ಪುಣೆ ಶ್ರೀ ಗುರುದೇವ ಸೇವಾ ಬಳಗ ಶ್ರೀ ಹನುಮ ಜಯಂತಿ ಆಚರಣೆ


Team Udayavani, Apr 3, 2018, 4:01 PM IST

0204mum07b.jpg

ಪುಣೆ: ಶ್ರೀ  ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ  ಹನುಮ ಜಯಂತಿ ಆಚರಣೆಯು ಪುಣೆ ಶ್ರೀ  ಗುರುದೇವ ಸೇವಾ ಬಳಗದ ಸಲಹೆಗಾರ, ಮಾಜಿ ಅಧ್ಯಕ್ಷ ನಾರಾಯಣ ಕೆ.  ಶೆಟ್ಟಿ  ನೇತೃತ್ವದಲ್ಲಿ  ಹಡಪ್ಸರ್‌ ಭೋಸ್ಲೆ ನಗರದ ಅಮರ್‌ ಕಾಟೇಜ್‌,  ಸಾಯಿ ನಿಲಯ 123 ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ  ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಸಂಜೆ ವೇ|ಮೂ|   ಹರೀಶ್‌  ಐತಾಳ್‌ ಇವರ ನೇತೃತ್ವದಲ್ಲಿ ಶ್ರೀ ರಾಮಾಂಜನೇಯ ಕಲೊ³àಕ್ತ ಪೂಜೆ ಜರಗಿತು. ಪ್ರಖ್ಯಾತ್‌ ಶೆಟ್ಟಿ ಮತ್ತು ಸ್ನೇಹಲ್‌ ಪ್ರಖ್ಯಾತ್‌ ಶೆಟ್ಟಿ ದಂಪತಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.  ಬಳಗದ ಭಜನ ಪ್ರಮುಖರಾದ ದಾಮೋದರ ಬಂಗೇರ ಇವರ ಮಾರ್ಗದರ್ಶನದಲ್ಲಿ ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗೂ ಶ್ರೀ  ಗುರುದೇವ ಸೇವಾ ಬಳಗದ ಸದಸ್ಯರಿಂದ  ಭಜನ ಕಾರ್ಯಕ್ರಮ  ನಡೆಯಿತು.

ಅನಂತರ ಸೇರಿದ ಎಲ್ಲ  ಭಕ್ತರ ಸಮ್ಮುಖದಲ್ಲಿ  ಹನುಮಾನ್‌ ಚಾಲಿಸ್‌ ಹಾಗೂ ರಾಮಸ್ತೋತ್ರ ಪಠಿಸಲಾಯಿತು.  ಮಹಾಪೂಜೆ, ಮಂಗಳಾರತಿ,  ಪ್ರಸಾದ  ವಿತರಣೆ ಜರಗಿತು. ಸುಧಾ ನಾರಾಯಣ  ಶೆಟ್ಟಿ ದಂಪತಿ, ಬಳಗದ ಅಧ್ಯಕ್ಷ ಸದಾನಂದ ಶೆಟ್ಟಿ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಪ್ರೇಮಾ ಎಸ್‌. ಶೆಟ್ಟಿ ಮತ್ತು ಸದಸ್ಯರು  ಶ್ರೀ ಹನುಮಾನ್‌ ದೇವರ ಅಲಂಕೃತ ಮಂಟಪಕ್ಕೆ  ಮಹಾಮಂಗಳಾರತಿಗೈದರು.

ಪುಣೆ ಶ್ರೀ ಗುರುದೇವ ಸೇವಾ ಬಳಗದ  ಅಧ್ಯಕ್ಷ ಸದಾನಂದ ಕೆ. ಶೆಟ್ಟಿ ಇವರು ಹನುಮ ಜಯಂತಿಯ ವಿಶೇಷತೆ, ಹನುಮ ಸೇವೆ ಹಾಗೂ ಗುರುದೇವಾ ಸೇವಾ ಬಳಗದ ಸೇವಾ ಕಾರ್ಯಗಳ  ಬಗ್ಗೆ ಸಭೆಗೆ   ತಿಳಿಸಿದರು. ತ್ಯಾಗ ಮತ್ತು ಸೇವೆಗೆ ನಾವು  ಹನುಮಾನ್‌ ದೇವರನ್ನು ಮೊದಲಾಗಿ ಸ್ಮರಿಸುತ್ತೇವೆ. ಧೈರ್ಯ, ಸಾಹಸದಿಂದ ಯಾವುದೇ ಕಾರ್ಯಸಾಧನೆ ಸಾಧ್ಯ. ಜೀವನದಲ್ಲಿ ನಮ್ಮಲ್ಲಿ ಕೂಡ ನಾವು ನಮ್ಮಿಂದಾಗುವ  ಸೇವಾ  ಕಾರ್ಯಗಳನ್ನು ಮಾಡುವಂತಹ ಪರಂಪರೆಯನ್ನು ರೂಢಿಸಿಕೊಳ್ಳಬೇಕು. ಒಡಿಯೂರು ಶ್ರೀಗಳು ಇಂದು ಸಮಾಜಮುಖೀ  ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿಯ  ಸಂಕಲ್ಪವನ್ನು ತೊಟ್ಟು ಸೇವಾ ಕಾರ್ಯಗಳನ್ನು  ಮಾಡುತ್ತಿ¨ªಾರೆ.  ಅವರ ಸೇವಾ ಕಾರ್ಯಗಳಲ್ಲಿ ನಾವೆಲ್ಲರೂ ಭಾಗಿಯಾಗಬೇಕು. ಸಮಾಜ ಸೇವೆಯಿಂದ ಆತ್ಮತೃಪ್ತಿ ದೊರಕುತ್ತದೆ. ನಾವು   ಶುದ್ಧ ಮನಸ್ಸಿನಿಂದ ಭಕ್ತಿ ಭಾವದಿಂದ ಮಾಡುವ ಪ್ರತಿಯೊಂದು ಧಾರ್ಮಿಕ ಕಾರ್ಯಗಳು   ಭಗವಂತನಿಗೆ ಪ್ರಿಯವಾಗುತ್ತವೆ ಎಂದು ನುಡಿದು, ಹನುಮ ಜಯಂತಿಯ  ಪೂಜಾ ಕಾರ್ಯದ ವ್ಯವಸ್ಥಾಪನೆಗೈದ ಸುಧಾ ಎನ್‌. ಶೆಟ್ಟಿ ಮತ್ತು ನಾರಾಯಣ ಶೆಟ್ಟಿ ದಂಪತಿಗೆ ಹಾಗೂ ಬಳಗದ  ಮುಖಾಂತರ ಮಾಡುವ ನಮ್ಮ ಧಾರ್ಮಿಕ, ಸಾಮಾಜಿಕ ಸೇವೆಯಿಂದ 

ನಮಗೆಲ್ಲರಿಗೂ ಶ್ರೇಯೋಭಿವೃದ್ಧಿಯನ್ನು ಭಗವಂತ ಕರುಣಿಸಲಿ  ಎಂದು ಆಶಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಕೊನೆಯಲ್ಲಿ ಪ್ರಸಾದ ರೂಪದಲ್ಲಿ ಅನ್ನದಾನ ನೆರವೇರಿತು. ಶ್ರೀ ಗುರುದೇವ ಬಳಗದ ಪ್ರಮುಖರಾದ   ಪುಣೆ ಬಳಗದ ಮಾಜಿ ಅಧ್ಯಕ್ಷ, ಸಲಹೆಗಾರ  ಉಷಾ ಕುಮಾರ್‌ ಶೆಟ್ಟಿ, ಪ್ರಭಾಕರ ಶೆಟ್ಟಿ ತಮನ್ನ, ವಿಜಯ ಶೆಟ್ಟಿ, ಶಿವರಾಮ ಶೆಟ್ಟಿ ಸಾಯಿ ಸಾಗರ್‌, ಶೇಖರ್‌ ಶೆಟ್ಟಿ ಯಾತ್ರಿಕ್‌, ವಿಟuಲ್‌ ಶೆಟ್ಟಿ ಪೂನಾ ಕೆಫೆ, ಸುಧಾಕರ್‌ ಶೆಟ್ಟಿ ಕೆಇಎಂ, ನಾರಾಯಣ ಶೆಟ್ಟಿ, ವಿಟuಲ್‌ ಶೆಟ್ಟಿ, ಸತೀಶ್‌ ರೈ, ಸುಧೀರ್‌ ಶೆಟ್ಟಿ,  ಉಮೇಶ್‌ ಶೆಟ್ಟಿ, ನಾಗರಾಜ್‌ ಶೆಟ್ಟಿ, ಸುರೇಶ್‌  ಶೆಟ್ಟಿ, ಜಗದೀಶ್‌ ಹೆಗ್ಡೆ, ಬಾಲಕೃಷ್ಣ ಶೆಟ್ಟಿ ಮತ್ತು ಸದಸ್ಯರು ಹಾಗೂ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಪ್ರಮುಖರಾದ  ವೀಣಾ ಪಿ. ಶೆಟ್ಟಿ, ಜಯಲಕ್ಷ್ಮೀ ಪಿ. ಶೆಟ್ಟಿ, ಶೋಭಾ ಯು. ಶೆಟ್ಟಿ, ಸರೋಜಿನಿ ಬಂಗೇರ, ಲೀಲಾ ಶೆಟ್ಟಿ, ಶಾರದಾ ಹೆಗ್ಡೆ, ಸುಜಾತಾ ಶೆಟ್ಟಿ, ಉಷಾ ಯು. ಶೆಟ್ಟಿ, ಶ್ವೇತಾ ಎಚ್‌. ಎಂ., ಸೋನಿ ಶೆಟ್ಟಿ, ಸ್ವರ್ಣಲತಾ ಜೆ. ಹೆಗ್ಡೆ  ಹಾಗೂ ಹೆಚ್ಚಿನ ಸಂಖ್ಯೆಯ  ಭಕ್ತರು ಉಪಸ್ಥಿತರಿದ್ದರು.

ಚಿತ್ರ- ವರದಿ: ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.