ಅಧ್ಯಯನ ತಂಡ ನೇಮಿಸಬೇಕು: ಪವಾರ್
ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಕುಸಿತ ಸಾಧ್ಯತೆ
Team Udayavani, May 22, 2020, 5:37 PM IST
ಮುಂಬಯಿ, ಮೇ 21: ಕೋವಿಡ್ ಮಹಾಮಾರಿಯ ಹಿನ್ನೆಲೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಂಸ್ಥೆಗಳು ತೊಂದರೆ ಅನುಭವಿಸದಂತೆ ನೋಡಿಕೊಳ್ಳಲು ಅಧ್ಯಯನ ತಂಡ ಅಥವಾ ಸಮಿತಿಯನ್ನು ರಚಿಸಬೇಕು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಬುಧವಾರ ಹೇಳಿದ್ದಾರೆ.
ದೇಶದಲ್ಲೇ ಮಹಾರಾಷ್ಟ್ರವು 35 ಸಾವಿರ ಪಾಸಿಟಿವ್ ಪ್ರಕರಣಗಳ್ಳೋಂದಿಗೆ ಅತ್ಯಂತ ಕೆಟ್ಟ ರಾಜ್ಯವಾಗಿ ಹೊರಹೊಮ್ಮಿದೆ. ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ಅನಂತರ ರಾಜ್ಯದಲ್ಲಿ ಬೀಗ ಹಾಕಿದ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭವು ಲಾಕ್ ಡೌನ್ ಪರಿಸ್ಥಿತಿಯಿಂದ ವಿಳಂಬವಾಗಲಿದೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಖ್ಯೆಯಲ್ಲೂ ಗಣನೀಯ ಕುಸಿತ ಉಂಟಾಗಲಿದೆ. ಇದರಿಂದ ಶಿಕ್ಷಣ ಸಂಸ್ಥೆಗಳ ಆದಾಯದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.
ಕೋವಿಡ್ ಹಿನ್ನೆಲೆ ಹಣಕಾಸಿನ ನಷ್ಟದಿಂದಾಗಿ ಕೆಲವು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವ ಸಾಧ್ಯತೆಯಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳಿಗೆ ತೊಂದರೆಯಾಗದಂತೆ ಮತ್ತು ಶೈಕ್ಷಣಿಕ ವರ್ಷ ಆರಂಭಕ್ಕೆ ಅಡ್ಡಿಯಾಗದಂತೆ ಸಮಯೋಚಿತ ಕ್ರಮಗಳನ್ನು ತೆಗೆದುಕೊಳ್ಳಲು ಅಧ್ಯಯನ ತಂಡ ಅಥವಾ ಸಮಿತಿಯನ್ನು ನೇಮಿಸಬೇಕು ಎಂದು ಅವರು ಹೇಳಿದರು.
ಪವಾರ್ ಅವರ ಪ್ರಸ್ತಾವಗಳಲ್ಲಿ ಉದ್ಯಮಗಳ ಬೆಳವಣಿಗೆಗೆ ಹೊಸ ಪ್ರೋತ್ಸಾಹಗಳನ್ನು ಉತ್ತೇಜಿಸುವ ನೀತಿಯನ್ನು ಪರಿಚಯಿಸುವ ಮೂಲಕ ಮತ್ತು ಲಾಕ್ಡೌನ್ನ ಕೆಲವು ಷರತ್ತುಗಳನ್ನು ಸಡಿಲಿಸುವ ಮೂಲಕ ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುವ ಕ್ರಮಗಳೂ ಇದ್ದವು. ಸಾರಿಗೆ, ಶಿಕ್ಷಣ, ಕೃಷಿ ಮತ್ತು ಕೈಗಾರಿಕೆಗಳ ಬಗ್ಗೆ ಪವಾರ್ ಮುಖ್ಯಮಂತ್ರಿಗೆ ಕೆಲವು ಸಲಹೆಗಳನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್