ಶಿಕ್ಷಕರು ಸಮಾಜದ ಶಿಲ್ಪಿಗಳು: ಗ್ರೇಸ್‌ ಪಿಂಟೋ


Team Udayavani, Sep 5, 2018, 1:39 PM IST

45.jpg

ಮುಂಬಯಿ: ಪ್ರತಿ ವರ್ಷ ಸೆ. 5ರಂದು ನಾವೆಲ್ಲಾ ನಮ್ಮ ದೇಶದ ಎರಡನೇ ರಾಷ್ಟ್ರಪತಿ ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸುತ್ತೇವೆ.  ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಒಬ್ಬ ಶ್ರೇಷ್ಠ ತಣ್ತೀಜ್ಞಾನಿ, ನೆನಪಿನಲ್ಲಿ ಅಚ್ಚಳಿಯದೆ ಉಳಿಯುವ ಶಿಕ್ಷಕ ಮಾತ್ರವಲ್ಲ ಹೃದಯವಂತಿಕೆಯಲ್ಲಿ ಒಬ್ಬ ಮಹಾನ್‌ ಮಾನವತಾವಾದಿ. ಹಾಗಾಗಿ ಈ ದೇಶದ ಭಾವೀ ನಾಯಕರನ್ನು ಬೆಳೆಸಿ, ಪೋಷಿಸುವ, ಅವರಲ್ಲಿ ದೂರದೃಷ್ಟಿತ್ವ ಬೆಳೆಸುವ ಮತ್ತು ಜವಾಬ್ದಾರಿಯುತ ನಾಗರಿಕರನ್ನು ಸೃಷ್ಟಿಸುವಲ್ಲಿ ಅಪಾರ ಕೊಡುಗೆಯನ್ನು ನೀಡುವ ಶಿಕ್ಷಕರಿಗೆ ಅವರ ಹುಟ್ಟಿದ ದಿನವನ್ನು ಅರ್ಪಿಸಲಾಗಿದೆ ಎಂದು ರಾಯನ್‌ ಇಂಟರ್‌ನ್ಯಾಷನಲ್‌ ಶಿಕ್ಷಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಮೇಡಂ ಗ್ರೇಸ್‌ ಪಿಂಟೋ ನುಡಿದರು.

ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ಮಂಗಳವಾರ ವಿದ್ಯಾರ್ಥಿಗಳನ್ನು  ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವು, ವಿದ್ಯಾರ್ಥಿ ಜೀವನದಲ್ಲಿ ದೇಶದ ಭಾವೀ ಪ್ರಜೆಗಳನ್ನು ಕೈಹಿಡಿದು ಮುನ್ನಡೆಸಿ ಉದಾತ್ತ ಮಾರ್ಗದಲ್ಲಿ ಹೆಜ್ಜೆ ಇಡಲು ಬೆಳಕು ನೀಡುವವರು ಈ ಶಿಕ್ಷಕರು. ಅವರು ಸಮಾಜಕ್ಕೆ ನೀಡುವ ನಿಷ್ಕಲ್ಮಷ ಮತ್ತು ನಿಸ್ವಾರ್ಥ ಸೇವೆಗೆ ನಾನು ಆ ಭಗವಂತನಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮೌಲ್ಯಗಳನ್ನು ತಿಳಿಹೇಳುತ್ತಾರೆ, ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ, ಕಾಳಜಿಯುಳ್ಳ ಮಾನವರಾಗಿ ರೂಪಿಸುತ್ತಾರೆ. ನಮ್ಮ ಕಳೆದ ದಿನಗಳನ್ನು ಒಂದು ಬಾರಿ ಹಿಂತಿರುಗಿ ನೋಡಿದರೆ ನಮ್ಮ ಜೀವನವನ್ನು ರೂಪಿಸಲು ಶಿಕ್ಷಕರು ನಿರ್ವಹಿಸಿದ ಪಾತ್ರದ ಮಹತ್ವವೇನು ಎಂಬುವುದು ಅರ್ಥವಾಗುತ್ತದೆ. ನಮ್ಮ ಜೀವನಕ್ಕೆ ಆಕಾರ, ಸ್ವರೂಪ ನೀಡಿದ ಶಿಕ್ಷಕರಿಗೆ ನಾವು ಚಿರಋಣಿ. ಇಂದು ತಾಂತ್ರಿಕತೆಯ ಹುಟ್ಟು ಮತ್ತು ತ್ವರಿತ ಬೆಳವಣಿಗೆ ಶಿಕ್ಷಣದ ಭೂದೃಶ್ಯವನ್ನೇ ಬದಲಾಯಿಸಿದೆ. 

ಪರಿಣಾಮವಾಗಿ ನಮ್ಮ ಶಿಕ್ಷಕರ ಪಾತ್ರವೂ ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಶಿಕ್ಷಕರು ಶಿಕ್ಷಣ ವ್ಯವಸ್ಥೆಯ ಸಮಗ್ರ ಭಾಗವಾಗಿದ್ದಾರೆ ಮತ್ತು ಈ ವಿಕಸಿಸುತ್ತಿರುವ ಜಾಗತೀಕರಣದ ಜಗತ್ತಿನಲ್ಲಿ ಶಿಕ್ಷಕರು ಎಂದಿಗೂ ನಿಂತ ನೀರಾಗಿಲ್ಲ ಅಥವಾ  ಕಲಿಕಾ ಪ್ರವೃತ್ತಿಯಲ್ಲಿ ಹಳೆಯ ಶೈಲಿಯಲ್ಲಿಲ್ಲ. ಶಿಕ್ಷಕರು ಕಲಿಕಾ ವಿಚಾರದಲ್ಲಿ ನಿರಂತರ ಮೇಲ್ದರ್ಜೆಗೇರುವ ಅಗತ್ಯವಿದೆ. ಕಲಿಕಾ ವಿಧಾನ ಮತ್ತು ಕಲಿಕಾ ವೈವಿಧ್ಯತೆಗಳನ್ನು ಅಭಿವೃದ್ಧಿಪಡಿಸುವುದು ಆವಶ್ಯಕ. ಇಂದಿನ ದಿನಗಳಲ್ಲಿ ಒಂದು ಮೌಸ್‌ ಬಟನ್‌ ಕ್ಲಿಕ್‌ ಮಾಡಿದರೆ ಎಲ್ಲಾ ವಿಷಯಗಳು ದೊರೆಯಬಲ್ಲವು, ಆದರೆ ಹೊಸ ಪರಿಕಲ್ಪನೆ ಮತ್ತು ಕೌಶಲ್ಯಗಳನ್ನು ಕಲಿಯಲು ಶಿಕ್ಷಕರ ನೆರವು ಅಗತ್ಯವಾಗಿದೆ. ವಿದ್ಯಾರ್ಥಿಗಳು ಶಿಕ್ಷಕರಲ್ಲಿ ಮಾರ್ಗದರ್ಶಕರನ್ನು ಕಾಣುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳ ಧೈರ್ಯ ಮತ್ತು ವಿಶ್ವಾಸವನ್ನು ಹೆಚ್ಚಿಸುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳ ಜೀವನಕ್ಕೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಸ್ವಸ್ಥ ಸಮಾಜದ ಭಾವೀ ಪ್ರಜೆಗಳ ನಿರ್ಮಾತೃಗಳಾಗಿದ್ದಾರೆ. 

ಈ ಬಾರಿಯ ಶಿಕ್ಷಕರ ದಿನಾಚರಣೆಗೆ ನಾವೆಲ್ಲರೂ ಸಮಾಜಕ್ಕೆ ನೀವು ನೀಡಿದ ಅಮೂಲ್ಯವಾದ ಕೊಡುಗೆಯನ್ನು ಅರ್ಥೈಸಿಕೊಂಡು ಗೌರವಿಸುತ್ತೇವೆ. ಸಮಾಜಕ್ಕೆ ನೀವು ಕೊಡುತ್ತಿರುವ ನಿಸ್ವಾರ್ಥ ಸೇವೆಯನ್ನು ಉದಾರವಾಗಿ ಮುಂದುವರಿಸಿ. ಭಗವಂತನ ಕೃಪೆ ನಿಮ್ಮೆಲ್ಲರ ಮೇಲಿರಲಿ ಎಂದು ನುಡಿದು ಶುಭಹಾರೈಸಿದರು.
 

ಟಾಪ್ ನ್ಯೂಸ್

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.