ಶ್ರೀ ಮೂಕಾಂಬಿಕಾ ಸೋಶಿಯಲ್‌ ವೆಲ್ಫೇರ್‌ ಫೌಂಡೇಷನ್‌: ಆರೋಗ್ಯ ಶಿಬಿರ


Team Udayavani, Jun 9, 2017, 4:43 PM IST

22.jpg

ಡೊಂಬಿವಲಿ: ನಗರದಲ್ಲಿ ನೂತನವಾಗಿ ಸ್ಥಾಪನೆಗೊಂಡ ಶ್ರೀ ಮೂಕಾಂಬಿಕಾ ಸೋಶಿಯಲ್‌ ವೆಲ್ಫೇರ್‌ ಫೌಂಡೇಷನ್‌ ವತಿಯಿಂದ ಆರೋಗ್ಯ ತಪಾಸಣ ಶಿಬಿರವು ಜೂ. 4ರಂದು ನಗರದ ಪ್ರಗತಿ ಕಾಲೇಜಿನ ಎದುರುಗಡೆಯಿರುವ ದತ್ತ ನಗರ ಗಾರ್ಡನ್‌ ಸಭಾಗೃಹದಲ್ಲಿ ಜರಗಿತು.

ಶಿಬಿರವನ್ನು ಕಲ್ಯಾಣ್‌ ಜಿಲ್ಲಾ ಶಿವಸೇನ ಪ್ರಮುಖ ಗೋಪಾಲ ಲಾಂಡೆY ಅವರು ಉದ್ಘಾಟಿಸಿ ಮಾತನಾಡಿ, ಶಿವಸೇನ ಸೌತ್‌ ಇಂಡಿಯನ್‌ ಸೆಲ್‌ನ ಕಾರ್ಯಕರ್ತರು ಸಂಸ್ಥೆಯ ವತಿಯಿಂದ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಪ್ರಸ್ತುತ ಆರೋಗ್ಯ ತಪಾಸಣ ಶಿಬಿರವನ್ನು ಆಯೋಜಿಸಿದ್ದು, ಶಿಬಿರದ ಲಾಭವನ್ನು ಎಲ್ಲರೂ ಪಡೆಯಬೇಕು. ನಮ್ಮ ಆರೋಗ್ಯ ಭಾಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಆರೋಗ್ಯ ಭಾಗ್ಯವಿದ್ದರೆ ಯಾವ ಕಾರ್ಯವನ್ನು ಬೇಕಾದರೂ ಮಾಡಬಹುದು. ಇಂತಹ ಕಾರ್ಯಕ್ರಮಗಳಿಗೆ ಶಿವಸೇನೆಯಿಂದ ಎಲ್ಲಾ ರೀತಿಯ ಸಹಕಾರ ದೊರೆಯ
ಲಿದೆ. ಈ ಸಂಸ್ಥೆಯಿಂದ ಇನ್ನಷ್ಟು ಸಮಾಜಪರ ಕಾರ್ಯಕ್ರಮಗಳು ಜರಗುವಂತಾಗಲಿ ಎಂದರು.

ಶಿವಸೇನಾ ತಾಲೂಕು ಪ್ರಮುಖರಾದ ಬಾವು ಸಾಹೇಬ್‌ ಚೌಧರಿ ಮಾತನಾಡಿ, ಶಿವಸೇನೆಯ ಸೌತ್‌ ಸೆಲ್‌ರ ಕಾರ್ಯಕರ್ತರ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತಿದೆ. ಇಂತಹ ಆರೋಗ್ಯ ಶಿಬಿರಗಳಿಂದ ಆರ್ಥಿಕವಾಗಿ ಹಿಂದುಳಿದವರಿಗೆ ಸಹಕಾರಿಯಾಗುತ್ತದೆ. ಈ ನೂತನ ಸಂಸ್ಥೆಯಿಂದ ಇನ್ನಷ್ಟು ಸಮಾಜಪರ ಕಾರ್ಯಗಳು ನಡೆದು ಉನ್ನತ ಮಟ್ಟಕ್ಕೆ ಏರಲಿ ಎಂದು ನುಡಿದು ಹಾರೈಸಿದರು.

ಕಾರ್ಯಕ್ರಮವನ್ನು ಗೋಪಾಲ್‌ ಲಾಂಡೆY, ಬಾವು ಸಾಹೇಬ್‌ ಚೌಧರಿ, ರಾಜೇಶ್‌ ಮೋರೆ, ವಿಶ್ವನಾಥ್‌ ರಾಣೆ, ಆನಂದ ಶೆಟ್ಟಿ ಎಕ್ಕಾರು ಹಾಗೂ ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ದಿವಾಕರ ರೈ, ಬಾಬು ಮೊಗವೀರ, ಚಂದ್ರ ನಾಯ್ಕ ಮೊದಲಾದವರನ್ನು ಪುಷ್ಪಗುಚ್ಚವನ್ನಿತ್ತು ಸತ್ಕರಿಸಲಾಯಿತು. ರಾಜೇಶ್‌ ಮೋರೆ ಕಾರ್ಯಕ್ರಮ ನಿರ್ವಹಿಸಿದರು. ಸುಭಾಶ್‌ ಶೆಟ್ಟಿ ಇನ್ನಂಜೆ ವಂದಿಸಿದರು.

ವೇದಿಕೆಯಲ್ಲಿ ಶಿವಸೇನಾ ಜಿಲ್ಲಾಧ್ಯಕ್ಷ ಗೋಪಾಲ್‌ ಲಾಂಡೆY, ತಾಲೂಕು ಅಧ್ಯಕ್ಷ ಬಾವು ಸಾಹೇಬ್‌ ಚೌಧರಿ, ಸಭಾಗೃಹ ನೇತಾರ ರಾಜೇಶ್‌ ಮೋರೆ, ನಗರ ಸೇವಕ ವಿಶ್ವನಾಥ ರಾಣೆ, ಸಂಸ್ಥೆಯ ಅಧ್ಯಕ್ಷೆ ಅನುಪಮಾ ಶೆಟ್ಟಿ, ಆನಂದ ಶೆಟ್ಟಿ ಎಕ್ಕಾರು, ಕಾರ್ಯದರ್ಶಿ ಸುಭಾಶ್‌ ಶೆಟ್ಟಿ ಇನ್ನಂಜೆ, ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಡೊಂಬಿವಲಿ ಹಾಗೂ ಆಸುಪಾಸಿನ ತುಳು-ಕನ್ನಡಿಗರು ಸೇರಿದಂತೆ ನೂರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.