ಗುರುನಾರಾಯಣ ರಾತ್ರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ


Team Udayavani, Sep 19, 2018, 4:19 PM IST

1709mum04.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಪ್ರಾಯೋಜಿತ ಗುರುನಾರಾಯಣ ರಾತ್ರಿಶಾಲೆಯಲ್ಲಿ ಶಿಕ್ಷಕರ ದಿನಾಚರ ಣೆಯು ಸೆ. 5 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷ ಶಂಕರ ಡಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಧನಂಜಯ ಕುಮಾರ್‌, ಕಾರ್ಯಾಧ್ಯಕ್ಷ ಬಿ. ರವೀಂದ್ರ ಅಮೀನ್‌, ಸದಸ್ಯರಾದ ಆನಂದ ಪೂಜಾರಿ ಮತ್ತು ವಿಶ್ವನಾಥ ಜಗದೀಶ್‌ ಅಮೀನ್‌ ಉಪಸ್ಥಿತರಿದ್ದರು.

ಗುರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಗಣ್ಯರನ್ನು ಶಿಕ್ಷಕರು ಗೌರವಿಸಿದರು. ಉಪಾಧ್ಯಕ್ಷ ಶಂಕರ ಡಿ. ಪೂಜಾರಿ ಮತ್ತು ಪದಾಧಿಕಾರಿಗಳು ಶಾಲೆಯ ಶಿಕ್ಷಕವೃಂದದವರನ್ನು ಗೌರವಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರಂಭದಲ್ಲಿ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.

ಶಿಕ್ಷಣ ಸಮಿತಿಯ ಸದಸ್ಯ ಆನಂದ ಪೂಜಾರಿ ಅವರು ಮಾತನಾಡಿ, ಶಿಕ್ಷಣ ಇಂದು ಒಂದು ನಿರಂತರ ಪ್ರಕ್ರಿಯೆ. ಆದ್ದರಿಂದ ಉತ್ತಮ ಸಾಧನೆ ಮಾಡಲು ಆದರ್ಶ ವ್ಯಕ್ತಿಗಳ ಜೀವನವನ್ನು ಅನುಸರಿಸಬೇಕು. ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಇವರು ಶಿಕ್ಷಣ ತಜ್ಞರಾಗಿ, ಶಿಕ್ಷಣಪ್ರೇಮಿಯಾಗಿ, ಆದರ್ಶ ಶಿಕ್ಷಕರಾಗಿ ಹೆಸರು ಮಾಡಿದ್ದಾರೆ. ಶಿಕ್ಷಣದಿಂದ ವಿದ್ಯಾರ್ಥಿಗಳ ದೃಷ್ಟಿಕೋನವನ್ನು ವಿಸ್ತರಿಸುವ ಮಹಾನ್‌ ಕಾರ್ಯ ಶಿಕ್ಷಕ ರಿಂದ ಆಗುತ್ತದೆ. ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.

ಶಿಕ್ಷಣ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಕುಮಾರ್‌ ಅವರು ಮಾತನಾಡಿ, ಗುರು ವನ್ನು ಬ್ರಹ್ಮ, ವಿಷ್ಣು, ಮಹೇಶ್ವರಿಗೆ ಹೋಲಿಸುತ್ತಾರೆ. ಇದರಿಂದ ಗುರುವಿನ ಶ್ರೇಷ್ಠತ್ವ ತಿಳಿಯುತ್ತದೆ. ದೇವರಿಂದ ದೊರೆಯುವುದು ಜನ್ಮ. ಅದನ್ನು ರೂಪಿಸುವುದು ಗುರು ಮಾತ್ರ. ಗುರುಗಳು ಶಿಲ್ಪಿಯಂತೆ ಬಂಡೆಕಲ್ಲನ್ನು  ಕಡಿದು ದಿವ್ಯ ಮಂಗಳ ದೇವತಾ ವಿಗ್ರಹವಾಗಿ ಪರಿವರ್ತಿಸುತ್ತಾನೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಮಹತ್ತರವಾಗಿದೆ. ಅದಕ್ಕಾಗಿ ಪ್ರತಿಯೊಬ್ಬರು ತಮ್ಮ ಗುರುಗಳನ್ನು ನಿತ್ಯ ಜೀವನದಲ್ಲಿ ನೆನೆಯುತ್ತಲೇ ಇರಬೇಕು. ಅವರು  ಕಲಿಸಿದ ಮೌಲ್ಯಗಳನ್ನು ಅನುಸರಿಸಿ ಸಾಧನೆಗೈಯಬೇಕು ಎಂದರು.

ಕಾರ್ಯಾಧ್ಯಕ್ಷ ಬಿ. ರವೀಂದ್ರ ಅಮೀನ್‌ ಅವರು ಮಾತನಾಡಿ, ವಿದ್ಯಾರ್ಜನೆಯಿಂದ ಸ್ವತಂತ್ರರಾಗಿರಿ. ಶಿಕ್ಷಣವೇ ನಿಮ್ಮ ಬದುಕಿನ ಮೂಲ ಮಂತ್ರವಾಗಲಿ. ಮಕ್ಕಳಲ್ಲಿ ಕಲಿಕಾ ನ್ಯೂನತೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಸಲಹೆ ನೀಡುವುದು ಗುರುಗಳ ಧರ್ಮ. ಕಲಿಕೆಯಲ್ಲಿ ವಿದ್ಯಾರ್ಥಿಗಳು ಅಭಿರುಚಿ ಹೊಂದುವಂತೆ ಮಾಡು ವುದು ನಿಜವಾದ ಗುರುವಿನ ಕಾರ್ಯ ವಾಗಿದೆ. ಅಂತಹ ಶಿಕ್ಷಕ ವೃಂದ ನಮ್ಮ ಶಾಲೆಯಲ್ಲಿದ್ದಾರೆ. ಅವರ ಪ್ರಯೋ ಜನವನ್ನು ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾತೃ ಸಂಸ್ಥೆಯ ಉಪಾಧ್ಯಕ್ಷ ಶಂಕರ ಡಿ. ಪೂಜಾರಿ ಅವರು ಮಾತನಾಡಿ, ನಿಮಗೆ ಕಲಿಸಿದ ಗುರುವನ್ನು ಮತ್ತು ನೀವು ಕಲಿತ ಶಾಲೆಯನ್ನು ಎಂದಿಗೂ ಮರೆಯಬಾರದು. ಇದುವೇ ಗುರುವಿಗಾಗಿ ಮತ್ತು ಶಾಲೆಗಾಗಿ ನೀವು ಮಾಡುವ ನೈಜ ಆರಾಧನೆಯಾ ಗಿದೆ. ಜೀವನದಲ್ಲಿ ಸಾಧನೆಗೆ ಅಸಾಧ್ಯ
ವಾದುದು ಯಾವುದೂ ಇಲ್ಲ. ಆದರೆ ಸಾಧಿಸುವಾಗ ಗುರು ಹಿರಿಯರ ಆಶೀರ್ವಾದ, ಹಿರಿಯರ ಮಾರ್ಗ ದರ್ಶನವನ್ನು ಅನುಸರಿಸ ಬೇಕು. ಆಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದು ನುಡಿದರು.

ಕೊನೆಯಲ್ಲಿ ಗುರುವೃಂದದವರಿಗೆ ಮತ್ತು ಮಾತೃಸಂಸ್ಥೆಯ ಪದಾಧಿಕಾರಿ ಗಳಿಗೆ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದರು. ವಿದ್ಯಾರ್ಥಿಗಳಾದ ಪೂಜಾ, ದಿವ್ಯಾ, ಐಶ್ವರ್ಯಾ ನಿರ್ವಹಿಸಿದರು.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.