ರಶೀದ್‌ ಕುದ್ರೋಳಿ ಸ್ಮಾರಕ ಪ್ರಶಸ್ತಿ ಸ್ಟಾರ್‌ ಆಫ್‌ ಕೆನರಾಗೆ


Team Udayavani, Nov 14, 2017, 5:00 PM IST

13-Mum01a.jpg

ಮುಂಬಯಿ: ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ನ ಆಯೋಜಿತ 11ನೇ ವಾರ್ಷಿಕ ನ್ಯಾಯವಾದಿ ರಶೀದ್‌ ಕುದ್ರೋಳಿ ಸ್ಮಾರಕ ಫುಟ್ಬಾಲ್‌ ಟ್ರೋಫಿಯನ್ನು ಸ್ಟಾರ್‌ ಆಫ್‌ ಕೆನರಾ ತಂಡವು ಗೆದ್ದುಕೊಂಡಿದೆ.

ನ. 11ರಂದು ಚರ್ಚ್‌ಗೇಟ್‌ ಪರಿಸರದ ಅಸೋಸಿಯೇಶನ್‌ನ ಮೈದಾನದಲ್ಲಿ ಜರಗಿದ ಫೈನಲ್‌ ಪಂದ್ಯದಲ್ಲಿ ಬಲಾಡ್ಯ ತಂಡಗಳಾದ ಮೊಗವೀರ ತಂಡ ಹಾಗೂ ಸ್ಟಾರ್‌ ಆಫ್‌ ಕೆನರಾ ತಂಡಗಳು ಸೆಣಸಾಡಿದ್ದು, 3-1ರ ಅಂತರದಿಂದ ಸ್ಟಾರ್‌ ಆಫ್‌ ಕೆನರಾ ತಂಡವು ಮೊಗವೀರ ತಂಡವನ್ನು ಬಗ್ಗುಬಡಿದು ಪ್ರಶಸ್ತಿಯನ್ನು ಮುಡಿ ಗೇರಿಸಿಕೊಂಡಿತು.

ವಿಜೇತ ತಂಡದ ಪರ ನೇಹಾಲ್‌ ಶೆಟ್ಟಿ, ಅಶ್ವಿ‌ನ್‌ ಡಯಾಸ್‌, ಶೆಲ್ಟನ್‌ ರೇಗೋ ಅವರು ಗೋಲು ಹೊಡೆದರೆ, ಪರಾಜಿತ ತಂಡದ ಪರ ದರ್ಶನ್‌ ಕರ್ಕೇರ ಅವರು ಏಕೈಕ ಗೋಲು ಬಾರಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.

ಅತಿಥಿಗಳಾಗಿ ಪಾಲ್ಗೊಂಡ ಅಂತಾರಾಷ್ಟ್ರೀಯ ಫುಟ್ಬಾಲ್‌ ಆಟಗಾರ ಸ್ಟೀವನ್‌ ಡಯಾಸ್‌, ಮಹಾರಾಷ್ಟ್ರ ತಂಡದ ನಾಯಕ ವಿಜೇತ ಶೆಟ್ಟಿ, ಮಾಜಿ ಆಟಗಾರ ದಾಮೋದರ ಕುಕ್ಯಾನ್‌ ಅವರು ಪ್ರಶಸ್ತಿ ಪ್ರದಾನಿಸಿ ಶುಭ ಹಾರೈಸಿದರು. ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ ಶಿವಛತ್ರಪತಿ ಪ್ರಶಸ್ತಿ ಪುರಸ್ಕೃತರಾದ ಜಯ ಎ. ಶೆಟ್ಟಿ, ಕೃಷ್ಣ ಶೆಟ್ಟಿ, ಸದಸ್ಯರಾದ ಗೋವಿಂದ ಪುತ್ರನ್‌, ಪ್ರೇಮನಾಥ್‌ ಕೋಟ್ಯಾನ್‌, ಸಾಲ್ಪಡೋರ್‌ ಡಿಸೋಜಾ, ರವಿ ಅಂಚನ್‌, ವಸಂತ ಉಚ್ಚಿಲ್‌, ಸುರೇಶ್‌ ಮೆಂಡನ್‌, ಶೇಖರ್‌ ಬಂಗೇರ, ಸುಕುಮಾರ್‌ ಹತ್ತಂಗಡಿ, ನಾಗರಾಜ ಶೆಟ್ಟಿ, ಜಯಂತ್‌ ಕುಂದರ್‌, ದಯಾ ಅಂಚನ್‌, ಸದಾ ಉಚ್ಚಿಲ್‌ ಮೊದಲಾದವರು ಉಪಸ್ಥಿತರಿದ್ದರು.

ಪಂದ್ಯಾಟದ ಪ್ರಮುಖ ಪ್ರಾಯೋಜಕರಾದ ನ್ಯಾಯವಾದಿ ಶಕೀಲ್‌ ರಶೀದ್‌ ಕುದ್ರೋಳಿ ಅವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ವಿಜೇತ ತಂಡಗಳನ್ನು ಅಭಿನಂದಿಸಿ ಶುಭ ಹಾರೈಸಿದರು. 
ಫುಟ್ಬಾಲ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಂಡಗಳ ಆಟಗಾರರನ್ನು ಪ್ರೋತ್ಸಾಹಿಸಿದರು.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Dubai ಕನ್ನಡ ಸಂಘ: ಹಾದಿಯ ಮಂಡ್ಯ ಅಧ್ಯಕ್ಷೆ, ವರದರಾಜ್‌ ಕೋಲಾರ ಪ್ರ.ಕಾರ್ಯದರ್ಶಿ

Dubai ಕನ್ನಡ ಸಂಘ: ಹಾದಿಯ ಮಂಡ್ಯ ಅಧ್ಯಕ್ಷೆ, ವರದರಾಜ್‌ ಕೋಲಾರ ಪ್ರ.ಕಾರ್ಯದರ್ಶಿ

Desi Swara: ಕತಾರ್‌ ಕರ್ನಾಟಕ ಸಂಘಕ್ಕೆ ನೂತನ ಸಾರಥ್ಯ

Desi Swara: ಕತಾರ್‌ ಕರ್ನಾಟಕ ಸಂಘಕ್ಕೆ ನೂತನ ಸಾರಥ್ಯ

Desi Swara-ದೋಹಾ: ಮಾವಿನ ರುಚಿಗೆ ಮಾರುಹೋದ ಸಾವಿರಾರು ಮಂದಿ

Desi Swara-ದೋಹಾ: ಮಾವಿನ ರುಚಿಗೆ ಮಾರುಹೋದ ಸಾವಿರಾರು ಮಂದಿ

1-asdasdas

Mango fair; ಕೊಲ್ಲಿ ರಾಷ್ಟ್ರದಲ್ಲಿ ಹಣ್ಣಿನ ರಾಜನ ಹಿರಿಮೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.