ವಡಾಲದ ಶ್ರೀ ರಾಮ ಮಂದಿರ: ಶ್ರೀ ರಾಮನವಮಿ ಉತ್ಸವ
Team Udayavani, Apr 23, 2021, 11:13 AM IST
ಮುಂಬಯಿ: ಮಹಾರಾಷ್ಟ್ರದ ಅಯೋಧ್ಯನಗರ ಪ್ರಸಿದ್ಧಿಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವಡಾಲ ಕತ್ರಾಕ್ ರಸ್ತೆಯ ದ್ವಾರಕನಾಥ ಭವನದ ಶ್ರೀರಾಮ ಮಂದಿರದಲ್ಲಿ ಎ. 21ರಂದು 56ನೇ ವಾರ್ಷಿಕ ಶ್ರೀ ರಾಮ ನವಮಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಶ್ರೀ ರಾಮನಾಮ ಸಂಕೀರ್ತನೆಯೊಂದಿಗೆ ಮರ್ಯಾದ ಪುರುಷೋತ್ತಮ ಭಗವಾನ್ ಶ್ರೀ ರಾಮ ನವಮಿ ಮಹೋತ್ಸವ ಸರಳವಾಗಿ ಆಚರಿಸಲಾಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆಯಿಂದ ಪ್ರಧಾನ ಆರ್ಚಕ ವೇ|ಮೂ| ಗೋವಿಂದ ಆಚಾರ್ಯ ಅವರ ಸಾರಥ್ಯದಲ್ಲಿ ದೇವತಾ ಪ್ರಾರ್ಥನೆ, ಮಹಾ ಮಂಗಳಾರತಿ, ರಾತ್ರಿ ಪೂಜೆಯೊಂದಿಗೆ ವಾರ್ಷಿಕ ಉತ್ಸವ ನೆರವೇರಿಸಿದವು. ಶ್ರೀ ರಾಮನ ಉತ್ಸವ ಮೂರ್ತಿಯನ್ನು ತೊಟ್ಟಿಲಲ್ಲಿರಿಸಿ ನಾಮಕರಣೋತ್ಸವ ನೆರವೇರಿಸಿ ಸಾಂಪ್ರದಾಯಿಕವಾಗಿ ರಾಮ ಜನ್ಮೋತ್ಸವ ಆಚರಿಸಲಾಯಿತು.ವೇ|ಮೂ| ಸುಧಾಮ ಭಟ್, ವೇ|ಮೂ| ಅನಂತ ಭಟ್, ವೇ|ಮೂ| ಭರತೇಶ್ ಭಟ್ ಕಟಪಾಡಿ, ಸಹ ಪುರೋಹಿತರು ಮತ್ತು ಮಂದಿರದ ವೈಧಿಕ ವರ್ಗದವರು ವಿವಿಧ ಪೂಜೆಗಳನ್ನು ನೆರವೇರಿಸಿ ತೀರ್ಥಪ್ರಸಾದ ವಿತರಿಸಿ ಅನುಗ್ರಹಿಸಿದರು.
ಶ್ರೀ ರಾಮ ಮಂದಿರ ಸಮಿತಿ ವಡಾಲ ಇದರ ಸಾಂಸ್ಕೃತಿಕ ಹಾಗೂ ಧಾರ್ಮಿಕ ಉಪ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮಂದಿರದ ಮಹಿಳಾ ವಿಭಾಗದ ಸದಸ್ಯೆಯರು, ರಾಮಭಕ್ತರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಈ ಸಂದರ್ಭದಲ್ಲಿ ಜಿಎಸ್ಬಿ ಸೇವಾ ಮಂಡಲ ಕಿಂಗ್ಸರ್ಕಲ್ ಇದರ ಮುಖ್ಯಸ್ಥ ಸತೀಶ್ ರಾಮ ನಾಯಕ್, ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಮುಂಬಯಿ ವಡಾಲ ಸಮಿತಿಯ ಕಾರ್ಯಾಧ್ಯಕ್ಷ ಮುಕುಂದ್ ವೈ. ಕಾಮತ್, ಉಪ ಕಾರ್ಯಾಧ್ಯಕ್ಷ ಎನ್. ಎನ್. ಪಾಲ್, ಜತೆ ಕೋಶಾಧಿಕಾರಿ ಪ್ರವೀಣ್ ಕಾಮತ್, ಮಹೇಶ್ ಭಂಡಾರ್ಕರ್, ಕಮಲಾಕ್ಷ ಜಿ. ಸರಾಫ್, ಹರೀಶ್ಚಂದ್ರ ಶ್ಯಾನ್ಭಾಗ್, ಅನ್ಮೋಲ್ ನಾಯಕ್ ಸೇರಿದಂತೆ ಇತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ವಿವಿಧ ಸೇವೆಗಳನ್ನಿತ್ತು ಸಹಕರಿಸಿದರು.ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ