ವಡಾಲದ ಶ್ರೀ ರಾಮ ಮಂದಿರ: ಶ್ರೀ ರಾಮನವಮಿ ಉತ್ಸವ


Team Udayavani, Apr 23, 2021, 11:13 AM IST

Sri Ramanavami Festival

ಮುಂಬಯಿ: ಮಹಾರಾಷ್ಟ್ರದ ಅಯೋಧ್ಯನಗರ ಪ್ರಸಿದ್ಧಿಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವಡಾಲ ಕತ್ರಾಕ್‌ ರಸ್ತೆಯ ದ್ವಾರಕನಾಥ ಭವನದ ಶ್ರೀರಾಮ ಮಂದಿರದಲ್ಲಿ ಎ. 21ರಂದು 56ನೇ ವಾರ್ಷಿಕ ಶ್ರೀ ರಾಮ ನವಮಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಶ್ರೀ ರಾಮನಾಮ ಸಂಕೀರ್ತನೆಯೊಂದಿಗೆ ಮರ್ಯಾದ ಪುರುಷೋತ್ತಮ ಭಗವಾನ್‌ ಶ್ರೀ ರಾಮ ನವಮಿ ಮಹೋತ್ಸವ ಸರಳವಾಗಿ ಆಚರಿಸಲಾಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆಯಿಂದ ಪ್ರಧಾನ ಆರ್ಚಕ ವೇ|ಮೂ| ಗೋವಿಂದ ಆಚಾರ್ಯ ಅವರ ಸಾರಥ್ಯದಲ್ಲಿ ದೇವತಾ ಪ್ರಾರ್ಥನೆ, ಮಹಾ ಮಂಗಳಾರತಿ, ರಾತ್ರಿ ಪೂಜೆಯೊಂದಿಗೆ ವಾರ್ಷಿಕ ಉತ್ಸವ ನೆರವೇರಿಸಿದವು. ಶ್ರೀ ರಾಮನ ಉತ್ಸವ ಮೂರ್ತಿಯನ್ನು ತೊಟ್ಟಿಲಲ್ಲಿರಿಸಿ ನಾಮಕರಣೋತ್ಸವ ನೆರವೇರಿಸಿ ಸಾಂಪ್ರದಾಯಿಕವಾಗಿ ರಾಮ ಜನ್ಮೋತ್ಸವ ಆಚರಿಸಲಾಯಿತು.ವೇ|ಮೂ| ಸುಧಾಮ ಭಟ್‌, ವೇ|ಮೂ| ಅನಂತ ಭಟ್‌, ವೇ|ಮೂ| ಭರತೇಶ್‌ ಭಟ್‌ ಕಟಪಾಡಿ, ಸಹ ಪುರೋಹಿತರು ಮತ್ತು ಮಂದಿರದ ವೈಧಿಕ ವರ್ಗದವರು ವಿವಿಧ ಪೂಜೆಗಳನ್ನು ನೆರವೇರಿಸಿ ತೀರ್ಥಪ್ರಸಾದ ವಿತರಿಸಿ ಅನುಗ್ರಹಿಸಿದರು.

ಶ್ರೀ ರಾಮ ಮಂದಿರ ಸಮಿತಿ ವಡಾಲ ಇದರ ಸಾಂಸ್ಕೃತಿಕ ಹಾಗೂ ಧಾರ್ಮಿಕ ಉಪ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮಂದಿರದ ಮಹಿಳಾ ವಿಭಾಗದ ಸದಸ್ಯೆಯರು, ರಾಮಭಕ್ತರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಈ ಸಂದರ್ಭದಲ್ಲಿ ಜಿಎಸ್‌ಬಿ ಸೇವಾ ಮಂಡಲ ಕಿಂಗ್‌ಸರ್ಕಲ್‌ ಇದರ ಮುಖ್ಯಸ್ಥ ಸತೀಶ್‌ ರಾಮ ನಾಯಕ್‌, ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಮುಂಬಯಿ ವಡಾಲ ಸಮಿತಿಯ ಕಾರ್ಯಾಧ್ಯಕ್ಷ ಮುಕುಂದ್‌ ವೈ. ಕಾಮತ್‌, ಉಪ ಕಾರ್ಯಾಧ್ಯಕ್ಷ ಎನ್‌. ಎನ್‌. ಪಾಲ್‌, ಜತೆ ಕೋಶಾಧಿಕಾರಿ ಪ್ರವೀಣ್‌ ಕಾಮತ್‌, ಮಹೇಶ್‌ ಭಂಡಾರ್ಕರ್‌, ಕಮಲಾಕ್ಷ ಜಿ. ಸರಾಫ್‌, ಹರೀಶ್ಚಂದ್ರ ಶ್ಯಾನ್‌ಭಾಗ್‌, ಅನ್ಮೋಲ್‌ ನಾಯಕ್‌ ಸೇರಿದಂತೆ ಇತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ವಿವಿಧ ಸೇವೆಗಳನ್ನಿತ್ತು ಸಹಕರಿಸಿದರು.ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.