ನಾಡಿನ ಸಂಸ್ಕೃತಿ-ಸಂಸ್ಕಾರಗಳನ್ನು ಯುವ ಪೀಳಿಗೆಗೆ ಪರಿಚಯಿಸಬೇಕು: ವಿನೋದಾ ಡಿ. ಶೆಟ್ಟಿ

ತುಳು ವೆಲ್ಫೇರ್ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ಆಟಿದ ನೆಂಪು ಕಾರ್ಯಕ್ರಮ

Team Udayavani, Sep 23, 2021, 2:48 PM IST

ನಾಡಿನ ಸಂಸ್ಕೃತಿ-ಸಂಸ್ಕಾರಗಳನ್ನು ಯುವ ಪೀಳಿಗೆಗೆ ಪರಿಚಯಿಸಬೇಕು: ವಿನೋದಾ ಡಿ. ಶೆಟ್ಟಿ

ಡೊಂಬಿವಲಿ: ಡೊಂಬಿವಲಿ ಪಶ್ಚಿಮದ ತುಳು ವೆಲ್ಫೇರ್ ಅಸೋಸಿಯೇಶನ್‌ನ ಮಹಿಳಾ ವಿಭಾಗದ ವತಿಯಿಂದ ಅಟಿದ ನೆಂಪು ವಿಶೇಷ ಕಾರ್ಯಕ್ರಮವು ಇತ್ತೀಚೆಗೆ ಸಂಸ್ಥೆಯ ಕಾರ್ಯಾಲಯದಲ್ಲಿ ಜರಗಿತು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳುನಾಡಿನ ಸಂಸ್ಕೃತಿ, ಅಚಾರ, ವಿಚಾರಗಳನ್ನು ಮಹಾ ನಗರದಲ್ಲಿರುವ ಯುವ ಪೀಳಿಗೆಗೆ ತಿಳಿ ಸುವ ಪ್ರಯತ್ನವನ್ನು ಮಾಡಬೇಕಾಗಿದೆ. ಅದರೊಂದಿಗೆ ಕೆಲವೊಂದು ಸಂಘ, ಸಂಸ್ಥೆ ಆಯೋಜಿಸಿದ ಅಟಿಡೊಂಜಿದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಬೇಕು.

ವರ್ಷಕ್ಕೊಮ್ಮೆ ಇಂತಹ ಕಾರ್ಯಕ್ರಮ ಅಯೋಜಿಸಿದ್ದಲ್ಲಿ ನಮ್ಮವರ ತಿಂಡಿ ತಿನಿಸುಗಳನ್ನು ಆಸ್ವಾದಿಸುವ ಅವಕಾಶಗಳು ಸಿಗುತ್ತದೆ. ಕೊರೊನಾ ಮಹಾಮಾರಿಯ ಈ ಸಂದರ್ಭದಲ್ಲೂ ಹೆಚ್ಚಿನ ಸಂಖ್ಯೆಯ ಮಹಿಳೆಯರು ವೈವಿಧ್ಯಮಯ ತಿಂಡಿ-ತಿನಿಸುಗಳನ್ನು ತಯಾರಿಸಿ ತಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದನ್ನು ಕಂಡು ಸಂತೋಷವಾಗಿದೆ ಎಂದರು.

ಸಂಘದ ಅದ್ಯಕ್ಷ ಯು. ಲಕ್ಷ್ಮಣ್‌ ಸುವರ್ಣ ಮಾತಾನಾಡಿ, ಮಹಿಳಾ ವಿಭಾಗ ಸಂಘದ ಪ್ರತಿಯೊಂದು ಕಾರ್ಯಕ್ರಮ ದಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿರು ವುದರೊಂದಿಗೆ ಮಹಿಳಾ ವಿಭಾಗ ತನ್ನದೇ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಇಂದು ಅಟಿದ ನೆಂಪು ಕಾರ್ಯಕ್ರಮ ದಲ್ಲೂ ಮಹಿಳೆಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ತುಳುಶ್ರೀ ಕ್ರೆಡಿಟ್‌ ಸೊಸೈಟಿಗೂ ಮಹಿಳೆಯರ ಸಹಕಾರ ದೊರೆಯಲಿ ಎಂದರು.

ಇದನ್ನೂ ಓದಿ:ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಮುಖ್ಯ ಅತಿಥಿ ರವಿ ಸನಿಲ್‌ ಮತಾನಾಡಿ, ನಾನು ಚಿಕ್ಕಂದಿನಿಂದಲೇ ತುಳುನಾಡಿನ ಅಚಾರ ವಿಚಾರಗಳನ್ನು ತಾಯ್ನಾಡಿನಲ್ಲೆ ತಿಳಿದು ಕೊಂಡಿದ್ದೇನೆ. ಹಿಂದಿನ ಕಾಲದಲ್ಲಿ ಕಷ್ಟ ಇದ್ದರೂ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕುತ್ತಿದ್ದರು. ಇಂದು ಎಲ್ಲ ಸೌಕರ್ಯಗಳಿದ್ದರೂ ನೆಮ್ಮದಿ ಮಾಯಾವಾಗಿದೆ. ಮಾಯಾ ನಗರಿಯಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ಮಹಿಳೆಯರಿಗೆ ವಂದನೆಗಳು ಎಂದರು.

ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಣ್‌ ಮೂಲ್ಯ ಮತಾನಾಡಿ, ಮಹಾಮಾರಿಯಿಂದಾಗಿ ಹೆಚ್ಚಿನ ಸಂಖ್ಯೆಯ ಮಹಿಳೆಯರನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಿಲ್ಲ. ಮುಂದಿನ ದಿನಗಳಲ್ಲಿ ಮಹಾಮಾರಿ ದೂರವಾದರೆ ಎಲ್ಲರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವ ಕಾಶ ನಿಡೋಣ. ಅಟಿ ತಿಂಗಳಲ್ಲಿ ಮಳೆಯ ಅನಂದವೇ ಬೇರೆ ಆ ದಿನಗ‌ಳಲ್ಲಿ ಎಷ್ಟು ಕಷ್ಟವಿದ್ದರೂ ಒಬ್ಬರಿಗೊಬ್ಬರು ಸಹಾಯ, ಸಹಕಾರ ನೀಡುತ್ತಿದ್ದರು ಎಂದರು.

ಸಂಘದ ಸಲಹೆಗಾರರಾದ ದೇವದಾಸ್‌ ಕುಲಾಲ್‌ ಮತನಾಡಿ, ತುಳುನಾಡಿನ ಅಚಾರ, ವಿಚಾರ ವಿಶ್ವಕ್ಕೆ ಮಾದರಿಯಾಗಿದೆ. ತುಳುವರು ಜಗತ್ತಿನ ಯಾವ ಮೂಲೆಗೆ ಹೋದರೂ ನಮ್ಮ ಸಂಸ್ಕೃತಿಯನ್ನು ಬಿಡುವುದಿಲ್ಲ. ಮಹಾನಗರದಲ್ಲಿ ತುಳು-ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆ ಯಲ್ಲಿದ್ದು ಪ್ರತಿಯೊಂದು ಸಂಘ, ಸಂಸ್ಥೆ, ನಮ್ಮ ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಿಳಿಸುವ ಪ್ರಯತ್ನವನ್ನು ಮಾಡುತ್ತಿದೆ. ಮಹಿಳಾ ವಿಭಾಗದ ಇಂತಹ ಕಾರ್ಯಕ್ರಮಗಳು ಅಭಿನಂದನೀಯ ಎಂದರು.

ವಸಂತ ಸುವರ್ಣ ಅವರು ಮಾತನಾಡಿ, ಹೆಚ್ಚಿನ ಸಂಘ-ಸಂಸ್ಥೆಗಳು ಅಟಿ ತಿಂಗಳ ಆಚರಣೆಯನ್ನು ಮಾಡುವುದರಿಂದ ವಿವಿಧ ತಿಂಡಿ ತಿನಸುಗಳ ಹೆಸರು ಇತಿಹಾಸ ಪುಟಕ್ಕೆ ಸೇರುವುದನ್ನು ತಪ್ಪಿಸಿದ್ದಾರೆ. ಹಿಂದಿನ ದಿನಗಳಲ್ಲಿ ಮಳೆಗಾಲದಲ್ಲಿ ಬಹಳ ಕಷ್ಟದ ದಿನ. ಅದರೆ ಇಂದು ಎಲ್ಲರೂ ಕಷ್ಟದಿಂದ ಸ್ವಲ್ಪ ಹೊರ ಬಂದಿದ್ದಾರೆ. ಇಂತಹ ಕಾರ್ಯಕ್ರಮದ ಮೂಲಕ ನಮ್ಮ ತಿಂಡಿಗಳ ರುಚಿಯನ್ನು ಒಂದೇ ಸ್ಥಳದಲ್ಲಿ ಸವಿಯುವ ಅವಕಾಶ ಸಿಕ್ಕಿದೆ ಎಂದರು.

ಗಂಗಾದರ ಶೆಟ್ಟಿಗಾರ್‌ ಹಾಲೆ ಮರದ ಕೆತ್ತೆಯ ಮದ್ದಿನ ವಿಶೇಷತೆಯನ್ನು ತಿಳಿಸುದರೊಂದಿಗೆ ಮನೆಯಲ್ಲಿ ಮಾಡಬಹುದಾದ ಹಲವು ಮದ್ದಿನ ವಿವರಗಳನ್ನು ನೀಡಿದರು. ವಿನೋದಾ ಪದ್ಮ ಶೇಖರ್‌ ಪುತ್ರನ್‌ ಅವರು ಅಟಿ ತಿಂಗಳ ಮಹತ್ವವನ್ನು ಸವಿಸ್ತಾರವಾಗಿ ಸಭೆಗೆ ತಿಳಿಸಿದರು.

ಶಾಂತಾ ಅಮೀನ್‌ ಮತ್ತು ಶೋಭಾ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಂಘದ ಗೌರವಾಧ್ಯಕ್ಷ ಯು. ಲಕ್ಷ್ಮಣ್‌ ಸುವರ್ಣ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುನಂದಾ ಶೆಟ್ಟಿ ಮತ್ತು ಜಯಂತಿ ಶೆಟ್ಟಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ತಾರಾನಾಥ ಕುಂದರ್‌, ವಿನೋದಾ ದೇವದಾಸ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವಿನೋದಾ ಪದ್ಮಶೇಖರ್‌ ಪುತ್ರನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.