಶರಣ ಮಂಡಳ ಡೊಂಬಿವಲಿ ಆಯೋಜಿಸಿದ ಶ್ರೀ ಬಸವೇಶ್ವರ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಿ ಮಾತನಾಡುತ್ತಿದ್ದರು.

ಜಾತಿ ಮತ, ಮೇಲು ಕೀಳೆಂಬ ಭಾವನೆ ಇವತ್ತಿನವರೆಗೂ ನಮ್ಮ ಮನಸ್ಸಿನಲ್ಲಿ ಮನೆ ಮಾಡಿವೆ. ಇವನ್ನು ನಮ್ಮ ಮನಸ್ಸಿನಿಂದ ಬೇರು ಸಹಿತ ಕಿತ್ತೆಸೆಯಬೇಕಾದರೆ ಬಸವೇಶ್ವರರ ಇಷ್ಟಲಿಂಗ ಯೋಗವೇ ದಿವ್ಯ ಔಷಧಿಯಾಗಿದೆ ಎಂದು ಹೇಳಿದ ಸ್ವಾಮಿಗಳು, ಮಹಿಳೆಯರಿಗೆ ಲಿಂಗದೀಕ್ಷೆ ನೀಡಿದ ಏಕಮೇವ ಸಮಾಜ ಲಿಂಗಾಯತ ಸಮಾಜ. ಹೆಣ್ಣು ಗಂಡೆಂಬ ಭೇದ ಭಾವ ಬೇಡ. ಇಬ್ಬರಲ್ಲೂ ಆತ್ಮ ಒಂದೇ ಆಗಿದ್ದು, ಜಗಜ್ಯೋತಿ ಬಸವೇಶ್ವರರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಜೀವನ ಸಾಗಿಸಬೇಕೆಂದು ಕರೆ ನೀಡಿದರು.

ಇದೇ ಸಮಯದಲ್ಲಿ ಸ್ತ್ರೀ ಕುಲೋದ್ಧಾರಕ ಬಸವಣ್ಣ ವಿಷಯದ ಕುರಿತು ಉಪನ್ಯಾಸ ನೀಡಿದ ಸಾಧಕಿ ಡಾ| ಕಲ್ಯಾಣಮ್ಮ ಲಂಗೋಟಿ ಅವರು, ಅಂದು ಮಹಿಳೆಯರನ್ನು ಕೀಳರಿಮೆಯಿಂದ ನೋಡುತ್ತಿದ್ದ ಕಾಲದಲ್ಲಿ ಮಹಿಳೆಯರು ಧ್ವನಿ ಎತ್ತದೆ ತಮ್ಮ ನೋವುಗಳನ್ನು ಮನಸ್ಸಿನಲ್ಲಿಯೇ ನುಂಗುತ್ತಿದ್ದರು. ದುಡಿಯುವವರು ಕನಿಷ್ಠ ಹಾಗೂ ದುಡಿಯದೇ ಇರುವವರನ್ನು ಶ್ರೇಷ್ಠರೆಂದು ಪರಿಗಣಿಸುವ ಕಾಲದಲ್ಲಿ ಬಸವಣ್ಣನವರು ಜಾತ್ಯತೀತ ಸಮಾಜವನ್ನು ಕಟ್ಟುವುದರ ಜತೆಗೆ ದೀನ ದುಃಖೀತರಿಗೆ ಧ್ವನಿಯಾಗಿದ್ದರು ಎಂದರು.

ಬಸವ ತತ್ವಗಳನ್ನು ಕೇವಲ ಭಾಷಣಕ್ಕಾಗಿ ಮೀಸಲಿಟ್ಟುಕೊಳ್ಳದೆ ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಬಹುದು. ನಮ್ಮ ದೃಷ್ಟಿ ಹಾಗೂ ಆಲೋಚನೆಗಳು ಬದಲಾದಾಗ ಮಾತ್ರ ನಮ್ಮ ಬದುಕು ಬಂಗಾರವಾಗುತ್ತದೆ ಎಂದು ಹೇಳಿ ಶುಭ ಕೋರಿದರು.

ಗೌರವ ಅತಿಥಿಗಳಾಗಿ ಆಗಮಿಸಿದ ಸಾಹಿತಿ ಡಾ| ಸಿದ್ಧಣ್ಣ ಲಂಗೋಟಿ ಬಸವಣ್ಣನವರ ವಚನಗಳನ್ನು ಓದಿ ಅರ್ಥೈಸಿಕೊಳ್ಳುವುದು ಅಷ್ಟೊಂದು ಸುಲಭವಲ್ಲ. ಬಸವ ತತ್ವ ಕಾರ್ಲ್ ಮಾರ್ಕ್ಸ್
ಗಿಂತಲೂ ಶ್ರೇಷ್ಠವಾದದ್ದು. ಆದರೆ, ವಿಪರ್ಯಾಸದ
ಸಂಗತಿ ಎಂದರೆ ಬಸವ ತತ್ವಗಳನ್ನು ಒಪ್ಪಿಕೊಂಡ
ನಾವು ಅವುಗಳನ್ನು ಜೀವನದಲ್ಲಿ ಅಳವಡಿಸಿ
ಕೊಳ್ಳುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸುತ್ತ, ಬಸವ ತತ್ವ ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ದೇಶವಷ್ಟೇ ಅಲ್ಲ ಇಡೀ ವಿಶ್ವವೇ ಪ್ರಗತಿ ಸಾಧಿಸಬಹುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಗಣ್ಯರನ್ನು ಶಾಲು, ಶ್ರೀಫಲ ಮತ್ತು ನೆನಪಿನ ಕಾಣಿಕೆಯನ್ನು ನೀಡಿ ಪದಾಧಿಕಾರಿಗಳು ಗೌರವಿಸಿದರು. ಗಣ್ಯರು ಜ್ಯೋತಿ ಬೆಳಗಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಾಯಕಿ ರಶ್ಮಿ ಕಾಖಂಡಕಿ ವಚನ ಗಾಯನವನ್ನು ಪ್ರಸ್ತುತಪಡಿಸಿದರು.

ವೇದಿಕೆಯಲ್ಲಿ ಗಣ್ಯರಾದ ಶ್ರೀ ಗುರು ಮಹಾಂತ ಸ್ವಾಮೀಜಿ, ಡಾ ಸಿದ್ದಣ್ಣ ಲಂಗೋಟಿ, ಡಾ| ಕಲ್ಯಾಣಮ್ಮ ಲಂಗೋಟಿ, ಜಯಶ್ರೀ ತೋಡಕರ್‌, ಎಸ್‌. ಎನ್‌. ಸೋಮಾ, ಆರ್‌. ಎಂ. ಹೊಸಕೋಟಿ ಉಪಸ್ಥಿತರಿದ್ದರು. ದೂರದರ್ಶನ ಮುಂಬಯಿಯ ನಿವೃತ್ತ ಅಧಿಕಾರಿ ಶರಣ ಬಿರಾಜಾªರ್‌, ಅನ್ನದಾಸೋಹ ನೀಡಿದ ಮಲ್ಲಿಕಾರ್ಜುನ ಬಿರಾದರ ದಂಪತಿಗಳನ್ನು ಸ್ವಾಮಿಗಳು ಶಾಲು, ಶ್ರೀಫಲ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಸಂಸ್ಥೆಯ ಉಪಾಧ್ಯಕ್ಷೆ ಜಯಶ್ರೀ ತೋಡಕರ್‌ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಎಂ. ಆರ್‌. ಹೊಸಕೋಟಿ ವಂದಿಸಿದರು. ವೀರಣ್ಣ ಕನವಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಎಂ. ಜಿ. ಗವಿಮಠ, ಜಿ.ಬಿ. ಮಠಪತಿ, ನ್ಯಾಯವಾದಿ ಜಿ. ಎ. ಪಾಟೀಲ್‌, ಉಷಾ ಪಾಟೀಲ್‌, ರಾಜಶ್ರೀ ಚಿನವಳ್ಳಿ, ಸೋಮಶೇಖರ ಮಸಳಿ ಸಹಕರಿಸಿದರು. ಸಮಾರಂಭದಲ್ಲಿ ಬಸವ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಚಿತ್ರ, ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.