ವಸಾಯಿ ಕರ್ನಾಟಕ ಸಂಘ: ಶ್ರೀ ಸತ್ಯನಾರಾಯಣ ಮಹಾಪೂಜೆ
Team Udayavani, Feb 6, 2021, 6:26 PM IST
ಮುಂಬಯಿ: ವಸಾಯಿ ಕರ್ನಾಟಕ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ಸಂಘದ 32ನೇ ವಾರ್ಷಿಕ ಮಹಾಸಭೆಯು ಜ. 26ರಂದು ವಸಾಯಿ ಪಶ್ಚಿಮ ಸಾಯಿ ನಗರದ ಹ್ಯಾಪಿ ಜೀವನ್ ಸೊಸೈಟಿಯಲ್ಲಿರುವ ವಸಾಯಿ ಕರ್ನಾಟಕ ಸಂಘದ ಕಚೇರಿಯಲ್ಲಿ ನಡೆಯಿತು.
ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷರಾದ ಪಾಂಡು ಎಲ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರಾಹ್ನ 3ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಮಹಿಳಾ ವಿಭಾಗದ ವತಿಯಿಂದ ಸಂಘದ ಮಹಿಳಾ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಂಘದ ಪ್ರಾಯೋಜಕತ್ವದ ಶ್ರೀ ಕಟೀಲು ಯಕ್ಷಕಲಾ ವೇದಿಕೆ ಚಾರಿಟೆಬಲ್ ಟ್ರಸ್ಟ್ ಇದರ ಮಹಿಳಾ ಸದಸ್ಯೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ ಜರಗಿತು. ಸತ್ಯನಾರಾಯಣ ಮಹಾ ಪೂಜೆಯನ್ನು ನಲಸೋಪರದ ಕೃಷ್ಣ ಭಟ್ ಮತ್ತು ತಂಡದವರು ನೆರವೇರಿಸಿಕೊಟ್ಟರು.
ರವಿಕಾಂತ್ ನಾಯಕ್ ದಂಪತಿ ಪೂಜಾ ಯಜಮಾನತ್ವ ವಹಿಸಿದ್ದರು. ಕೋವಿಡ್ ಮಾರ್ಗಸೂಚಿ ಪ್ರಕಾರ ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ಸದಸ್ಯ ಬಾಂಧವರು ಪಾಲ್ಗೊಂಡು ಸಹಕರಿಸಿದರು.
ಇದನ್ನೂ ಓದಿ: ಸದಾಶಿವ ವರದಿ ಜಾರಿಗೆ ಒತ್ತಾಯಿಸಿ ರಥಯಾತ್ರೆ
ಪ್ರಮೀಳಾ ಎನ್. ಅಮೀನ್ ಅವರ ಪ್ರಾರ್ಥನೆಗೈದರು. ಜತೆ ಕಾರ್ಯದರ್ಶಿ ವಿಜಯ್ ಪಿ. ಶೆಟ್ಟಿ ಕುತ್ತೆತ್ತೂರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಕರ್ನಾಟಕ ಕೋ. ಅಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ನ ಕಾರ್ಯಾಧ್ಯಕ್ಷ ಭಾಸ್ಕರ್ ಕೆ. ಶೆಟ್ಟಿ, ಎಂ. ಲೋಕೇಶಪ್ಪ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರಾದ ವಿಶ್ವನಾಥ ಪಿ. ಶೆಟ್ಟಿ, ಉಪಾಧ್ಯಕ್ಷರಾದ ದೇವೆಂದ್ರ ಬಿ. ಬುನ್ನನ್, ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ಹರಿಪ್ರಸಾದ್ ಶೆಟ್ಟಿ, ಸಲಹಾ ಸಮಿತಿ ಕಾರ್ಯಾಧ್ಯಕ್ಷ ಓ. ಪಿ. ಪೂಜಾರಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಕಾರ್ಯಾಧ್ಯಕ್ಷ ಯಶೋಧರ ವಿ. ಕೋಟ್ಯಾನ್, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಎನ್. ಶೆಟ್ಟಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಮೋಹಿನಿ ಎಸ್. ಮಲ್ಪೆ, ಯುವ ವಿಭಾಗ ಕಾರ್ಯಾಧ್ಯಕ್ಷ ಪೃಥ್ವಿರಾಜ್ ಶ್ರೀಧರ ಶೆಟ್ಟಿ ಕರ್ನಿರೆ ಇವರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಕೊಡಗಿನಲ್ಲಿ ವ್ಯಾಘ್ರ ಅಟ್ಟಹಾಸ: 8 ವರ್ಷದ ಬಾಲಕನನ್ನು ಕೊಂದು ಹಾಕಿದ ಹುಲಿ
ಸುದ್ದಿ ಸುತ್ತಾಟ : ಹನಿಟ್ರ್ಯಾಪ್ ಮಾಯಾಜಾಲದ ಹಿಂದೆ – ಮುಂದೆ
ಬಜೆಟ್ ಗೂ ಮುನ್ನ ಬಿಎಸ್ ವೈ ಗೆ ಪ್ರತಿಭಟನೆ ಬಿಸಿ: ಸಿಎಂ ನಿವಾಸದೆದುರು ಮಹಿಳೆಯರ ಪ್ರತಿಭಟನೆ
ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ; ಟಿಎಂಸಿ ಕೈವಾಡ: ಬಿಜೆಪಿ ಆರೋಪ
ಕಾಣೆಯಾಗಿದ್ದ ಮಾಜಿ ಶಾಸಕರ ಮಮ್ಮೊಕ್ಕಳು ಶವವಾಗಿ ಪತ್ತೆ!