ಥಾಣೆ ಬಂಟ್ಸ್ ಅಸೋಸಿಯೇಶನ್ : ಸೀರೆಗಳ ಪ್ರದರ್ಶನ ಮತ್ತು ಮಾರಾಟ
Team Udayavani, Oct 24, 2018, 4:35 PM IST
ಥಾಣೆ: ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ ಮಹಿಳಾ ವಿಭಾಗದ ವತಿಯಿಂದ ವೈವಿಧ್ಯಮಯ ಸೀರೆಗಳ ಪ್ರದರ್ಶನ ಮತ್ತು ಮಾರಾಟವು ಅ. 21 ರಂದು ಥಾಣೆ ಪಶ್ಚಿಮದ ಹರಿನಿವಾಸ್ ವೃತ್ತ ಬಳಿಯಿರುವ ಥಾಣೆ ಬಂಟ್ಸ್ ಅಸೋಸಿಯೇಶನ್ ಕಚೇರಿಯ ಶ್ರೀಮತಿ ರಮಾ ಡಿ. ಬೋಳಾರ್ ಸಭಾಗೃಹದಲ್ಲಿ ಯಶಸ್ವಿಯಾಗಿ ನಡೆಯಿತು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ನ್ಯಾಯವಾದಿ ಶೇಖರ್ ಶೆಟ್ಟಿ ಅವರ ಧರ್ಮಪತ್ನಿ ಅಂಜಲಿ ಶೇಖರ್ ಶೆಟ್ಟಿ ಮತ್ತು ಥಾಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಅವರ ಧರ್ಮಪತ್ನಿ ವಿಲಾಸಿನಿ ಕುಶನ್ ಭಂಡಾರಿ ಅವರು ರಿಬ್ಬನ್ ಕತ್ತರಿಸಿ, ದೀಪಪ್ರಜ್ವಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಥಾಣೆ ಬಂಟ್ಸ್ ನ ಅಧ್ಯಕ್ಷ ಕುಶಲ್ ಸಿ. ಭಂಡಾರಿ, ಉಪಾಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ, ಸ್ಥಾಪಕಾಧ್ಯಕ್ಷ ಡಿ. ಜಿ. ಬೋಳಾರ್, ಮಾಜಿ ಅಧ್ಯಕ್ಷ ಸಿಎ ಕರುಣಾಕರ ಶೆಟ್ಟಿ, ಸ್ಥಾಪಕ ಸದಸ್ಯ ಕೇಶವ ಎಂ. ಆಳ್ವ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಕುಶಲಾ ಎನ್. ಶೆಟ್ಟಿ, ಕೋಶಾಧಿಕಾರಿ ಶರ್ಮಿಳಾ ಎಸ್. ಶೆಟ್ಟಿ, ಜೊತೆ ಕಾರ್ಯದರ್ಶಿ ಮೋಹಿನಿ ಆರ್. ಶೆಟ್ಟಿ, ಜತೆ ಕೋಶಾಧಿಕಾರಿ ತಾರಾ ಪಿ. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆಯರಾದ ಸುಲೋಚನಾ ಶೆಟ್ಟಿ, ಪ್ರಮೋದಾ ಮಾಡಾ ಉಪಸ್ಥಿತರಿದ್ದರು.
ಥಾಣೆ ಬಂಟ್ಸ್ನ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಮತ್ತು ಅತಿಥಿಗಳಾಗಿ ಆಗಮಿಸಿದ ಅಂಜಲಿ ಶೇಖರ್ ಶೆಟ್ಟಿ ಹಾಗೂ ವಿಲಾಸಿನಿ ಕುಶಲ್ ಸಿ. ಭಂಡಾರಿ ಅವರಿಗೆ ಥಾಣೆ ಬಂಟ್ಸ್ನ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಅಸೋಸಿಯೇಶನ್ನ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಕುಶಲಾ ಎನ್. ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.
ದಿನಪೂರ್ತಿ ನಡೆದ ಕಾರ್ಯಕ್ರಮದಲ್ಲಿ ಗ್ರಾಹಕರು, ಸದಸ್ಯರು ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ರಿಯಾಯಿತಿ ದರದಲ್ಲಿ ನಗರದ ಪ್ರತಿಷ್ಠಿತ ಸೀರೆ ಮಳಿಗೆಗಳ ಸೀರೆಗಳಲ್ಲದೆ, ರೆಡಿಮೆಡ್ ಡ್ರೆಸ್, ಸೆಮಿಸ್ಟಿಕ್ ಡ್ರೆಸ್, ಇಮಿಟೇಶನ್ ಜ್ಯುವೆಲ್ಲರಿ ಮತ್ತು ವಿವಿಧ ವಸ್ತುಗಳು ಮಾರಾಟ ಮತ್ತು ಪ್ರದರ್ಶನದಲ್ಲಿಡಲಾಗಿತ್ತು. ಹೆಚ್ಚಿನ ಗ್ರಾಹಕರು ಇದರ ಸದುಪಯೋಗವನ್ನು ಪಡೆದು ಕೊಂಡರು. ವಿಶೇಷ ಅತಿಥಿಯಾಗಿ ಸ್ಥಳೀಯ ನಗರ ಸೇವಕಿ ಸ್ನೇಹಾ ರಮೇಶ್ ಅಮ್ರೆ ದಂಪತಿ ಆಗಮಿಸಿದ್ದರು. ಥಾಣೆ ಪರಿಸರದ ಸಮಾಜ ಸೇವಕಿ ಪುಷ್ಪಾ ಶೆಟ್ಟಿ, ಸ್ಥಳೀಯ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಚಿತ್ರ -ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ