ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಐದನೇ ದಿನದ ಕಾರ್ಯಕ್ರಮ

ದೇವಾಲಯಗಳು ಸಂಸ್ಕೃತಿಯ ಪೋಷಕ ಸ್ಥಳವಾಗಿದೆ: ಪ್ರದೀಪ್‌ ಶೆಟ್ಟಿ

Team Udayavani, Jun 6, 2019, 3:31 PM IST

0506MUM17A

ಮುಂಬಯಿ: ತುಳುನಾಡಿನ ಅಧ್ಯಾತ್ಮಿಕ ಚಿಂತನೆಗಳನ್ನು, ಸಾಂಸ್ಕೃತಿಕ ವೈಭವಗಳನ್ನು ಮಹಾರಾಷ್ಟ್ರದ ನೆಲದಲ್ಲಿ ಪಸರಿಸಿದ ಬೊರಿವಲಿ ಪಶ್ಚಿಮದ ಜೈರಾಜ್‌ ನಗರದಲ್ಲಿರುವ ಶ್ರೀ ಮಹಿಷಮರ್ದಿನಿ ದೇವಸ್ಥಾನ ಪವಿತ್ರ ಸ್ಥಳವಾಗಿ ಬಿಂಬಿತವಾಗಿದೆ. ನೂತನ ಶಿಲಾಮಯದ ಗರ್ಭಗುಡಿ, ಸ್ವರ್ಣ ಲೇಪಿತ ತೀರ್ಥಮಂಟಪ, ಆಕರ್ಷಕ ಕೆತ್ತನೆಯ ಶಿಲಾಕೃತಿಗಳು ಭಕ್ತರ ಸಂತೃಪ್ತಿಯನ್ನು ದ್ವಿಗುಣಗೊಳಿಸಿವೆ. ಶಿಲ್ಪಶಾಸ್ತ್ರ, ವಾಸ್ತು ಶಾಸ್ತ್ರ ಆಗಮ ಶಾಸ್ತ್ರಗಳಿಂದ ರಚಿಸಲ್ಪಟ್ಟ ದೇವಾಲಯಗಳು ಸಂಸ್ಕೃತಿಯ ಪೋಷಕ ಸ್ಥಳಗಳಾಗಿವೆ ಎಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಣಂಜಾರು ಕೊಳಕೆಬೈಲು ಪ್ರದೀಪ್‌ ಸಿ. ಶೆಟ್ಟಿ ತಿಳಿಸಿದರು.

ಜೂ. 4ರಂದು ಬೊರಿವಲಿ ಪಶ್ಚಿಮ ವಜೀರ್‌ನಾಕಾ, ಜೈರಾಜ್‌ ನಗರದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್‌ ಇದರ ಶ್ರೀ ಮಹಿಷಮರ್ದಿನಿ ದೇವಸ್ಥಾನದ 29ನೇ ವಾರ್ಷಿಕ ಮಹೋತ್ಸವದ 5ನೇ ದಿನದಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶ್ರೀಕ್ಷೇತ್ರದ ಪರಿವಾರ ದೇವರಾದ ಶ್ರೀ ಗಣಪತಿ, ಶ್ರೀ ಮುಖ್ಯಪ್ರಾಣ, ವಾಸುಕೀ ನಾಗರಾಜ, ನವಗ್ರಹ, ಧರ್ಮದೈವ ಕೊಡಮಣಿತ್ತಾಯ ದೈವಗಳ ಅರಾಧನೆ, ತುಲಾಭಾರ ಸೇವೆ, ಆಶ್ಲೇಷ ಬಲಿ, ತನು ತಂಬಿಲ ಸೇವೆ, ಇತ್ಯಾದಿಗಳ ಸೇವೆಯು ಶ್ರೀ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದ ಅವರು ಅತಿಥಿ ಗಣ್ಯರನ್ನು ಪ್ರಸಾದ ನೀಡಿ ಗೌರವಿಸಿದರು.

ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿ, ಬೆಳ್ಮಣ್‌ ವೆಂಕಟರಮಣ ತಂತ್ರಿ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಕವಾಟೋದ್ಘಾಟನೆ, ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ, ಶ್ರೀ ಮಹಿಷಮರ್ದಿನಿ ಭಜನ ಮಂಡಳಿಯವರಿಂದ ಭಜನೆ, ಪೂರ್ವಾಹ್ನ ಮಹಾಪೂಜೆ, ಚೂರ್ಣೋತ್ಸವ ಹರಿವಾಣ ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.

ಸಂಜೆಯ ಯಾತ್ರಾಹೋಮ ಬಳಿಕ ರಾತ್ರಿ ಉತ್ಸವ ಬಲಿ, ಪಲ್ಲಕಿ ಉತ್ಸವ, ಅವಭೃತ ಯಾತ್ರಾ ಮಹೋತ್ಸವ, ಧರ್ಮದೈವ ಕೊಡಮಣಿತ್ತಾಯ ದರ್ಶನದೊಂದಿಗೆ ದೇವರ ಭೇಟಿ, ಹರಿವಾಣ ಕಾಣಿಕೆ, ಕಟ್ಟೆ ಪೂಜೆ ಜರಗಿತು. ಈ ಸಂದರ್ಭದಲ್ಲಿ ಸ್ಥಾಪಕ ವಂಶಸ್ಥ ಮೊಕ್ತೇಸರರಾದ ಜಯರಾಜ ಶ್ರೀಧರ ಶೆಟ್ಟಿ ಕಲ್ಲಮುಂಡ್ಕೂರು ಹರಿಯಾಳಗುತ್ತು, ಮೊಕ್ತೇಸರರಾದ ಜಯಪಾಲಿ ಅಶೋಕ ಶೆಟ್ಟಿ, ಶಾಲಿನಿ ಪ್ರದೀಪ್‌ ಶೆಟ್ಟಿ, ಸಪ್ನಾ ಶೆಟ್ಟಿ, ಮುಂಡಪ್ಪ ಎಸ್‌. ಪಯ್ಯಡೆ, ಬಾಲಕೃಷ್ಣ ರೈ, ಪೇಟೆ ಮನೆ ಪ್ರಕಾಶ ಶೆಟ್ಟಿ, ಪೇಟೆಮನೆ ರವೀಂದ್ರ ಶೆಟ್ಟಿ, ಸತೀಶ್‌ ಶೆಟ್ಟಿ, ಜಯಂತ್‌ ಶೆಟ್ಟಿ, ಅಮೃತಾ ಶೆಟ್ಟಿ, ಜಿ. ಎಂ. ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ, ಆರ್ಚಕ ವೃಂದ, ಭಜನ ಮಂಡಳಿ, ಪರಿಸರದ ಗಣ್ಯರು ಸಹಕರಿಸಿದರು. ರಾಜಕೀಯ ನೇತಾರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮುದಾಯ ಸಂಘಟನೆ ಗಳ ಪ್ರತಿನಿಧಿಗಳು, ಉದ್ಯಮಿಗಳು, ತುಳು ಕನ್ನಡಿಗರು, ಕನ್ನಡೇತರರು ಅಪಾರ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.