ಡೊಂಬಿವಲಿಯಲ್ಲಿ ಶ್ರೀನಿವಾಸ ಮಂಗಲ ಮಹೋತ್ಸವ


Team Udayavani, Dec 3, 2018, 12:47 PM IST

0112mum07.jpg

ಡೊಂಬಿವಲಿ: ವಿರಾರ್‌ ಶ್ರೀ ಸಾಯಿಧಾಮ ಮಂದಿರ ಟ್ರಸ್ಟ್‌ ವತಿಯಿಂದ ತಿರುಪತಿ ತಿರುಮಲ ದೇವಸ್ಥಾನದ ಪುರೋಹಿತರ ಪೌರೋಹಿತ್ಯದಲ್ಲಿ ಕಲ್ಯಾಣ್‌ನ ಸಂಸದ ಡಾ| ಶ್ರೀಕಾಂತ್‌ ಏಕನಾಥ್‌ ಶಿಂಧೆ ಮತ್ತು ಡೊಂಬಿವಲಿ ಶಾಸಕ ಸುಭಾಷ್‌ ಭೋಯಿರ್‌ ಅವರ ನೇತೃತ್ವದಲ್ಲಿ ಡಿ. 1 ರಂದು ಬೆಳಗ್ಗೆ ಡೊಂಬಿವಲಿ ಪೂರ್ವದ ಘಾರ್‌ಡಾ ಸರ್ಕಲ್‌, ಪೆಡೆ°àಕರ್‌ ಕಾಲೇಜು ಸಮೀಪದ ಸಾವಳರಾಮ್‌ ಮಹಾರಾಜ್‌ ಮ್ಹಾತ್ರೆ ಕ್ರೀಡಾಂಗಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿವಾಸ ದೇವರ -ಪದ್ಮಾವತಿ ದೇವಿ-ಭೂದೇವಿಯ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ಅದ್ದೂರಿಯಾಗಿ ಚಾಲನೆಗೊಂಡಿತು.

ಸಮಾಜ ಸೇವಕ, ಉದ್ಯಮಿ ವಿರಾರ್‌ ಶಂಕರ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಡೊಂಬಿವಲಿಯ ಹೊಟೇಲ್‌ ಅಸೋಸಿಯೇಶನ್‌ ಇದರ ಪದಾಧಿಕಾರಿಗಳು, ಡೊಂಬಿವಲಿ ಪರಿಸರದ ತುಳು-ಕನ್ನಡಿಗರ ಸಂಘ-ಸಂಸ್ಥೆಗಳ ಸಂಪೂರ್ಣ ಸಹಕಾರದೊಂದಿಗೆ ನಡೆದ ಮಹೋತ್ಸವದಲ್ಲಿ ಬೆಳಗ್ಗೆ 7 ರಿಂದ ತಿರುಪತಿ ತಿರುಮಲ ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್‌ ಸಿ. ಆರ್‌. ಆನಂದ ತೀರ್ಥಾಚಾರ್ಯರ ನೇತೃತ್ವದಲ್ಲಿ, ಸುಪ್ರಭಾತಂ, ತೋಮುಲಾ ಸೇವಾ, ಕುಂಕುಮಾರ್ಚನೆ, ವಿಷ್ಣು ಸಹಸ್ರ ನಾಮಾರ್ಚನೆ, ತುಲಾಭಾರ ಸೇವೆ ನೆರವೇರಿತು. ತಿರುಪತಿಯಿಂದ ಆಗಮಿಸಿದ ಪುರೋಹಿತ ವರ್ಗದವರು ವಿವಿಧ ಪೂಜೆಗಳಲ್ಲಿ ಸಹಕರಿಸಿದರು.

2000ಕ್ಕೂ ಅಧಿಕ ದಂಪತಿ 
ಸುಪ್ರಭಾತಂ  ಪೂಜೆಯಲ್ಲಿ ಸುಮಾರು 2000ಕ್ಕೂ ಅಧಿಕ ದಂಪತಿಗಳು ಪಾಲ್ಗೊಂಡು ವ್ರತವನ್ನು ಕೈಗೊಂಡಿದ್ದರು.  ಅರ್ಚಕ ವಿದ್ವಾನ್‌ ಸಿ. ಆರ್‌. ಆನಂದ ತೀಥಾಚಾರ್ಯರು ಪೂಜೆಯ ಬಗ್ಗೆ ವಿವರಿಸಿ, ತಿರುಪತಿಯಲ್ಲಿ ಕಡಿಮೆ ಜನರಿಗೆ ನೋಡಲು ಸಿಗುವ ಸೇವೆ ಸುಪ್ರಭಾತಂ ಆಗಿದೆ. ಇದನ್ನು ಸರ್ವಜನತೆಯೂ ಕಾಣುವಂತಹ ಅವಕಾಶ ಇಲ್ಲಿ ಲಭಿಸಿದೆ. ತಿರುಪತಿಯ ಸುಪ್ರಭಾತಂ ಸೇವೆ ಏಳು ಬೆಟ್ಟಗಳಿಗೆ ಕೇಳುತ್ತದೆ. ಶ್ರೀ ವೆಂಕಟರಮಣ ಗೋವಿಂದ ಎನ್ನುವ ನಾಮಸ್ಮರಣೆ ಡೊಂಬಿವಲಿ ಮಹಾನಗರವನ್ನು ಪವಿತ್ರಗೊಳಿಸಿದೆ ಎಂದು ನುಡಿದರು.
ಶ್ರೀ ವೆಂಕಟರಮಣ ದೇವರ 108 ನಾಮ ಸ್ಮರಣೆ ಮಾಡುವುದರೊಂದಿಗೆ ತೋಮುಲಾ ಸೇವೆಯನ್ನು ಅರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ನಡೆದ ಕುಂಕುಮಾರ್ಚನೆಯ ಬಗ್ಗೆ ಪುರೋಹಿತರು ವಿವರಣೆ ನೀಡಿದರು. ಸಂಸದ ಶ್ರೀಕಾಂತ್‌ ಏಕನಾಥ್‌ ಶಿಂಧೆ ಅವರು ತುಲಾಭಾರ ಸೇವೆಗೆ ಚಾಲನೆ ನೀಡಿದರು. ಬಳಿಕ ನೂರಾರು ಭಕ್ತರು ಇದರ ಪ್ರಯೋಜನವನ್ನು ಪಡೆದುಕೊಂಡರು.
ಉತ್ಸವದ ಅಂಗವಾಗಿ ಡೊಂಬಿವಲಿ ಪರಿಸರದ ಪ್ರಮುಖ ರಸ್ತೆಗಳನ್ನು ವಿದ್ಯುದೀಪಗಳಿಂದ ಅಲಂಕರಿಸಲಾಗಿದ್ದು ಭಕಾದಿಗಳನ್ನು ಉತ್ಸವ ಮಂಟಪದೆಡೆಗೆ ಕೈಬೀಸಿ ಕರೆಯುತ್ತಿದೆ.

ಮಂಗಳ ಮಹೋತ್ಸವದ ಬೆಳಗ್ಗೆಯ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ರವೀಂದ್ರ ಚವಾಣ್‌, ಶಿವಸೇನ ಕಲ್ಯಾಣ್‌ ವಿಭಾಗದ ಸಂಘಟಕ ಗೋಪಾಲ್‌ ಲಾಂಡೆY, ಡೊಂಬಿವಲಿ ಹೊಟೇಲ್‌ ಓನರ್ ಅಸೋಸಿಯೇಶನ್‌ ಅಧ್ಯಕ್ಷ ಅಜಿತ್‌ ಶೆಟ್ಟಿ, ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ, ರಾಜೀವ್‌ ಭಂಡಾರಿ, ಕಾರ್ಯದರ್ಶಿ ಸತ್ಯೇಶ್‌ ಶೆಟ್ಟಿ, ಪದಾಧಿಕಾರಿಗಳಾದ ವೇಣುಗೋಪಾಲ್‌ ಶೆಟ್ಟಿ, ವಿಜಿತ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ಕರ್ನಾಟಕ ಸಂಘ ಡೊಂಬಿವಲಿ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ, ಮಾಜಿ ಅಧ್ಯಕ್ಷ ವಿಠuಲ್‌ ಶೆಟ್ಟಿ, ಕೋಶಾಧಿಕಾರಿ ಲೋಕನಾಥ್‌ ಶೆಟ್ಟಿ, ಜಗನ್ನಾಥ್‌ ಶೆಟ್ಟಿ, ಐಕಳ ಗಣೇಶ್‌ ಶೆಟ್ಟಿ, ಆನಂದ ಶೆಟ್ಟಿ ಎಕ್ಕಾರು, ಶೈಲೇಶ್‌ ಶೆಟ್ಟಿ, ಸತ್ಯನಾಥ್‌ ಶೆಟ್ಟಿ, ರಾಮಣ್ಣ ಶೆಟ್ಟಿ, ಪಶ್ಚಿಮ ವಿಭಾಗದ ನವರಾತ್ರಿ ಉತ್ಸವ ಮಂಡಳಿಯ ಗೋಪಾಲ್‌ ಶೆಟ್ಟಿ ಮತ್ತು ಪದಾಧಿಕಾರಿಗಳು, ಸದಸ್ಯರು, ಶಿವಸೇನೆ  ಸೌತ್‌ಸೆಲ್‌ನ ಅಧ್ಯಕ್ಷ ಜಯ ಪೂಜಾರಿ, ಸಮಾಜ ಸೇವಕ ಸುಭಾಷ್‌ ಶೆಟ್ಟಿ, ಶ್ರೀ ಮೂಕಾಂಬಿಕಾ ಫೌಂಡೇಷನ್‌ನ ಅಧ್ಯಕ್ಷೆ ಅನುಪಮಾ ಶೆಟ್ಟಿ, ಸಾಯಿನಾಥ ಮಿತ್ರ ಮಂಡಳಿಯ ಅಧ್ಯಕ್ಷ ಮಹೇಶ್‌ ಸಾಲ್ಯಾನ್‌ ಮತ್ತು ಪದಾಧಿಕಾರಿಗಳು, ಸದಸ್ಯರು, ಜಗಜ್ಯೋತಿ ಕಲಾವೃಂದದ ಉಪಾಧ್ಯಕ್ಷ ಜಯಕರ ಗೋಪಾಲ್‌ ಶೆಟ್ಟಿ ಪಡುಕುಡೂರು, ಯಕ್ಷಕಲಾ ಸಂಸ್ಥೆಯ ಸತೀಶ್‌ ಶೆಟ್ಟಿ ಶೃಂಗೇರಿ, ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದೇವಾಡಿಗ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹೇಮಾನಂದ ದೇವಾಡಿಗ, ಅನ್ನದಾನ ಸೇವೆಯು ಸುಸಾಂಗವಾಗಿ ನೆರವೇರುವುದರಲ್ಲಿ ಕಿಶೋರ್‌ ಶೆಟ್ಟಿ, ಸುರೇಶ್‌ ಶೆಟ್ಟಿ ಗುರ್ಮೆ, ಅರುಣ್‌ ಶೆಟ್ಟಿ, ಸೀತಾರಾಮ ಶೆಟ್ಟಿ ಪಡುಕುಡೂರು, ಭಾಸ್ಕರ ಶೆಟ್ಟಿ ಪಡುಕುಡೂರು, ಕಿಶೋರ್‌ ಶೆಟ್ಟಿ, ಕುಶಲಾ, ಯೋಗೇಶ್‌ ಶೆಟ್ಟಿ, ಮಹೇಶ್‌ ಶೆಟ್ಟಿ, ಮಂಜುನಾಥ್‌ ದೇವಾಡಿಗ ಮೊದಲಾದವ‌ರು ಸಹಕರಿಸಿದರು. 

5 ಸಾವಿರಕ್ಕೂ ಅಧಿಕ ಮಂದಿ 
ಸುಪ್ರಭಾತಂ ಸೇವೆಯು ಶ್ರೀ ಬಾಲಾಜಿ, ಶ್ರೀದೇವಿ-ಭೂದೇವಿಯರಿಗೆ ವೈಭವದಿಂದ ನಡೆಯಿತು. ಸುಮಾರು 5 ಸಾವಿರಕ್ಕೂ ಅಧಿಕ ಭಕ್ತಾದಿಗಳು  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತಿರುಪತಿಯಿಂದ ತಂದಿರುವ ಶ್ರೀನಿವಾಸ ದೇವರ ಮೂರ್ತಿ ಮತ್ತು ಶ್ರೀದೇವಿ-ಭೂದೇವಿಯ ಮೂರ್ತಿಯನ್ನು ಶಾಸ್ತೊÅàಕ್ತವಾಗಿ ಪ್ರತಿಷ್ಠಾಪಿಸಿ ಶ್ರೀನಿವಾಸ ಮಂಗಳ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಉತ್ಸವದಲ್ಲಿ  ಡೊಂಬಿವಲಿಯ ಪ್ರತಿಷ್ಠಿತ ಸಂಘ-ಸಂಸ್ಥೆಗಳಾದ ಡೊಂಬಿವಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳ, ಕರ್ನಾಟಕ ಸಂಘ ಡೊಂಬಿವಲಿ, ಬಂಟ್ಸ್‌ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ, ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಪ್ರಾದೇಶಿಕ ಸಮಿತಿ, ಕುಲಾಲ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ, ಶ್ರೀ ಸಾಯಿನಾಥ ಮಿತ್ರ ಮಂಡಳ, ಶ್ರೀ ರಾಧಾಕೃಷ್ಣ ಶನೀಶ್ವರ ಮಂದಿರ, ದುರ್ಗಾಂಬಿಕಾ ಭಜನಾ ಮಂಡಳ, ಶ್ರೀ ಮೂಕಾಂಬಿಕಾ ಸೋಶಿಯಲ್‌ ವೆಲ್ಫೆàರ್‌ ಫೌಂಡೇಷನ್‌, ಮುಂಬ್ರಾ ಮಿತ್ರ ಭಜನಾ ಮಂಡಳಿ, ಯಕ್ಷಕಲಾ ಸಂಸ್ಥೆ, ಶ್ರೀ ಮಾತಾ ಅಮೃತಾನಂದಮಯಿ ಸತ್ಸಂಗ, ಶ್ರೀ ಜಗದಂಬಾ ಮಂದಿರ ಡೊಂಬಿವಲಿ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಕ್ತ ಮಂಡಳಿ ಹಾಗೂ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು, ತುಳು-ಕನ್ನಡಿಗ ಭಕ್ತಾದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.