ಅಮೆರಿಕಾದಲ್ಲಿ  ಹುಬ್ಬಳ್ಳಿ ವೈದ್ಯನ ಸಾಧನೆ

ಕೊರೊನಾ ವಿರುದ್ಧ ಹೋರಾಟ: ಕನ್ನಡಿಗನಿಗೆ ಪ್ರಶಂಸೆಯ  ಹೂಮಳೆ

Team Udayavani, Nov 28, 2020, 3:53 PM IST

ಅಮೆರಿಕಾದಲ್ಲಿ  ಹುಬ್ಬಳ್ಳಿ ವೈದ್ಯನ ಸಾಧನೆ

ಲೂಯಿಸಿಯಾನ: ಕೊರೊನಾ ವಿರುದ್ಧದ ಹೋರಾಟದಲ್ಲಿ  ತಮ್ಮ ಕುಟುಂಬವನ್ನು ಲೆಕ್ಕಿಸದೆ ಅಮೆರಿಕದಲ್ಲಿ ಸೇವೆ ಸಲ್ಲಿಸುತ್ತಿರುವ ಹುಬ್ಬಳಿ ವೈದ್ಯರೊಬ್ಬರ ಸಾಧನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ  ಮೆಚ್ಚುಗೆಗೆ ಪಾತ್ರವಾಗಿದೆ.

38 ವರ್ಷದ ಡಾ| ಶ್ರೀಧರ ಕುಲಕರ್ಣಿ  ತಮ್ಮ ಕಾರ್ಯದ ಮೂಲಕ ಯುಎಸ್‌ನಲ್ಲಿ  ಗುರುತಿಸಿಕೊಂಡಿದ್ದಾರೆ. ಕೋವಿಡ್‌- 19 ರೋಗಿಗಳಿಗೆ ಚಿಕಿತ್ಸೆ  ನೀಡುವುದು ಮಾತ್ರವಲ್ಲ ವೈರಾಣು ಸುತ್ತಮುತ್ತಲಿನ ಭಾರತೀಯ ವೈದ್ಯರ ಕೆಲಸದ ಕುರಿತಾದ ಸಾಕ್ಷ್ಯಚಿತ್ರದಲ್ಲಿ ಪಾಲ್ಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಲೂಯಿಸಿಯಾನ ಸ್ಟೇಟ್‌ ಯೂನಿವರ್ಸಿಟಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ| ಶ್ರೀಧರ ಕುಲಕರ್ಣಿ, ಹಾಲಿವುಡ್‌ ಚಲನಚಿತ್ರ ಬರಹಗಾರ್ತಿ ಮತ್ತು ನಿರ್ಮಾಪಕಿ ಶ್ವೇತಾ ರಾಯ್‌ ನಿರ್ಮಿಸಿರುವ “ಎ ಪೆಂಡಾಮಿಕ್‌: ಅವೇ ಫ್ರಮ್‌ ದಿ ಮದರ್‌ ಲ್ಯಾಂಡ್‌ (2020)’ ಎಂಬ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆರು ಭಾರತೀಯ ವೈದ್ಯರು ತಮ್ಮ ತಾಯ್ನಾಡು,  ಹೆತ್ತವರು ಹಾಗೂ ಕುಟುಂಬದಿಂದ ದೂರ ಉಳಿದುಕೊಂಡು ಸೇವೆ ಸಲ್ಲಿಸುತ್ತಿರುವುದನ್ನು ಸಾಕ್ಷ್ಯಚಿತ್ರದಲ್ಲಿ ಬಿಂಬಿಸಲಾಗಿದೆ.

ಇದನ್ನೂ ಓದಿ:ದೀಪಾವಳಿ ಆಚರಣೆ: ‘ರಾಗ ಆರೋಗ್ಯ’ ಸಂಗೀತ ಕಾರ್ಯಕ್ರಮ

ಡಾ| ಕುಲಕರ್ಣಿ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಕಲಘಟಗಿಯ ಜನತಾ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿದರು. ಎಸೆಸೆಲ್ಸಿಯಲ್ಲಿ 20ನೇ ರ್‍ಯಾಂಕ್‌ ಪಡೆದ ಅವರು, ಧಾರವಾಡದ ಜೆಎಸ್‌ಎಸ್‌ನಲ್ಲಿ ಪಿಯುಸಿ ಮುಗಿಸಿ ಸಿಇಟಿಯಲ್ಲಿ 413ನೇ  ರ್‍ಯಾಂಕ್‌ ಪಡೆದರು. ಬಳಿಕ ಹುಬ್ಬಳ್ಳಿ ಕಿಮ್ಸ್ ನಲ್ಲಿ ಎಂಬಿಬಿಎಸ್‌ಗೆ ಸೇರಿ 2006ರಲ್ಲಿ ಕಿಮ್ಸ್ ಹುಬ್ಬಳ್ಳಿಯಲ್ಲಿ ಪದವಿ ಪೂರ್ಣಗೊಳಿಸಿದರು.

ಅನಂತರ ಸ್ಪ್ರಿಂಗ್‌ ಫೈಲ್ಡ್ ಲಿನಾಯ್ಸಗೆ ತೆರಳಿದ ಅವರು, ಅಲ್ಲಿ ಎಂಡಿ ಕೋರ್ಸ್‌ ಮುಗಿಸಿ ಸದ್ಯ ಲೂಸಿಯಾನ ರಾಜ್ಯ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಮೆಡಿಸಿನ್‌ ಸಿಮ್ಸ್ ನಲ್ಲಿ  2018ರಿಂದ ಕೆಲಸ ಮಾಡುತ್ತಿದ್ದಾರೆ.

ಡಾ| ಶ್ರೀಧರ ಅವರು ಐಸಿಯು ವಿಭಾಗದಲ್ಲಿ ತೀವ್ರವಾದ ಉಸಿರಾಟದ ತೊಂದರೆ ಸಿಂಡ್ರೋಮ್‌ (ಎಆರ್‌ಡಿಎಸ್‌) ಹೊಂದಿರುವ ರೋಗಿಗಳಿಗೆ ಚಿಕಿತ್ಸೆ ನೀಡುವುದರಲ್ಲಿ  ಪರಿಣಿತಿ ಹೊಂದಿದ್ದಾರೆ. ಈ ಕುರಿತು ಸಂಶೋಧನಾ ಅಧ್ಯಯನದಲ್ಲಿ ಅವರು ಗಮನಾರ್ಹ ಕೆಲಸ ಮಾಡಿದ್ದು, ಕೋವಿಡ್‌ ರೋಗಿಗಳ ಉಸಿರಾಟದ ಸಮಸ್ಯೆಗಳ ಅತ್ಯಂತ ಆತಂಕಕಾರಿ ಲಕ್ಷಣ ಗುರುತಿಸುವಲ್ಲಿ ತಜ್ಞರಾಗಿದ್ದಾರೆ.

ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ಹೆತ್ತವರಿಗೆ ಮಾತ್ರವಲ್ಲ ದೇಶವೇ ಹೆಮ್ಮೆ ಪಡುವಂತ ಸಾಧನೆಯಾಗಿದೆ.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.