“ಸಮಗ್ರ ಮಹಾಭಾರತವನ್ನು ಕನ್ನಡಕ್ಕೆ ಕೊಟ್ಟ ಏಕೈಕ ಕವಿ ಪರಮದೇವ”


Team Udayavani, May 5, 2021, 1:21 PM IST

The only poet Paramadeva “

ಮುಂಬಯಿ: ಸಾಗರ ತಾಲೂಕಿನ ಕೊಡಚಾದ್ರಿ ಸೀಮೆಯ ಸುಳಿಗೋಡಿನ ಪರಮದೇವ ಕವಿ ವೈದಿಕ ಪರಂಪರೆ ಅನುಸರಿಸಿದವನು. ಪೂರ್ವ ಕವಿಗಳು ರಚಿಸಿದ ವ್ಯಾಸಭಾರತ ಆಧಾರಿತ ಕೃತಿಗಳನ್ನು ಅಧ್ಯಯನ ಮಾಡಿದ ಈತ ಹದಿನೆಂಟು ಪರ್ವಗಳ ವ್ಯಾಸ ಭಾರತವನ್ನು ನಾಲ್ಕು ಸಾವಿರಕ್ಕೂ ಮಿಕ್ಕಿದ ವಾರ್ಧಕ ಷಟ³ದಿಯ ಪದ್ಯಗಳಲ್ಲಿ ಕಟ್ಟಿಕೊಟ್ಟಿದ್ದಾನೆ. ಕತೆಯ ಕಡೆ ಹೆಚ್ಚಿನ ಗಮನ ಹರಿಸಿ ಸುಲಲಿತ ಶೈಲಿಯಲ್ಲಿ ಎಲ್ಲಿಯೂ ಬೇಸರ ಹುಟ್ಟದಂತೆ ತುರಂಗ ಗತಿಯ ಲಯದಲ್ಲಿ ಕವಿ ಕಾವ್ಯವನ್ನು ರಚಿಸಿ¨ªಾನೆ. ಸಮಗ್ರ ಮಹಾಭಾರತವನ್ನು ಕನ್ನಡಕ್ಕೆ ತಂದುಕೊಟ್ಟ ಏಕೈಕ ಕವಿ ಪರಮದೇವ ಕವಿ ಎಂದು ಖ್ಯಾತ ಸಾಹಿತಿ, ವಿದ್ವಾಂಸರಾದ ನಾಡೋಜ ಡಾ| ಕಮಲಾ ಹಂಪನಾ ತಿಳಿಸಿದರು.

ಎ. 30ರಂದು ಕನ್ನಡ ವಿಭಾಗ ಮುಂಬಯಿ ವಿವಿ ಹಾಗೂ ಹವ್ಯಕ ವೆಲ್ಫೆàರ್‌ ಟ್ರಸ್ಟ್‌ ಮುಂಬಯಿ ಸಂಯುಕ್ತವಾಗಿ ಆನ್‌ಲೈನ್‌ ಮುಖಾಂತರ  ಆಯೋಜಿಸಿದ ಮಹಾಭಾರತ ವೈಭವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸಕರಾಗಿ ಮಾತನಾಡಿದರು.

ಪರಮದೇವ ತನ್ನ ಕಾವ್ಯದಲ್ಲಿ ನವರಸಗಳನ್ನು ತಂದರೂ ಯಾವುದನ್ನೂ ಅತಿಯಾಗಿ ಬಳಸಿಲ್ಲ. ಅಲ್ಲದೇ ಕವಿ ತನ್ನ ಜೀವನ ವೃತ್ತಾಂತವನ್ನು ಕೃತಿಯಲ್ಲಿ ಹೇಳಿಕೊಂಡಿರುವುದು ಮೆಚ್ಚುಗೆಯ ವಿಷಯ. ವ್ಯಾಸಭಾರತದಂತಹ ಬೃಹತ್‌ ಕೃತಿಯನ್ನು ಕನ್ನಡಕ್ಕೆ ತಂದಿರುವುದೇ ಸಾಹಸದ ಕತೆ. ಈ ಮೂಲಕ ಕವಿ ಕನ್ನಡಿಗರಿಗೆ ಹಾಗೂ ಕನ್ನಡ ಸಾಹಿತ್ಯಕ್ಕೆ ದೊಡ್ಡ ಉಪಕಾರ ಮಾಡಿದ್ದಾರೆ. ಅವರನ್ನು ಎಷ್ಟು ಸ್ಮರಿಸಿದರೂ ಸಾಲದು ಎಂದು ತಿಳಿಸಿದರು.

ತುರಂಗ ಭಾರತ ಒಂದು ಅಧ್ಯಯನ ಎಂಬ ಮಹಾಪ್ರಬಂಧವನ್ನು ಮಂಡಿಸಿ ಪಿಎಚ್‌ಡಿ ಪದವಿ ಪಡೆದ ಕಮಲಾ ಹಂಪನಾ ಅವರು

ತಮ್ಮ ಅಧ್ಯಯನ ಕಾಲದ ಅನುಭವನ್ನು ಈ ಸಂದರ್ಭ ಹಂಚಿಕೊಂಡರು.

ಉಪನ್ಯಾಸ ಕಾರ್ಯಕ್ರಮದ ಎರಡನೇ ಹಂತದಲ್ಲಿ ನಾಮಾಂಕಿತ ಸಂಶೋಧಕರು, ವಿದ್ವಾಂಸರು ನಾಡೋಜ ಡಾ| ಹಂ.ಪ. ನಾಗರಾಜಯ್ಯ  ಪಂಪಭಾರತದ ಕುರಿತಾಗಿ ಮಾತನಾಡಿ, ತನಗೆ ಆಶ್ರಯ ನೀಡಿದ ರಾಜ ಅರಿಕೇಸರಿಯ ವಿಕ್ರಮಗಳಿಗೆ ಪ್ರತ್ಯಕ್ಷ ಸಾಕ್ಷಿಯಾದವನು ಪಂಪ. ವ್ಯಾಸ ಭಾರತವನ್ನು ಕನ್ನಡ ಭಾರತವಾಗಿ ಕಟ್ಟುವ ಸಂದರ್ಭ ಆತ ತನ್ನ ರಾಜನನ್ನು ಅರ್ಜುನನೊಡನೆ ಸಮೀಕರಿಸಿ ಕೃತಿರಚನೆ ಮಾಡಿ¨ªಾನೆ. ಪಂಪ ಸವ್ಯಸಾಚಿ. ಖಡ್ಗವನ್ನು ಹಿಡಿದಾಗ ಆತ ಯುದ್ಧವೀರ. ಲೇಖನಿಯನ್ನು ಹಿಡಿದಾಗ ಮಹಾಕಾವ್ಯ ರಚಿಸುವ ಕವಿಯಾಗುತ್ತಾನೆ ಎಂದು ವಿವರಿಸಿದರು.

ಪಂಪನು ತಾನು ಬಾಲ್ಯದಲ್ಲಿ ವಿಹರಿಸಿದ ವರದಾ ನದಿಯ ತೀರ, ಬನವಾಸಿ ಪ್ರದೇಶಗಳ ಸೊಗಡನ್ನು, ಪ್ರಕೃತಿ ವೈಭವವನ್ನು ತನ್ನ ಕಾವ್ಯಗಳಲ್ಲಿ ಬಳಸಿಕೊಂಡ ಪರಿಯನ್ನು ಹಂಪನಾ ಅವರು ಉದಾಹರಣೆಗಳ ಮೂಲಕ ಬಣ್ಣಿಸಿದರು. ಹತ್ತನೇ ಶತಮಾನದ ಪಂಪ ವಿರಚಿತ ಪದ್ಯಗಳು ಪ್ರಸ್ತುತ ಕಾಲದಲ್ಲಿಯೂ ಹೇಗ ಅನ್ವಯವಾಗುತ್ತದೆ ಎನ್ನುವುದನ್ನು ವಿವರಿಸಿದರು.

ಹತ್ತು ಕಟ್ಟುವ ಕಡೆ ಒಂದು ಮುತ್ತು ಕಟ್ಟು ಎನ್ನುವಂತೆ ನೂರಾರು ಪದ್ಯಗಳ ಮೂಲಕ ಹೇಳಬಹುದಾದ ವಿಷಯ ವಿಸ್ತಾರವನ್ನು ಒಂದೇ ಪದ್ಯದಲ್ಲಿ ಕಟ್ಟಿಕೊಡುವ ಪಂಪನ ಪ್ರತಿಭಾ ಸಾಮರ್ಥ್ಯವನ್ನು ಶ್ಲಾಘಿಸಿದ ಹಂಪನಾ ಅವರು ಪಂಪ ಕಲಿತವರ ಕಲ್ಪವೃಕ್ಷ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಮಾತನಾಡಿ, ಭಾರತೀಯ ಸಂಸ್ಕೃತಿಯನ್ನು ರೂಪಿಸಿದ ಜಗತ್ತಿನ ಅತೀದೊಡ್ಡ ಮಹಾಕಾವ್ಯ ವ್ಯಾಸಭಾರತ. ಧರ್ಮ -ಅಧರ್ಮಗಳ ನಡುವಿನ ಸಂಘರ್ಷ ಕಟ್ಟಿಕೊಡುವ ಇಂತಹ ಅಪೂರ್ವ ಕೃತಿ ಕನ್ನಡ ಕವಿಗಳಿಗೆ ಅಚ್ಚುಮೆಚ್ಚಿನದಾಗಿದೆ. ನಾಲ್ಕು ಸಾವಿರಕ್ಕೂ ಮಿಕ್ಕಿದ ಪದ್ಯಗಳನ್ನು ಒಳಗೊಂಡ ತುರಂಗ ಭಾರತವನ್ನು ಬರೆದ ಪರಮದೇವ ಕವಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾನೆ. ಮರೆತಂತಹ ಕವಿ ಕಲಾವಿದರನ್ನು ಸ್ಮರಿಸಿಕೊಳ್ಳುವುದು ಕನ್ನಡಿಗರ ಕರ್ತವ್ಯ ಎಂದು ತಿಳಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಇಂದಿರಾ ಶರಣ್‌, ಪ್ರೊ| ಅಜಿತ ಪ್ರಸಾದ್‌, ಆಶಾ ಎಸ್‌. ಕವಿತಾ ಕುಸುಗಲ್‌, ಕೃಷ್ಣಾಬಾಯಿ ಮೊದಲಾದವರು ಪಾಲ್ಗೊಂಡರು. ವಿಶ್ವನಾಥ ಕಾರ್ನಾಡ್‌, ಡಾ| ಜಿ. ವಿ. ಕುಲಕರ್ಣಿ, ಚಂದ್ರಶೇಖರ ಪಾಲೆತ್ತಾಡಿ, ನಿತ್ಯಾನಂದ ಕೋಟ್ಯಾನ್‌, ಹವ್ಯಕ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್‌ ಭಾಗವತ್‌, ಕಾರ್ಯದರ್ಶಿ ನಾರಾಯಣ್‌ ಅಕದಾಸ್‌, ನಿಕಟಪೂರ್ವ ಅಧ್ಯಕ್ಷ ಎನ್‌. ಆರ್‌. ಹೆಗಡೆ ಮತ್ತಿತರರಿದ್ದರು.

ಕಲಾ ಭಾಗವತ್‌ ಅವರು ಪರಮ ದೇವಕವಿಯ ತುರಂಗ ಭಾರತದ ನಾಂದಿ ಪದ್ಯಗಳನ್ನು ಕಾರ್ಯಕ್ರಮದ ಪ್ರಾರಂಭದಲ್ಲಿ ಸುಶ್ರಾವ್ಯವಾಗಿ ಹಾಡಿದರು. ಹವ್ಯಕ ಸಂಸ್ಥೆಯ ಮುಖವಾಣಿ ಹವ್ಯಕ ಸಂದೇಶದ ಸಂಪಾದಕಿ ಅಮಿತಾ ಭಾಗವತ್‌ ವಂದಿಸಿದರು. ವಿಭಾಗದ ಸಹ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಶೆಟ್ಟಿ ಕಾರ್ಯಕ್ರಮವನ್ನು ಸಂಯೋಜಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.