ರಾವಲ್ಪಾಡಾದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಧಾರ್ಮಿಕ ಸಭೆ


Team Udayavani, Feb 13, 2018, 3:30 PM IST

1002mum01.jpg

ಮುಂಬಯಿ: ನೈತಿಕ, ಸಿದ್ಧಾಂತ, ಸನ್ನಡೆಯಿಂದ ಬಾಳಲು ದೇವಸ್ಥಾನಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಜರಗುವ ಪೂಜಾ ಕೈಂಕರ್ಯ, ಪ್ರವಚನ, ಭಜನೆ ಇತ್ಯಾದಿಗಳು ಆತ್ಮಸ್ಥೈರ್ಯವನ್ನು ಹೆಚ್ಚಿಸಿ ಧನಾತ್ಮಕ ಚಿಂತನೆಯನ್ನು ಮೂಡಿಸುತ್ತವೆ. ದೇವಸ್ಥಾನಗಳು ಊರಿನ ಅಭಿವೃದ್ಧಿಯನ್ನು ಪ್ರೇರೇಪಿಸುತ್ತದೆ ಎಂದು ದಹಿಸರ್‌ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಜಿ. ಶೆಟ್ಟಿ ನುಡಿದರು.

ಫೆ. 3ರಂದು ದಹಿಸರ್‌ ಪೂರ್ವದ ರಾವಲ್ಪಾಡಾದ ಶ್ರೀ ದುರ್ಗಾಪರಮೇಶ್ವರಿ, ಶ್ರೀ ಶನೀಶ್ವರ ದೇವಸ್ಥಾನದ 32ನೇ ವಾರ್ಷಿಕ ಮಹಾಪೂಜೆ, ಬಲಿ ಉತ್ಸವ, ಕಟ್ಟೆಪೂಜೆ, ಧಾರ್ಮಿಕ ಸಭೆ, ಸಮ್ಮಾನ-ಸಾಂಸ್ಕೃತಿಕ ಕಾರ್ಯ

ಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಅವರು, ಧಾರ್ಮಿಕ ಸೇವಾ ಕಾರ್ಯದೊಂದಿಗೆ ಪರಿಸರದ ಮಕ್ಕಳ ಶಿಕ್ಷಣಕ್ಕಾಗಿ ನೆರವು ನೀಡಿ ಗೌರವಿಸುತ್ತಿರುವುದು ಶ್ಲಾಘನೀಯವಾಗಿದೆ. ದೇವರ ಹಾಗೂ ಮಾತಾಪಿತರ ಸೇವೆಯಿಂದ ನಮ್ಮ ಜೀವನವನ್ನು ಸಾರ್ಥಕಗೊಳಿಸಿ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ ವಿನಂತಿಸಿದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ಪ್ರಗತಿಗಾಗಿ ಸಹಕರಿಸಿದ ಕೃಷ್ಣ ಆಚಾರ್ಯ, ದಂಪತಿ ಮತ್ತು ರಾಜ್‌ಕುಮಾರ್‌ ಎ. ಪೂಜಾರಿ ಅವರನ್ನು ಗಣ್ಯರು ಸಮ್ಮಾನಿಸಿದರು. ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಅಂಧೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್‌ ಶಾಂತಿ, ಭಾರತ್‌ ಬ್ಯಾಂಕ್‌ನ ನಿರ್ದೇಶಕ ದಾಮೋದರ್‌ ಕುಂದರ್‌, ಜಯಲಕ್ಷ್ಮೀ ಕೋ. ಆಪರೇಟಿವ್‌ ಸೊಸೈಟಿಯ ಕಾರ್ಯಾಧ್ಯಕ್ಷ ರಂಗಪ್ಪ ಗೌಡ ಅವರು ಮಾತನಾಡಿ ಶುಭ ಹಾರೈಸಿದರು.

ಸಮಾಜ ಸೇವಕ, ಮಲಾಡ್‌ ಶ್ರೀ ದುರ್ಗಾ ಪರಮೇಶ್ವರಿ ಮಂದಿರದ ಅಧ್ಯಕ್ಷ ಶೇಖರ್‌ ಕೆ. ಪೂಜಾರಿ, ಸಮಿತಿಯ ಅಧ್ಯಕ್ಷ ಸಿ. ಎನ್‌. ಪೂಜಾರಿ, ಕಾರ್ಯ ದರ್ಶಿ ಜಯರಾಮ್‌ ಎನ್‌. ಮೆಂಡನ್‌, ಕೋಶಾಧಿಕಾರಿ ದೀಪಕ್‌ ಕೆ. ಪೂಜಾರಿ ಅವರು ಉಪಸ್ಥಿತರಿದ್ದರು. ಪದಾಧಿಕಾರಿಗಳಾದ ಚಂದ್ರ ಶೇಖರ ಪೂಜಾರಿ, ಪ್ರಕಾಶ್‌ ಅಮೀನ್‌, ರವಿ ಎಂ. ಅಮೀನ್‌ ಅವರನ್ನು ಗಣ್ಯರನ್ನು ಗೌರವಿಸಿದರು. ಲಕ್ಷ್ಮಣ್‌ ಪೂಜಾರಿ ಸಮ್ಮಾನಿತರನ್ನು ಪರಿಚಯಿಸಿ ದರು. ಚಲನಚಿತ್ರ ಮತ್ತು ರಂಗನಟ ಜಿ. ಕೆ. ಕೆಂಚನಕೆರೆ ಅವರು ನಿರ್ವಹಿಸಿ ವಂದಿಸಿದರು. ಬ್ರಹ್ಮಶ್ರೀ ಶಂಕರ ನಾರಾಯಣ ತಂತ್ರಿ, ಗುರು ಶಂಕರ್‌ ಭಟ್‌, ಶಂಕರ್‌ ಗುರು ಭಟ್‌ ಅವರ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಸುರೇಶ್‌ ಭಟ್‌ ಕುಂಟಾಡಿ ಇವರಿಂದ ದೇವರ ಬಲಿ ಉತ್ಸವ  ಮೂರ್ತಿಯೊಂದಿಗೆ ಕಟ್ಟೆಪೂಜೆ ನಡೆಯಿತು. ದೇವಿ ಪಾತ್ರಿ ಸಿ.ಎನ್‌. ಪೂಜಾರಿ ಅವರಿಂದ ದೇವಿ ಆವೇಶ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮಕ್ಕಳಿಂದ ನೃತ್ಯ ವೈಭವ, ಸಿ. ಎನ್‌. ಪೂಜಾರಿ ಅವರ ಸೇವಾರ್ಥಕವಾಗಿ ಗುರುನಾರಾಯಣ ಯಕ್ಷಗಾನ ಮಂಡಳಿಯವರಿಂದ ಶಬರಿಮಲೆ ಶ್ರೀ ಅಯ್ಯಪ್ಪ ಯಕ್ಷಗಾನ ಬಯಲಾಟ ಪ್ರದರ್ಶನ ಗೊಂಡಿತು. ಅಪರಾಹ್ನ ಹಾಗೂ ರಾತ್ರಿ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನೆರವೇರಿತು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.