ಬಂಗಾರದೆಲೆಯ ಮೇಲೆ ತಂಗಾಳಿ ಬೀಸಿ ಬಂತು..


Team Udayavani, Nov 14, 2020, 8:51 AM IST

ಬಂಗಾರದೆಲೆಯ ಮೇಲೆ ತಂಗಾಳಿ ಬೀಸಿ ಬಂತು..

ಶರದೃತುವಿನಾಕಾಶ ಬೆಳದಿಂಗಳಾ ಲಾಸ್ಯ
ಮಂದಾಮಿಲನ ಹಾಸ ನೋಡೇ ಸಖೀ ನೀ..
ಈ ಹಾಡನ್ನು ನಾನೇ ಅದೆಷ್ಟು ಬಾರಿ ಹಾಡಿಲ್ಲ. ಆದರೆ ಶರದೃತು ಎಂದರೆ ಚಳಿಗಾಲದ ಆರಂಭ. ನವರಾತ್ರಿ ಬಳಿಕ ಮೆತ್ತಗೆ ಒಡೆಯಲು ಶುರುವಾಗುವ ಚರ್ಮ, ಹಿಮ್ಮಡಿಯಿಂದಾಗಿ ಹಾಸಿಗೆ ಹೊದಿಕೆಗಳಿಗೆ ವ್ಯಾಸಲೀನ್‌, ಬೊರೋಲೀನ್‌ಗಳ ಕಮಟು, ಇಷ್ಟು ಬಿಟ್ಟು ಬೇರಾವ ಭಾವವೂ ನನ್ನ ಮನದಲ್ಲಿ ಸುಳಿಯುತ್ತಿರಲಿಲ್ಲ.

ನಾನು ನಾರ್ದರ್ನ್ ಐರ್ಲೆಂಡ್‌ಗೆ ಬಂದಿದ್ದು ಅಕ್ಟೋಬರ್‌ ತಿಂಗಳ ಕೊನೆಯ ದಿನ. ಮೊದಲ ಮುಂಜಾವು ಕಿಟಕಿ ಪರದೆ ಸರಿಸಿ ನೋಡಿದರೆ ಎಲ್ಲ ಮರಗಳು ಅರಿಶಿನ ಕುಂಕುಮ ಹಿಡಿದು ಸ್ವಾಗತ ನಿನಗೆ ನಮ್ಮೂರಿಗೆ ಎನ್ನುತ್ತಿದ್ದವು. ಆ ಸೊಗಸು ಇನ್ನೂ ನನ್ನ ಕಣ್ಣ ಮುಂದೆ ಕಟ್ಟಿದಂತಿದೆ.

ನಮ್ಮ ಶರದೃತು ಇಲ್ಲಿನ ಆಟಮ್‌ ಕಾಲ. ಚಿಕ್ಕ ಚೈತ್ರದಂತೆ ಭಾಸವಾಗುತ್ತದೆ. ಜೂನ್‌ ತಿಂಗಳಿಂದ ಸೆಪ್ಟಂಬರ್‌ ಮೊದಲ ವಾರದವರೆಗೆ ಇರುವ ಬೇಸಗೆಯ ಬಿಸಿಯನ್ನೆಲ್ಲ ಈ ಎಲೆಗಳೇ ಹೀರಿಕೊಂಡವೇನೋ ಎಂಬಂತಿರುತ್ತದೆ. ಆ ಸೆಕೆ ತಾಳಲಾಗದೆ ಮರದಿಂದ ಹಣ್ಣು ಹಣ್ಣಾಗಿ ಬೀಳುತ್ತಿವೆ ಎಂಬಂತೆ ಸಿಗರ್ಮೊರ್‌, ಮೇಪಲ್, ಮರದ ಎಲೆಗಳು ಬಣ್ಣ ಬದಲಿಸಿಕೊಂಡು ಒಂದೊಂದಾಗಿ ಉದುರಿ ದಾರಿ ಗುಂಟ ಬಣ್ಣದ ಗುಡಾರ ಹಾಸುತ್ತವೆ.

ನಾ ಇರುವ ಪ್ರದೇಶದಲ್ಲಿ ಮರಗಳ ಎಲೆಗಳು ಹಳದಿ ನವಿರುಗೆಂಪು ಬಣ್ಣಕ್ಕೆ ತಿರುಗಿ, ಉದುರುತ್ತವೆ. ಆದರೆ ಯುನೈಟೆಡ್‌ ಕಿಂಗ್‌ಡಂನ ಇನ್ನು ಕೆಲವು ಭಾಗಗಳಲ್ಲಿ ಇವೇ ಜಾತಿಯ ಮರಗಳ ಎಲೆಗಳು ರಕ್ತಗೆಂಪು ಬಣ್ಣ ಹೊದ್ದು ಎಲೆ ಉದುರಿಸುತ್ತಾ ಬರಿದಾಗಿ ಚಳಿಗೆ ನಲುಗಲು ಸಿದ್ಧವಾಗುತ್ತವೆ.

ಫಾಲ್‌ ಸೀಸನ್‌ ಎಂದು ಕರೆಯಲ್ಪಡುವ ಈ ಕಾಲ ಅದೆಷ್ಟೋ ಕವಿಗಳಿಗೆ ಸ್ಫೂರ್ತಿ ಕೊಟ್ಟು ತನ್ನ ಮೇಲೆ ಪದ್ಯ ಬರೆಯಲು ಪ್ರೇರೇಪಿಸಿದೆ. ಎಷ್ಟೇ ಒಳ್ಳೆಯ ಛಾಯಾ ಗ್ರಾಹಕರಾದರೂ ಕಣ್ಣು ಗ್ರಹಿಸುವಷ್ಟು ಚೆಂದದ ಫಾಲ್‌ /ಆಟಮ್‌ ಚಿತ್ರಗಳನ್ನು ಕ್ಲಿಕ್ಕಿಸಲಾರರು. ಆ ನೋಟ ಬರೀ ಆನಂದಿಸುವಂಥದ್ದು. ಒಮ್ಮೊಮ್ಮೆ ಊರಿನಲ್ಲಿ ಬೇಸಗೆಗೆ ಅರಳುವ ಕಕ್ಕೆ ಹೂ, ಒಮ್ಮೊಮ್ಮೆ ಸೇವಂತಿಗೆ, ಕೆಲವೊಮ್ಮೆ ಚಿನ್ನದ ಎಲೆಗಳನ್ನೇ ಮರಕ್ಕೆ ಕಟ್ಟಿದ್ದಾರೇನೋ ಅನ್ನುವ ಭಾವ ಈ ಹಳದಿ ಮರಗಳನ್ನು ನೋಡಿದರೆ ಸ್ಪುರಿಸುತ್ತದೆ. ಇದೊಂದು ಸೊಗಸಿನ ಕಾಲ.


-ಅಮಿತಾ ರವಿಕಿರಣ್‌, ನಾರ್ದರ್ನ್ ಐರ್ಲೆಂಡ್‌

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.