ತಾಳಿಪಾಡಿಗುತ್ತು ಫ್ಯಾಮಿಲಿ ವೆಲಪೇರರ್‌ ಟ್ರಸ್ಟ್‌ ರಜತ ಮಹೋತ್ಸವ


Team Udayavani, Feb 21, 2017, 12:52 PM IST

19-Mum08.jpg

ಮುಂಬಯಿ: ತಾಳಿಪ್ಪಾಡಿಗುತ್ತು ಎಂಬುವುದು ಬಂಟ ಸಮುದಾಯದ ಹೆಮ್ಮೆಯ ಗುತ್ತುಮನೆತನವಾಗಿದೆ.  ಇದು ಕೇವಲ ಗುತ್ತುಮನೆತನಕ್ಕೆ ಸೀಮಿತವಾಗಿರದೆ ಎಲ್ಲ ಸಮಾಜ ಬಾಂಧವರಿಗೂ ಸಹಕರಿಸುತ್ತಿರುವುದು ಅಭಿನಂದನೀಯ. ತಾಳಿಪಾಡಿಗುತ್ತಿಗೆ ಸಂಬಂಧಪಟ್ಟವರು ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆ ಮಾಡುತ್ತಿದ್ದು, ಅದರಲ್ಲೂ ಆರೋಗ್ಯ ಕ್ಷೇತ್ರಕ್ಕೆ ಇವರ ಸೇವೆ ಗಮನೀಯವಾಗಿದೆ. ಈ ಮನೆತನದ ಹೆಚ್ಚಿನವರು ಉನ್ನತ ಶಿಕ್ಷಣವನ್ನು ಪಡೆದು ಡಾಕ್ಟರ್‌, ಎಂಜಿನಿಯರಿಂಗ್‌ ಕ್ಷೇತ್ರಗಳಲ್ಲದೆ, ಕ್ರೀಡೆ, ಚಿತ್ರರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿಯಾಗಿದೆ. ವಿವಿಧ ಕ್ಷೇತ್ರಗಳಿಂದ ದೇಶ-ವಿದೇಶಗಳಲ್ಲೂ ಮನೆತನದ ಸದಸ್ಯರು ಸಾಧನೆಯಲ್ಲಿ ತೊಡಗಿಸಿಕೊಂಡು ತಮ್ಮ ಹಿರಿಯರನ್ನು, ಕುಟುಂಬವನ್ನು ನೆನಪಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ನುಡಿದರು.

ಫೆ. 19 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಭಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆದ ತಾಳಿಪಾಡಿಗುತ್ತು ಫ್ಯಾಮಿಲಿ ವೆಲ್ಫೆàರ್‌ ಟ್ರಸ್ಟ್‌ ಇದರ ರಜತ ಮಹೋತ್ಸವ ವಾರ್ಷಿಕ ಮಹಾಸಭೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, 25 ವರ್ಷಗಳ ಹಿಂದೆ ಹಿರಿಯರು ಇಂತಹ ಒಂದು ಅಮೂಲ್ಯ ಟ್ರಸ್ಟ್‌ನ್ನು ಸ್ಥಾಪಿಸಿ ಅದರ ಮುಖಾಂತರ ಸಮಾಜ ಸೇವೆಯಲ್ಲಿ ತೊಡಗಿರುವುದು ಮಾದರಿಯಾಗಿದೆ. ಭವಿಷ್ಯದಲ್ಲೂ ಟ್ರಸ್ಟ್‌ ಉತ್ತಮೋತ್ತಮ ಕಾರ್ಯಗಳಲ್ಲಿ ತೊಡಗಿಸಿ, ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ-ಬೆಳೆಸುವಲ್ಲಿ ಮಹತ್ತರವಾದ ಕಾರ್ಯವನ್ನು ಮಾಡಲಿ ಎಂದು ನುಡಿದು ಶುಭಹಾರೈಸಿದರು.

ಅತಿಥಿಯಾಗಿ ಪಾಲ್ಗೊಂಡು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ನ್ಯಾಯವಾದಿ ಉಪ್ಪೂರು ಶೇಖರ್‌ ಶೆಟ್ಟಿ ಅವರು ಮಾತನಾಡಿ, ತಾಳಿಪಾಡಿಗುತ್ತಿನ ಹಿರಿಯರು ಕಂಡ ಕನಸು ನಿಜವಾಗಿಯೂ ಅಭಿನಂದನೀಯವಾಗಿದೆ. ಸಮಾಜದ ಮೇಲಿನ ಕಾಳಜಿಯೇ ಅವರಿಗೆ ಇಂತಹ ಕಾರ್ಯಕ್ರಮಗಳನ್ನು ಮಾಡಲು ಪ್ರೇರಣೆಯಾಗಿರಬಹುದು. ನಾವು ಕೇವಲ ದೈವ-ದೇವರುಗಳಿಗೆ ಮಾತ್ರ ಸೀಮಿತವಾಗಿರದೆ ಸ್ವಲ್ಪ ಭಾಗವನ್ನು ಸಮಾಜಕ್ಕಾಗಿಯೂ ವಿನಿಯೋಗಿಸಬೇಕು. ಈ ತಾಳಿಪಾಡಿಗುತ್ತು ಫ್ಯಾಮಿಲಿ ಟ್ರಸ್ಟ್‌ ನವರು ಆರೋಗ್ಯ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ಅನುಕರಣೀಯವಾಗಿದೆ ಎಂದು ಹೇಳಿದರು.

ಇನ್ನೋರ್ವ ಅತಿಥಿ ಡಾ| ಸದಾನಂದ ವಿ. ಶೆಟ್ಟಿ ಅವರು ಮಾತನಾಡಿ, ತಾಳಿಪಾಡಿ ಗುತ್ತಿನವರು ಕಠಿಣ ಪರಿಶ್ರಮಿಗಳು. ಅದುವೇ ಅವರ ಅಭಿವೃದ್ಧಿಗೆ ಕಾರಣವಾಗಿದೆ. ಅವರು ಕೇವಲ ಅವರ ಕುಟುಂಬಕ್ಕೆ ಸೀಮಿತವಾಗಿರದೆ ಇತರ ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಗುಣವನ್ನು ಹೊಂದಿದ್ದಾರೆ. ಅದಕ್ಕಾಗಿ ಇಂತಹ ಟ್ರಸ್ಟ್‌ನ್ನು ನಿರ್ಮಿಸಿ ಸಮಾಜ ಸೇವೆಯನ್ನು ಮಾಡುತ್ತಿರುವುದು ವಿಶೇಷತೆಯಾಗಿದೆ. ಇಂದಿನ ಕಾರ್ಯಕ್ರಮವು ನಿಜವಾಗಿಯೂ ಅರ್ಥಪೂರ್ಣವಾಗಿದೆ  ಎಂದು ನುಡಿದರು.

ಟ್ರಸ್ಟ್‌ನ ಅಧ್ಯಕ್ಷೆ ಶೋಭಾ ಎಸ್‌. ಶೆಟ್ಟಿ ಅವರು ಸ್ವಾಗತಿಸಿ, ಸಂಸ್ಥೆಯ ಕಾರ್ಯವೈಖರಿಯನ್ನು ತಿಳಿಸಿ ಭವಿಷ್ಯದಲ್ಲಿ ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಸಲ್ಲಿಸಿ ಸುವರ್ಣ ಮಹೋತ್ಸವವನ್ನು ಆಚರಿಸುವಂತಾಗಲಿ ಎಂದು ಆಶಿಸಿದರು. ಟ್ರಸ್ಟ್‌ನ ಕಾರ್ಯದರ್ಶಿ ಪಿ. ವಿಶ್ವನಾಥ ಶೆಟ್ಟಿ ಅವರು ಟ್ರಸ್ಟ್‌ನ ಸಿದ್ಧಿ-ಸಾಧನೆಗಳನ್ನು ವಿವರಿಸಿದರು.

ಹಿರಿಯರಾದ ಬಿ. ಆರ್‌. ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಹಿರಿಯರು ಸಮಾಜಕ್ಕಾಗಿ ಮಾಡಿದ ಸೇವೆ ಅಪಾರವಾಗಿದೆ. ಅವರನ್ನು ಈ ಸಂದರ್ಭದಲ್ಲಿ ಮನಸಾರೆ ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ತುಳುನಾಡಿನಲ್ಲಿ ತಾಳಿಪಾಡಿಗುತ್ತಿಗೆ ಒಂದು ವಿಶೇಷ ಸ್ಥಾನಮಾನ, ಗೌರವವಿದೆ. ಅದಕ್ಕೆ ಕಾರಣ ನಮ್ಮ ಹಿರಿಯರು. ಒಂದೇ ಕುಟುಂಬ, ಒಂದೇ ಧ್ಯೇಯ ಎಂಬುವುದನ್ನು ಅರಿತು ನಾವೆಲ್ಲರು ಒಂದಾಗಿ, ಒಗ್ಗಟ್ಟಿನಿಂದ ಸಮಾಜ ಸೇವೆಯಲ್ಲಿ ತೊಡಗಿದ್ದೇವೆ. ದೈವ-ದೇವರುಗಳ ಕಾರ್ಯಗಳೊಂದಿಗೆ ಜನಸೇವೆಯನ್ನು ಮಾಡುವ ಮೂಲಕ ಸಂಸ್ಥೆಯ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಭವಿಷ್ಯದಲ್ಲೂ ಇದೇ ಮಾರ್ಗದಲ್ಲಿ ಸಂಸ್ಥೆ ನಡೆಯಲಿದೆ ಎಂದು ಹೇಳಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಾನೀಯರನ್ನು ಗೌರವಿಸಲಾಯಿತು. ಡಾ| ಶೋಭಾ ಶೆಟ್ಟಿ ಮತ್ತು ಇಂದಿರಾ ವೈ. ಶೆಟ್ಟಿ ಅವರು ಪ್ರಾರ್ಥನೆಗೈದರು. ಸಿ. ವಿ. ಶೆಟ್ಟಿ ಮತ್ತು  ತನ್ವಿ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ವಿಜಯ ಕುಮಾರ್‌ ಎಸ್‌. ಶೆಟ್ಟಿ ವಂದಿಸಿದರು. ಗಣ್ಯರು ಸಂಸ್ಥೆಯ ರಜತ ಸಂಭ್ರಮದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಾರಂಭದಲ್ಲಿ ಟ್ರಸ್ಟ್‌ನ ವಾರ್ಷಿಕ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಶೋಕ್‌ ಕೊಡ್ಯಡ್ಕ ಅವರ ತಂಡದಿಂದ ತುಳುನಾಡ ವೈಭವ ಪ್ರದರ್ಶನಗೊಂಡಿತು. ವೇದಿಕೆಯಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ರಘುರಾಮ ಶೆಟ್ಟಿ ಪುಣೆ, ಚಂದ್ರಹಾಸ ಶೆಟ್ಟಿ, ರತ್ನಾಕರ ಎಸ್‌. ಶೆಟ್ಟಿ, ವಾಸು ಕೆ. ಶೆಟ್ಟಿ, ಉಪಾಧ್ಯಕ್ಷರುಗಳಾದ  ಸುಧಾಕರ ಎಸ್‌. ಶೆಟ್ಟಿ,  ಹರೀಶ್‌ ಶೆಟ್ಟಿ, ಭಾಸ್ಕರ ಎಂ. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಸುರೇಶ್‌ ಅಜಿಲ, ಧನ್‌ಪಾಲ್‌ ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ಸುಕುಮಾರ್‌ ನೈಕ್‌, ಎಕ್ಸ್‌ ಅಫೀಶಿಯೋ ವಾಸು ಕೆ. ಶೆಟ್ಟಿ ಉಪಸ್ಥಿತರಿದ್ದರು. ಕುಟುಂಬದ ಸದಸ್ಯ ಬಾಂಧವರ ಉಪಸ್ಥಿತಿಯಲ್ಲಿ ಸಮಾರಂಭವು ಜರಗಿತು. 
ಚಿತ್ರ-ವರದಿ : ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.