ಖಾಲಿ ಹಾಸಿಗೆಗಳ ಸಂಖ್ಯೆ ಶೇ.18ರಷು ಹೆಚ್ಚಳ


Team Udayavani, Jun 28, 2020, 4:36 PM IST

ಖಾಲಿ ಹಾಸಿಗೆಗಳ ಸಂಖ್ಯೆ ಶೇ.18ರಷು ಹೆಚ್ಚಳ

ಸಾಂದರ್ಭಿಕ ಚಿತ್ರ

ಮುಂಬಯಿ, ಜೂ. 27: ನಗರದಲ್ಲಿ ಕೋವಿಡ್‌-19 ಪ್ರಕರಣಗಳು ಕಡಿಮೆಯಾಗುವುದರೊಂದಿಗೆ, ಆಸ್ಪತ್ರೆಗಳಲ್ಲಿ ಖಾಲಿ ಇರುವ ಹಾಸಿಗೆಗಳ ಸಂಖ್ಯೆ ಜೂನ್‌ ಮೊದಲ ವಾರಕ್ಕೆ ಹೋಲಿಸಿದರೆ ಪ್ರಸ್ತುತ ಶೇ. 18ರಷ್ಟು ಹೆಚ್ಚಾಗಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಅಂಕಿಅಂಶಗಳು ತಿಳಿಸಿವೆ.

ಅಲ್ಲದೆ ಬಿಎಂಸಿ ನಡೆಸುವ ಆಸ್ಪತ್ರೆಗಳಲ್ಲಿ ಸೋಂಕಿತರ ಸಂಖ್ಯೆಯಲ್ಲೂ ಇಳಿಕೆ ಕಂಡುಬಂದಿದೆ. ಜೂನ್‌ 6ರಂದು ಕೋವಿಡ್ ಆಸ್ಪತ್ರೆಗಳು ಮತ್ತು ಕೊರೊನಾ ಹೆಲ್ಸತ್‌ ಸೆಂಟರ್‌ಗಳಲ್ಲಿ ಸೋಂಕಿತರಿಗೆ ಒಟ್ಟು 9,092 ಹಾಸಿಗೆಗಳನ್ನು ಕಾಯ್ದಿರಿಸಲಾಗಿತ್ತು. ಈ ಪೈಕಿ 8,570 ಹಾಸಿಗೆಗಳು ಭರ್ತಿಯಾಗಿದ್ದು, 522 ಹಾಸಿಗೆಗಳು ಖಾಲಿ ಇವೆ. ಪ್ರಕರಣಗಳ ಏರಿಕೆಯ ನಿರೀಕ್ಷೆಯಲ್ಲಿ, ಬಿಎಂಸಿ ಕಳೆದ 18 ದಿನಗಳಲ್ಲಿ ಹಾಸಿಗೆಯ ಸಂಖ್ಯೆಯನ್ನು 3,000ಕ್ಕೆ ಹೆಚ್ಚಿಸಿದೆ. ಪ್ರಸ್ತುತ ಬಿಎಂಸಿಯ ಈ ಆಸ್ಪತ್ರೆಗಳಲ್ಲಿ 12,130 ಹಾಸಿಗೆಗಳಿದ್ದು, ಅದರಲ್ಲಿ 2,923 ಹಾಸಿಗೆಗಳು ಲಭ್ಯವಿದೆ.

ಹಾಸಿಗೆಗಳ ಸಂಖ್ಯೆಯಲ್ಲೂ ಹೆಚ್ಚಳ :  ವೇಗವಾಗಿ ಚೇತರಿಕೆ ದರ ಮತ್ತು ಕಡಿಮೆ ಪ್ರಕರಣಗಳೊಂದಿಗೆ ನಗರದಲ್ಲಿ ಈಗ ಹೆಚ್ಚಿನ ಹಾಸಿಗೆಗಳು ಲಭ್ಯವಿದೆ. ಅನೇಕ ಸೋಂಕಿತರು ವಿಶೇಷವಾಗಿ ವೆಂಟಿಲೇಟರ್‌ ಬೆಂಬಲದ ಅಗ್ಯವಿರುವವರನ್ನು ಕೋವಿಡ್ ಆಸ್ಪತ್ರೆಗಳಿಗೆ ಹಿಂದೆಯೇ ದಾಖಲಿಸಲಾಗಿತ್ತು, ಇಂತಹ ಗಂಭೀರ ಸೋಂಕಿತರ ಸಂಖ್ಯೆಯೂ ಪ್ರಸ್ತುತ ಕಡಿಮೆಯಾಗುತ್ತಿದೆ ಎಂದು ರಾಜ್ಯದ ಕೋವಿಡ್‌ -19 ಕಾರ್ಯಪಡೆಯ ಸದಸ್ಯ ಡಾ| ಶಶಾಂಕ್‌ ಜೋಶಿ ಹೇಳಿದರು. ಖಾಲಿ ಇರುವ ಹಾಸಿಗೆಗಳಲ್ಲಿ ಹೆಚ್ಚಿನವು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದು, ಅದರ ಸಾಮರ್ಥ್ಯವನ್ನು ಇತ್ತೀಚೆಗೆ 1,102 ಹಾಸಿಗೆಗಳಿಂದ 1,362ಕ್ಕೆ ಹೆಚ್ಚಿಸಲಾಗಿದೆ. ಜೂನ್‌ 24ರ ಹೊತ್ತಿಗೆ, 108 ಐಸಿಯು ಹಾಸಿಗೆಗಳು (ಶೇ. 7.9) ಲಭ್ಯವಿತ್ತು. ಪರೇಲ್‌ನ ಕೆಇಎಂ ಆಸ್ಪತ್ರೆಯ ಡೀನ್‌ ಡಾ| ಹೇಮಂತ್‌ ದೇಶ್ಮುಖ್‌ ಅವರು ಒಟ್ಟು ಹಾಸಿಗೆಗಳಲ್ಲಿ ಶೇ. 25ರಷ್ಟು ಖಾಲಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಸೋಂಕು ಪ್ರಕರಣದ ಒತ್ತಡ ಕಡಿಮೆಯಾಗಿದೆ : ಆಸ್ಪತ್ರೆಯಲ್ಲಿ ಸೋಂಕು ಪ್ರಕರಣಗಳ ಒತ್ತಡ ಕಡಿಮೆಯಾಗಿದೆ ಎಂದು ಲೋಕಮಾನ್ಯ ತಿಲಕ್‌ ಜನರಲ್‌ ಆಸ್ಪತ್ರೆಯ ಉಸ್ತುವಾರಿ ಡಾ| ರಮೇಶ್‌ ಭರ್ಮಲ್‌ ಅವರು ಹೇಳಿದ್ದಾರೆ. ನಾವು ಹೆಚ್ಚಿನ ಹಾಸಿಗೆಗಳನ್ನು ವ್ಯವಸ್ಥೆ ಮಾಡಿದ್ದು. ಸದ್ಯ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿದೆ. ಈಗ ನಾವು ಪ್ರತಿದಿನ 30-40 ಹಾಸಿಗೆಗಳನ್ನು ಖಾಲಿ ಹೊಂದಿದ್ದೇವೆ ಎಂದು ಅವರು ಹೇಳಿದರು. ಪ್ರಸ್ತುತ 5,901 ಮಂದಿ ಸೋಂಕಿತರು ಆಮ್ಲಜನಕ ಸೌಲಭ್ಯ ಹೊಂದಿರುವ ಹಾಸಿಗೆಗಳಲ್ಲಿದ್ದಾರೆ ಎಂದು ಬಿಎಂಸಿಯ ಅಂಕಿ ಅಂಶಗಳು ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.