ಪುಣೆ ಶ್ರೀ ಗುರುದೇವ ಸೇವಾ ಬಳಗದಿಂದ ಶ್ರೀ ಹನುಮ ಜಯಂತಿ


Team Udayavani, Apr 23, 2019, 2:26 PM IST

2104MUM04

ಪುಣೆ: ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ ವಾರ್ಷಿಕ ಶ್ರೀ ಹನುಮ ಜಯಂತಿ ಆಚರಣೆಯು ಎ. 19ರಂದು ಪುಣೆಯ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಸದಾನಂದ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಬಾಲೆವಾಡಿಯಲ್ಲಿರುವ ಮಾರ್ವಲ್‌ ಕಾಸ್ಕಾಡದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಹನುಮ ಜಯಂತಿಯ ವಿಶೇಷ ಆಚರಣೆಯ ಪ್ರಯುಕ್ತ ಪೂರ್ವಾಹ್ನ 11ರಿಂದ ಬಳಗದ ಭಜನಾ ಪ್ರಮುಖರಾದ ದಾಮೋದರ ಬಂಗೇರ ಅವರ ಮಾರ್ಗದರ್ಶನದಲ್ಲಿ ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗೂ ಶ್ರೀ ಗುರುದೇವ ಸೇವಾ ಬಳಗದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಆನಂತರ ಸೇರಿದ ಎÇÉಾ ಭಕ್ತಾಭಿಮಾನಿಗಳ ಸಮ್ಮುಖದಲ್ಲಿ ಹನುಮಾನ್‌ ಚಾಲೀಸ್‌ನ್ನು ಸಾಮೂಹಿಕವಾಗಿ ಪಠಿಸಲಾಯಿತು.

ಶ್ರೀ ಸದಾನಂದ ಶೆಟ್ಟಿ ಅವರು ರಾಮ ಸ್ತೋತ್ರವನ್ನು ವಾಚಿಸಿದರು. ಮಧ್ಯಾಹ್ನ ಹನುಮ ಪೂಜೆ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಈ ಧಾರ್ಮಿಕ ಕಾರ್ಯಕ್ರಮದ ಸೇವಾಕರ್ತರಾದ ಸದಾನಂದ ಶೆಟ್ಟಿ ಮತ್ತು ಇಂದಿರಾ ಎಸ್‌. ಶೆಟ್ಟಿ ದಂಪತಿ, ವಿಕ್ರಂರಾಜ್‌ ಶೆಟ್ಟಿ ದಂಪತಿ ಮತ್ತು ಜ್ಯೋತಿ ಶೆಟ್ಟಿ ಅವರು ಮಹಾ ಮಂಗಳಾರತಿಗೈದರು. ಸೇರಿದ ಸದಸ್ಯರು ಶ್ರೀ ಹನುಮಾನ್‌ ದೇವರ ಅಲಂಕೃತ ಮಂಟಪಕ್ಕೆ ಆರತಿಗೈದರು.

ಈ ಸಂದರ್ಭದಲ್ಲಿ ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಸದಾನಂದ ಕೆ. ಶೆಟ್ಟಿ ಅವರು ಮಾತನಾಡಿ, ರಾಮ ನವಮಿಯಿಂದ ಹನುಮ ಜಯಂತಿಯವರೆಗಿನ ಸಪ್ತಾಹವು ಬಹಳ ವಿಶೇಷತೆಯಿಂದ ಕೂಡಿದೆ. ಶ್ರೀ ರಾಮಾಂಜನೇಯ ಜಯಂತಿಯನ್ನು ನಾವೆಲ್ಲರೂ ಒಂದಾಗಿ ಪ್ರತಿ ವರ್ಷವೂ ಆಚರಿಸಿಕೊಂಡು ಬರುತ್ತಿದ್ದೇವೆ. ಸೇವೆ ಎಂದರೆ ಹನುಮ-ಹನುಮ ಎಂದರೆ ಸೇವೆ ಎಂಬ ಮಾತಿನಂತೆ ನಮ್ಮಲ್ಲಿ ಜನಸೇವಾ ಮನೋಧರ್ಮ ಇರಬೇಕು. ತ್ಯಾಗ ಮತ್ತು ಸೇವೆಗೆ ನಾವು ಶ್ರೀ ಹನುಮಾನ್‌ ದೇವರನ್ನು ಮೊದಲಾಗಿ ಸ್ಮರಿಸುತ್ತೇವೆ. ಧೈರ್ಯ, ಸಾಹಸದಿಂದ ಯಾವುದೇ ಕಾರ್ಯ ಸಾಧನೆ ಸಾಧ್ಯ. ಜೀವನದಲ್ಲಿ ನಾವು ನಮ್ಮಿಂದಾಗುವ ಸೇವಾ ಕಾರ್ಯಗಳನ್ನು ಮಾಡುವಂತಹ ಪರಂಪರೆಯನ್ನು ರೂಢಿಸಿಕೊಳ್ಳಬೇಕು. ಶ್ರೀ ಗುರುದೇವ ಸೇವಾ ಬಳಗದ ಮೂಲಕ ಸೇವಾ ಕಾರ್ಯಗಳು ಒಡಿಯೂರು ಶ್ರೀಗಳ ಮುಖಾಂತರ ಆಗುತ್ತಿದ್ದು, ಅವರ ಸೇವಾ ಕಾರ್ಯಗಳಲ್ಲಿ ನಾವೆಲ್ಲರೂ ಭಾಗಿಯಾಗಬೇಕು. ಸಮಾಜ ಸೇವೆಯಿಂದ ಆತ್ಮತೃಪ್ತಿ ದೊರಕುತ್ತದೆ. ನಾವು ಶುದ್ಧ ಮನಸ್ಸಿನಿಂದ ಭಕ್ತಿ ಭಾವದಿಂದ ಮಾಡುವ ಪ್ರತಿಯೊಂದು ಧಾರ್ಮಿಕ ಕಾರ್ಯಗಳು ಭಗವಂತನಿಗೆ ಪ್ರಿಯವಾಗುತ್ತವೆ. ಇಂತಹ ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಮತ್ತು ಅದರಲ್ಲಿ ಪಾಲು ಪಡೆಯುವುದರಿಂದ ನಮ್ಮ ಜೀವನದಲ್ಲಿ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ನುಡಿದರು.

ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಭಗವಾನ್‌ ಶ್ರೀ ಮಾರುತಿ ಕೃಪೆಗೆ ಪಾತ್ರರಾದರು. ಕೊನೆಯಲ್ಲಿ ಪ್ರಸಾದ ರೂಪದಲ್ಲಿ ಅನ್ನದಾನ ನೆರವೇರಿತು. ಶ್ರೀ ಗುರುದೇವ ಬಳಗದ ಪ್ರಮುಖರಾದ ಪುಣೆ ಬಳಗದ ಮಾಜಿ ಅಧ್ಯಕ್ಷರು ಹಾಗೂ ಸಲಹೆಗಾರರುಗಳಾದ ಉಷಾ ಕುಮಾರ್‌ ಶೆಟ್ಟಿ, ನಾರಾಯಣ ಕೆ. ಶೆಟ್ಟಿ, ಪ್ರಭಾಕರ ಶೆಟ್ಟಿ ತಮನ್ನ, ವಿಜಯ ಶೆಟ್ಟಿ, ಜಗದೀಶ್‌ ಹೆಗ್ಡೆ ಮತ್ತು ಬಳಗದ ಸದಸ್ಯರು ಹಾಗೂ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಪ್ರಮುಖರಾದ ವೀಣಾ ಪಿ. ಶೆಟ್ಟಿ, ಶೋಭಾ ಯು. ಶೆಟ್ಟಿ, ಸುಧಾ ಎನ್‌. ಶೆಟ್ಟಿ, ಪುಷ್ಪಾ ಪೂಜಾರಿ, ಸರೋಜಿನಿ ಬಂಗೇರ, ಸಂಧ್ಯಾ ಶೆಟ್ಟಿ, ರಜನಿ ಹೆಗ್ಡೆ, ಶೋಭಾ ಆಳ್ವ, ಸ್ವರ್ಣಲತಾ ಜೆ. ಹೆಗ್ಡೆ, ಸ್ನೇಹಲತಾ ಆರ್‌. ಶೆಟ್ಟಿ, ಶ್ವೇತಾ ಎಚ್‌. ಎಂ. ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಚಿತ್ರ-ವರದಿ: ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.