![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
ಥಾಣೆ ನವೋದಯ ಇಂಗ್ಲಿಷ್ ಹೈಸ್ಕೂಲ್ ವಾರ್ಷಿಕೋತ್ಸವ ಸಾಧಕರಿಗೆ ಸಮ್ಮಾನ
Team Udayavani, Feb 14, 2017, 11:50 AM IST
![12-Mum08b.jpg](https://www.udayavani.com/wp-content/uploads/2017/02/14/12-Mum08b.jpg)
ಥಾಣೆ: ನವೋದಯ ಕನ್ನಡ ಸೇವಾ ಸಂಘ ಥಾಣೆ ಇದರ ಸಂಚಾಲಕತ್ವದಲ್ಲಿ ನಡೆಯುತ್ತಿರುವ ನವೋದಯ ಇಂಗ್ಲೀಷ್ ಹೈಸ್ಕೂಲಿನ 47ನೇ ವಾರ್ಷಿಕೋತ್ಸವ ಸಮಾರಂಭವು ಜ. 28ರಂದು ಥಾಣೆ ರಾಮ… ಗಣೇಶ್ ಗಡ್ಕರಿ ರಂಗಾಯತನ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಮಾರಂಭದಲ್ಲಿ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ 25 ವರ್ಷಗಳ ಅಭೂತಪೂರ್ವ ಸೇವೆ ಸಲ್ಲಿಸಿದ ರಜುಲಾ ಧರ್ಮರಾಜ್, ಮಾಧ್ಯಮಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ ಕ್ರಿಸ್ಟಿನಾ ಮಹಾಡಿಕ್ ಹಾಗೂ ಪ್ರಸ್ತುತ ವರ್ಷದಲ್ಲಿ ಸೇವೆಯಿಂದ ನಿವೃತ್ತಿ ಹೊಂದಲಿರುವ ಶಿಕ್ಷಕರಾದ ಪೂರ್ಣಿಮಾ ಡೇ, ಜಲಜಾಕ್ಷಿ ಉಚ್ಚಿಲ್, ಅರವಿಂದ್ ರಾಯರ್, ಚಂದ್ರಿಕಾ ಗೋಪಾಲನ್ ಅವರನ್ನು ಪುಷ್ಪಗುತ್ಛ ಹಾಗೂ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.
ಬಂಟರ ಸಂಘ ಮುಂಬಯಿ ಉನ್ನತ ಶಿಕ್ಷಣ ಸಂಕುಲದ ಉಪಾಧ್ಯಕ್ಷ ಬಿ. ಆರ್. ಶೆಟ್ಟಿ, ಮುಲುಂಡ್ ಬಂಟ್ಸ್ನ ಅಧ್ಯಕ್ಷ ಸುರೇಶ್ ಬಿ. ಶೆಟ್ಟಿ, ಶಾಲಾಡಳಿತ ಮಂಡಳಿಯ ಅಧ್ಯಕ್ಷ ಜಯ ಕೆ. ಶೆಟ್ಟಿ, ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ದಯಾನಂದ್ ಎಸ್. ಶೆಟ್ಟಿ, ನವೋದಯ ಇಂಗ್ಲೀಷ್ ಹೈಸ್ಕೂಲಿನ ಮುಖ್ಯೋಪಾದ್ಯಾಯಿನಿ ಅಜಿತಾ ಪ್ರದೀಪ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅನುರಾಧಾ ಅರ್ಜುನ್ ವಾಡ್ಕರ್ ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.