ಟೆನ್ನಿಸ್ ವಾಲಿಬಾಲ್: ಅದಿತಿ ಸಾಲ್ಯಾನ್ಗೆ ಚಿನ್ನ
Team Udayavani, Jun 27, 2017, 4:30 PM IST
ಮುಂಬಯಿ: ಚೆಂಬೂರು ತಿಲಕ್ ನಗರದ ನಿವಾಸಿ ಕು| ಅದಿತಿ ಸತೀಶ್ ಸಾಲ್ಯಾನ್ ಅವರು ನೇಪಾಳದ ಕಾಠು¾ಂಡುವಿನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಆಟವಾದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಭಾರತವು ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಹೆಜಮಾಡಿ ಮೂಲದ ಬಿಲ್ಲವರ ಸಮುದಾಯದ ಸತೀಶ್ ಕೆ. ಸಾಲ್ಯಾನ್ ಮತ್ತು ಸುರೇಖಾ ಸಾಲ್ಯಾನ್ ದಂಪತಿ ಪುತ್ರಿಯಾಗಿರುವ ಇವರು ಸತತ ಮೂರು ಬಾರಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಮುಂಬಯಿಗೆ 2ನೇ ಸ್ಥಾನವನ್ನು ಗಿಟ್ಟಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಅದಿತಿ ಅವರು ಮುಂಬಯಿಯಲ್ಲಿ ವಾಣಿಜ್ಯ ವಿಭಾಗದ ಪ್ರಥಮ ಪದವಿ ವಿದ್ಯಾರ್ಥಿನಿಯಾಗಿದ್ದು, ತನ್ನ ಸತತ ಪ್ರಯತ್ನದಿಂದ ಮತ್ತು ಅಪಾರ ಸಾಧನೆಯಿಂದ ಭಾರತಕ್ಕೆ ಚಿನ್ನದ ಪದಕ ತರುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತ ತಂಡವು ನೇಪಾಳ, ಭೂತನ್, ಪಾಕಿಸ್ಥಾನ ಮತ್ತು ಬಾಂಗ್ಲಾದೇಶಗಳನ್ನು ಸೋಲಿಸಿ ಅಂತಿಮ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ