ರಾಜ್ಯದಲ್ಲಿ 25,000 ಕಂಪೆನಿಗಳಿಂದ ಉತ್ಪಾದನೆ ಆರಂಭ: ದೇಸಾಯಿ


Team Udayavani, May 14, 2020, 11:04 AM IST

ರಾಜ್ಯದಲ್ಲಿ 25,000 ಕಂಪೆನಿಗಳಿಂದ ಉತ್ಪಾದನೆ ಆರಂಭ: ದೇಸಾಯಿ

ಸಾಂದರ್ಭಿಕ ಚಿತ್ರ

ಮುಂಬಯಿ: ಕೋವಿಡ್ ಆತಂಕದ ಸಂದರ್ಭದಲ್ಲಿಯೂ ರಾಜ್ಯದ ಆರ್ಥಿಕತೆಯನ್ನು ಸ್ಥಿರವಾಗಿಸುವ ಪ್ರಯತ್ನ ಸರಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕೆಲವು ಭಾಗಗಳಲ್ಲಿ ಕಾರ್ಖಾನೆಗಳನ್ನೂ ಆರಂಭಿಸಲು ಅನುಮತಿಯನ್ನು ನೀಡಲಾಗಿದ್ದು, ಅದರಲ್ಲಿ 25 ಸಾವಿರ ಕಂಪೆನಿಗಳಲ್ಲಿ ಉತ್ಪಾದನೆ ಪ್ರಾರಂಭವಾಗಿದ್ದು, ಈ ಕಂಪೆನಿಗಳಲ್ಲಿ ಸುಮಾರು 6.5 ಲಕ್ಷ ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಕೈಗಾರಿಕಾ ಸಚಿವ ಸುಭಾಷ್‌ ದೇಸಾಯಿ ಹೇಳಿದ್ದಾರೆ.

ಕೆಂಪು ವಲಯವನ್ನು ಹೊರತುಪಡಿಸಿ, ರಾಜ್ಯದಲ್ಲಿ ಈವರೆಗೆ 57,745 ಕೈಗಾರಿಕೆಗಳಿಗೆ ಪರವಾನಗಿ ನೀಡಲಾಗಿದ್ದು, ಅದರಲ್ಲಿ 25,000 ಕಂಪೆನಿಗಳು ಉತ್ಪಾದನೆಯನ್ನು ಪ್ರಾರಂಭಿಸಿವೆ. ಇದರಲ್ಲಿ ಸುಮಾರು ಆರೂವರೆ ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ 9,147 ಕಾರ್ಖಾನೆಗಳಿಗೆ ಪರವಾನಗಿ ನೀಡಲಾಗಿದೆ. ಈ ಪೈಕಿ 5 ಸಾವಿರ 774 ಕಾರ್ಖಾನೆಗಳು ಉತ್ಪಾದನೆಯನ್ನು ಪ್ರಾರಂಭಿಸಿವೆ ಎಂದು ಕೈಗಾರಿಕಾ ಸಚಿವ ದೇಸಾಯಿ ಹೇಳಿದ್ದಾರೆ.

ಪುಣೆಯಲ್ಲಿ ಮರಾಠಾ ಚೇಂಬರ್ಸ್‌ ಆಫ್ ಕಾಮರ್ಸ್‌, ಇಂಡಸ್ಟ್ರಿ ಮತ್ತು ಅಗ್ರಿಕಲ್ಚರ್‌ ಆಯೋಜಿಸಿದ ವೆಬ್‌ನಾರ್‌ನಲ್ಲಿ ಸಚಿವ ಸುಭಾಷ್‌ ದೇಸಾಯಿ ಅವರು ಮಾತನಾಡಿ, ಮುಂಬಯಿ, ಥಾಣೆ, ಪುಣೆ, ಪಿಂಪ್ರಿ-ಚಿಂಚಾಡ್‌ ಕೆಂಪು ವಲಯಕ್ಕೆ ಸೇರಿವೆ. ಇಲ್ಲಿ ಉದ್ಯಮವನ್ನು ಪ್ರಾರಂಭಿಸಲು ಅನುಮತಿ ನೀಡಬೇಕೆಂದು ಬೇಡಿಕೆಯು ಮಾಡಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಮೇ ಅಂತ್ಯದ ವೇಳೆಗೆ ಮಹಾರಾಷ್ಟ್ರವನ್ನು ಹಸಿರು ವಲಯವನ್ನಾಗಿ ಮಾಡಲು ನಿರ್ಧರಿಸಿದ್ದಾರೆ. ಅಲ್ಲಿಯವರೆಗೆ ಎಲ್ಲರೂ ಸಹಕರಿಸಬೇಕೆಂದು ಹೇಳಿದ್ದಾರೆ.

ಸ್ಥಿರ ವಿದ್ಯುತ್‌ ಬಿಲ್‌ಗ‌ಳ ಕುರಿತು ಇಂಧನ ಸಚಿವರೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಬಳಸಲಾಗುವಷ್ಟು ವಿದ್ಯುತ್‌ ಶುಲ್ಕ ವಿಧಿಸಲು ನಿರ್ಧರಿಸಿದ್ದೇವೆ. ಇದಲ್ಲದೆ ಸಾಲದ ಕಂತುಗಳನ್ನು ಮರುಪಾವತಿಸಲು ಸಹ ರಿಯಾಯಿತಿಗಳನ್ನು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಣ್ಣ ಕೈಗಾರಿಕೆ ಉದ್ಯಮಕ್ಕೆ ಬೆಂಬಲಿಸಲು ಕೇಂದ್ರ ಸರಕಾರ ಶೀಘ್ರದಲ್ಲೇ ಹಣಕಾಸು ಪ್ಯಾಕೇಜ್‌ ಘೋಷಿಸಲಿದೆ. ಅದಕ್ಕೆ ಸಂಬಂಧಿಸಿದ ಕೆಲಸ ಅಂತಿಮ ಹಂತದಲ್ಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಸದಾನಂದ ಗೌಡ ಮತ್ತು ಪೀಯೂಷ್‌ ಗೋಯಲ್‌ ಅವರೊಂದಿಗೆ ಚರ್ಚೆ ನಡೆಯುತ್ತಿದೆ. ಇದರ ಹೊರತಾಗಿ ರಾಜ್ಯ ಸರಕಾರ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಇತರ ಸೌಲಭ್ಯಗಳನ್ನು ಒದಗಿಸುವ ನೀತಿಯನ್ನು ರೂಪಿಸುತ್ತಿದೆ ಎಂದರು.

ಗಮನಾರ್ಹ ವಿಷಯವೆಂದರೆ ಮಹಾ ರಾಷ್ಟ್ರದಲ್ಲಿ ವಿದೇಶಿ ಹೂಡಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಯುನೈಟೆಡ್‌ ಸ್ಟೇಟ್ಸ್, ಇಂಗ್ಲೆಂಡ್, ಜರ್ಮನಿ, ಜಪಾನ್‌, ತೈವಾನ್‌ ಮತ್ತು ದಕ್ಷಿಣ ಕೊರಿಯಾದ ಪ್ರತಿನಿಧಿಗಳು ರಾಜ್ಯ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅನೇಕ ದೊಡ್ಡ ಯೋಜನೆಗಳು ಪ್ರಾರಂಭವಾಗುವುದರಿಂದ, ಸಣ್ಣ ಪ್ರಮಾಣದ ಕೈಗಾರಿಕೆ ಉದ್ಯಮಿಗಳು ಸೇವೆಗಳನ್ನು ಒದಗಿಸಲು ಸಿದ್ಧರಾಗಿರಬೇಕು ಎಂದು ಕೈಗಾರಿಕಾ ಸಚಿವ ಹೇಳಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.