ಜೀವನ ಧರ್ಮ ತತ್ವವನ್ನು ಬದುಕಲ್ಲಿ ಅಳವಡಿಸಿಕೊಳ್ಳಬೇಕು: ಒಡಿಯೂರುಶ್ರೀ


Team Udayavani, Nov 23, 2019, 5:35 PM IST

mumbai-tdy-2

ಪುಣೆ, ನ. 22: ಸನಾತನ ಎಂದರೆ ಮೂಲ ಪುರಾತನ ಪರಂಪರೆ. ಸನಾತನ ಸಂಸ್ಕೃತಿಯನ್ನು ಅರಿತು ಧರ್ಮದ ಹಾದಿಯಲ್ಲಿ ಹೊಸ ಪ್ರಪಂಚದಲ್ಲಿ ಹೊಂದಾಣಿಕೆಯೊಂದಿಗೆ ಸಾಗಬೇಕಾಗಿದೆ.

ಸನಾತನ ಸಂಸ್ಕೃತಿಯನ್ನು ಮರೆತರೆ ಜೀವನವು ಸರಿಯಾದ ಪಥದಲ್ಲಿ ಸಾಗಲು ಸಾಧ್ಯವಿಲ್ಲ. ಆದ್ದರಿಂದ ಜೀವನ ಧರ್ಮ ಎಂಬ ತತ್ವವನ್ನು ನಾವೆಲ್ಲರೂ ಬದುಕಲ್ಲಿ  ಅಳವಡಿಸಿಕೊಳ್ಳಬೇಕು. ಮನುಷ್ಯ ಸಂಘ ಜೀವಿ. ಪರೋಪಕಾರ ಧರ್ಮದೊಂದಿಗೆ ಸಮೂಹವಾಗಿ ಭಾಗಿಗಳಾಗಿ ಸೇರಿದಾಗ ಸಂಘಟನೆ ರೂಪುಗೊಳ್ಳುತ್ತದೆ. ಯುವ ಜನತೆಯ ಕಾರ್ಯ ಯೋಜನೆಗಳೊಂದಿಗೆ ಹೊಂದಾಣಿಕೆಯ ಬದುಕು ನಮ್ಮದಾ ಗಬೇಕು. ಅನುಭವ ಎಂಬುದು ಗಮ್ಯವಾಗಿ ಬರುತ್ತದೆ. ಈ ಅನುಭವವನ್ನು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ನಮ್ಮ ನಿತ್ಯದ ದಿನಚರಿಯಲ್ಲಿ ಮನಸ್ಸು ಮುಖ್ಯವಾದುದು.

ನಮ್ಮ ಮನೆಯಲ್ಲಿ ನಾವು ಮಾಡುವ ಊಟದಲ್ಲಿ ಕೂಡನಮ್ಮ ಮನಸ್ಸಿನೊಂದಿಗೆ ನೇರ ಸಂಬಂಧವನ್ನು ಹೊಂದಿರುತ್ತದೆ. ಯಾವುದೇ ರೀತಿಯ ಕರ್ಮ ಲೋಪವಾಗದಂತೆ ಸನ್ಮಾರ್ಗದ ಹಾದಿಯಲ್ಲಿ ನಡೆಯಬೇಕು. ಕರ್ಮದಲ್ಲಿ ಎರಡು ವಿಧ ಒಂದು ಕಾಮ್ಯ ಕರ್ಮ ಮತ್ತೂಂದು ಖಡ್ಡಾಯ ಕರ್ಮ. ಇದರಲ್ಲಿ ಖಡ್ಡಾಯ ಕರ್ಮ ನಮ್ಮ ಕರ್ತವ್ಯ. ತನಗೆ ಬೇಕಾದಂಥದ್ದನ್ನು ತನ್ನಿಂದತಾನೆ ಮಾಡಿಕೊಳ್ಳುವುದು ಕಾಮ್ಯ ಕರ್ಮ.

ಇದರ ತಿಳಿವಳಿಕೆ ನಮ್ಮಲ್ಲಿ ಹಾಗೂ ನಮ್ಮ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ನಮಗೆಲ್ಲರಿಗೂ ಬೇಕು. ಕರ್ಮದಲ್ಲಿಎರಡು ವಿವಿಧ ಫಲವೂ ಕೂಡಾ ಲಭಿಸಬಹುದು. ನಾವು ಪ್ರೀತಿಯಿಂದ ಮಾಡುವ ಭಗವಂತನಿಗೆ ಪ್ರಿಯ ವಾಗಿ ಮಾಡುವ ಯಾವುದೇ ಕಾರ್ಯಗಳಲ್ಲಿ ಸತ್ಫಲವೇಲಭಿಸುತ್ತದೆ. ಪ್ರೀತಿ ವಾತ್ಸಲ್ಯದ ಕೊರತೆ ಬಾರದಂತೆ ಹೃದಯ ವಿಶಾಲತೆ ಮೆರೆದು ಕರ್ಮ ಯೋಜನೆ ಗಳನ್ನು ಮಾಡಬೇಕು. ನಿಜವಾದ ಪ್ರೀತಿಗೆ ಸೂಜಿಕಲ್ಲಿನಂತೆ ಎಳೆದುಕೊಳ್ಳುವ ಶಕ್ತಿಯಿದೆ ಎಂದು ಒಡಿಯೂರಿನ ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ನ. 21ರಂದು ಪುಣೆಯ ಹಡಪ್ಸರ್‌ನ ಅಮರ್‌ ಕಾಟೇಜ್‌ನ ಸಾಯಿ ನಿಲಯದಲ್ಲಿ ಆಯೋಜಿಸಿದ್ದ ಗುರುವಂದನ ಕಾರ್ಯಕ್ರಮದಲ್ಲಿ ಸೇರಿದ ಭಕ್ತರನ್ನು ಆಶೀರ್ವದಿಸಿ ಆಶೀರ್ವಚನ ನೀಡಿದ ಶ್ರೀಗಳು, ಪ್ರೀತಿಯಿಂದ ಯಶಸ್ಸನ್ನು ಪಡೆಯಬಹುದು ಅಲ್ಲದೆ ಸಮೃದ್ಧಿ ಕೀರ್ತಿಯನ್ನು ಗಳಿಸಬಹುದು. ಪ್ರೀತಿ ಎಲ್ಲಿದೆಯೋ ಅಲ್ಲಿ ಯಶಸ್ಸು ಸಮೃದ್ಧಿ ತಾನಾಗಿಯೇ ಬರುತ್ತದೆ. ಉತ್ತಮ ಸಂಸ್ಕಾರದೊಂದಿಗೆ ಧರ್ಮದ ಹಾದಿಯಲ್ಲಿ ನಾವು ಮಾಡುವಂತಹ ಯಾವುದೇ ಸಮಾಜ ಸೇವಾ ಕಾರ್ಯಗಳು ಸಮಾಜದ ಪ್ರತಿಯೋರ್ವ ಸದಸ್ಯರನ್ನು ತಲುಪುವಂತಾಗಬೇಕು. ಅನ್ಯೋನ್ಯತೆಯಿಂದ ಕೂಡಿದಾಗ ಧರ್ಮದ ಹಾದಿಯಲ್ಲಿ ಬದಲಾವಣೆಯ ಗಾಳಿ ಬೀಸಿದಾಗ ಸುಂದರ ಸಮಾಜದ ನಿರ್ಮಾಣ ಸಾಧ್ಯ. ಬದುಕು ಎಂಬುವುದು ನೀರಿನಂತೆ. ಏರುಪೇರು ಎಂಬುವುದು ಸಹಜವಾದುದು. ಅರಿತು ಬೆರೆತು ಬಾಳಿದರೆ ಜೀವನ ಸಾಕ್ಷಾತ್ಕಾರ,ನಡೆ-ನುಡಿ ಮಧುರವಾಗಿದ್ದರೆಬದುಕು ಸುಂದರ. ಬದಲಾವಣೆಯ ಸಮಯದಲ್ಲಿ ಅವಕಾಶಗಳಿಗೆ ತಕ್ಕಂತೆ ಸೇವಾ ಕಾರ್ಯಗಳನ್ನು ಮಾಡುವ ಸೇವಾ ಮಾನೋಭಾವನೆ ನಮ್ಮಲ್ಲಿರಲಿ ಎಂದರು. ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಕೆ. ಶೆಟ್ಟಿ, ಸುಧಾ ಎನ್‌. ಶೆಟ್ಟಿ ದಂಪತಿ ಪಾದಪೂಜೆಗೈದರು.

ಪಾದಪೂಜೆಯ ಅನಂತರ ಭಜನೆ ಕಾರ್ಯಕ್ರಮವು ಶ್ರೀಗಳು ಹಾಗೂ ಸಾಧ್ವಿ ಮಾತಾನಂದಮಯಿ ಅವರ ಜೊತೆಯಲ್ಲಿ ನಡೆಯಿತು. ನಂತರ ಶ್ರೀಗಳು ಮಂತ್ರಾಕ್ಷತೆ ನೀಡಿ ಹರಸಿದರು. ಪ್ರಸಾದ ವಿತರಣೆಯ ನಂತರ ಅನ್ನ

ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಪುಣೆ ಶ್ರೀ ಗುರುದೇವ ಸೇವಾ ಬಳಗದ ನಿಕಟಪೂರ್ವ ಅಧ್ಯಕ್ಷ ಸದಾನಂದ ಕೆ. ಶೆಟ್ಟಿ ಮತ್ತು ಇಂದಿರಾ ಶೆಟ್ಟಿ ದಂಪತಿ, ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಜಯ ಶೆಟ್ಟಿ ಮಿಯ್ನಾರು, ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಜಯಲಕ್ಷ್ಮೀ ಪಿ. ಶೆಟ್ಟಿ, ಪುಣೆ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷರಾದ ಆನಂದ್‌ ಶೆಟ್ಟಿ ಮಿಯ್ನಾರು, ಬಳಗದ ಉಪಾಧ್ಯಕ್ಷರಾದ ಪ್ರಭಾಕರ ಶೆಟ್ಟಿ, ರಂಜಿತ್‌ ಶೆಟ್ಟಿ, ಗೌರವ ಕಾರ್ಯದರ್ಶಿ ರೋಹಿತ್‌ ಶೆಟ್ಟಿ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಉಪಾಧ್ಯಕ್ಷೆ ಸುಮನಾ ಎಸ್‌. ಹೆಗ್ಡೆ, ಕಾರ್ಯದರ್ಶಿ ವೀಣಾ ಪಿ. ಶೆಟ್ಟಿ, ಬಂಟ್ಸ್‌ ಅಸೋಸಿಯೇಶನ್‌ನ ಕಾರ್ಯದರ್ಶಿ ಅರವಿಂದ್‌ ರೈ, ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ಅಧ್ಯಕ್ಷೆ ದೀಪಾ ಎ. ರೈ, ಕಾರ್ಯದರ್ಶಿ ಉಷಾ ಯು. ಶೆಟ್ಟಿ ಹಾಗೂ ಪುಣೆ ಶ್ರೀ ಗುರುದೇವ ಸೇವಾ ಬಳಗ ಮತ್ತು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯರು ಬಂಟ್ಸ್‌ ಅಸೋಸಿಯೇಶನ್‌ನ ಪದಾಧಿಕಾರಿಗಳು ಅಪಾರ, ಸಂಖ್ಯೆಯ ಭಕ್ತರು, ಭಕ್ತಾಭಿಮಾನಿ ಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಬಳಗದ ಕಾರ್ಯ ದರ್ಶಿ ಎನ್‌. ರೋಹಿತ್‌ ಡಿ. ಶೆಟ್ಟಿ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

ಚಿತ್ರ-ವರದಿ : ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.