ಬಂಗಾರದೆಲೆಯ ಮೇಲೆ ತಂಗಾಳಿ ಬೀಸಿ ಬಂತು..
Team Udayavani, Nov 14, 2020, 8:51 AM IST
ಶರದೃತುವಿನಾಕಾಶ ಬೆಳದಿಂಗಳಾ ಲಾಸ್ಯ
ಮಂದಾಮಿಲನ ಹಾಸ ನೋಡೇ ಸಖೀ ನೀ..
ಈ ಹಾಡನ್ನು ನಾನೇ ಅದೆಷ್ಟು ಬಾರಿ ಹಾಡಿಲ್ಲ. ಆದರೆ ಶರದೃತು ಎಂದರೆ ಚಳಿಗಾಲದ ಆರಂಭ. ನವರಾತ್ರಿ ಬಳಿಕ ಮೆತ್ತಗೆ ಒಡೆಯಲು ಶುರುವಾಗುವ ಚರ್ಮ, ಹಿಮ್ಮಡಿಯಿಂದಾಗಿ ಹಾಸಿಗೆ ಹೊದಿಕೆಗಳಿಗೆ ವ್ಯಾಸಲೀನ್, ಬೊರೋಲೀನ್ಗಳ ಕಮಟು, ಇಷ್ಟು ಬಿಟ್ಟು ಬೇರಾವ ಭಾವವೂ ನನ್ನ ಮನದಲ್ಲಿ ಸುಳಿಯುತ್ತಿರಲಿಲ್ಲ.
ನಾನು ನಾರ್ದರ್ನ್ ಐರ್ಲೆಂಡ್ಗೆ ಬಂದಿದ್ದು ಅಕ್ಟೋಬರ್ ತಿಂಗಳ ಕೊನೆಯ ದಿನ. ಮೊದಲ ಮುಂಜಾವು ಕಿಟಕಿ ಪರದೆ ಸರಿಸಿ ನೋಡಿದರೆ ಎಲ್ಲ ಮರಗಳು ಅರಿಶಿನ ಕುಂಕುಮ ಹಿಡಿದು ಸ್ವಾಗತ ನಿನಗೆ ನಮ್ಮೂರಿಗೆ ಎನ್ನುತ್ತಿದ್ದವು. ಆ ಸೊಗಸು ಇನ್ನೂ ನನ್ನ ಕಣ್ಣ ಮುಂದೆ ಕಟ್ಟಿದಂತಿದೆ.
ನಮ್ಮ ಶರದೃತು ಇಲ್ಲಿನ ಆಟಮ್ ಕಾಲ. ಚಿಕ್ಕ ಚೈತ್ರದಂತೆ ಭಾಸವಾಗುತ್ತದೆ. ಜೂನ್ ತಿಂಗಳಿಂದ ಸೆಪ್ಟಂಬರ್ ಮೊದಲ ವಾರದವರೆಗೆ ಇರುವ ಬೇಸಗೆಯ ಬಿಸಿಯನ್ನೆಲ್ಲ ಈ ಎಲೆಗಳೇ ಹೀರಿಕೊಂಡವೇನೋ ಎಂಬಂತಿರುತ್ತದೆ. ಆ ಸೆಕೆ ತಾಳಲಾಗದೆ ಮರದಿಂದ ಹಣ್ಣು ಹಣ್ಣಾಗಿ ಬೀಳುತ್ತಿವೆ ಎಂಬಂತೆ ಸಿಗರ್ಮೊರ್, ಮೇಪಲ್, ಮರದ ಎಲೆಗಳು ಬಣ್ಣ ಬದಲಿಸಿಕೊಂಡು ಒಂದೊಂದಾಗಿ ಉದುರಿ ದಾರಿ ಗುಂಟ ಬಣ್ಣದ ಗುಡಾರ ಹಾಸುತ್ತವೆ.
ನಾ ಇರುವ ಪ್ರದೇಶದಲ್ಲಿ ಮರಗಳ ಎಲೆಗಳು ಹಳದಿ ನವಿರುಗೆಂಪು ಬಣ್ಣಕ್ಕೆ ತಿರುಗಿ, ಉದುರುತ್ತವೆ. ಆದರೆ ಯುನೈಟೆಡ್ ಕಿಂಗ್ಡಂನ ಇನ್ನು ಕೆಲವು ಭಾಗಗಳಲ್ಲಿ ಇವೇ ಜಾತಿಯ ಮರಗಳ ಎಲೆಗಳು ರಕ್ತಗೆಂಪು ಬಣ್ಣ ಹೊದ್ದು ಎಲೆ ಉದುರಿಸುತ್ತಾ ಬರಿದಾಗಿ ಚಳಿಗೆ ನಲುಗಲು ಸಿದ್ಧವಾಗುತ್ತವೆ.
ಫಾಲ್ ಸೀಸನ್ ಎಂದು ಕರೆಯಲ್ಪಡುವ ಈ ಕಾಲ ಅದೆಷ್ಟೋ ಕವಿಗಳಿಗೆ ಸ್ಫೂರ್ತಿ ಕೊಟ್ಟು ತನ್ನ ಮೇಲೆ ಪದ್ಯ ಬರೆಯಲು ಪ್ರೇರೇಪಿಸಿದೆ. ಎಷ್ಟೇ ಒಳ್ಳೆಯ ಛಾಯಾ ಗ್ರಾಹಕರಾದರೂ ಕಣ್ಣು ಗ್ರಹಿಸುವಷ್ಟು ಚೆಂದದ ಫಾಲ್ /ಆಟಮ್ ಚಿತ್ರಗಳನ್ನು ಕ್ಲಿಕ್ಕಿಸಲಾರರು. ಆ ನೋಟ ಬರೀ ಆನಂದಿಸುವಂಥದ್ದು. ಒಮ್ಮೊಮ್ಮೆ ಊರಿನಲ್ಲಿ ಬೇಸಗೆಗೆ ಅರಳುವ ಕಕ್ಕೆ ಹೂ, ಒಮ್ಮೊಮ್ಮೆ ಸೇವಂತಿಗೆ, ಕೆಲವೊಮ್ಮೆ ಚಿನ್ನದ ಎಲೆಗಳನ್ನೇ ಮರಕ್ಕೆ ಕಟ್ಟಿದ್ದಾರೇನೋ ಅನ್ನುವ ಭಾವ ಈ ಹಳದಿ ಮರಗಳನ್ನು ನೋಡಿದರೆ ಸ್ಪುರಿಸುತ್ತದೆ. ಇದೊಂದು ಸೊಗಸಿನ ಕಾಲ.
-ಅಮಿತಾ ರವಿಕಿರಣ್, ನಾರ್ದರ್ನ್ ಐರ್ಲೆಂಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ