ಒಗ್ಗಟ್ಟಾದಾಗ ಸಮಸ್ಯೆ ಬಗೆಹರಿಸಿಕೊಳ್ಳಲು ಸಾಧ್ಯ: ವಿರಾರ್‌ ಶಂಕರ್‌ ಶೆಟ್ಟಿ


Team Udayavani, Nov 17, 2019, 5:11 PM IST

mumbai-tdy-2

ಮುಂಬಯಿ, ನ. 16: ವಸಾಯಿ ತಾಲೂಕು ಸೌತ್‌ ಇಂಡಿಯನ್‌ ಫೆಡರೇಶನ್‌ ವತಿಯಿಂದ ವಾರ್ಷಿಕ ಸ್ನೇಹ ಸಮ್ಮಿಲನ ಮತ್ತು ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ಫೆಡರೇಶನ್‌ ಪದಾಧಿಕಾರಿಗಳ ಪ್ರೋತ್ಸಾಹದಿಂದ ಮೂವರು ಬಹುಜನ ವಿಕಾಸ ಅಘಾಡಿಯ ಶಾಸಕರು ಚುನಾಯಿತ ರಾಗಿದ್ದು ಅವರ ಅಭಿನಂದನ ಸಮಾರಂಭವು ನ. 4ರಂದು ವಿರಾರ್‌ ಪಶ್ಚಿಮದ ಹೊಟೇಲ್‌ ಬಂಜಾರಗ್ರ್ಯಾಂಡ್ ನ‌ ಸಭಾಗೃಹದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಸಾಯಿ ತಾಲೂಕು ಸೌತ್‌ ಇಂಡಿಯನ್‌ ಫೆಡರೇಶನ್‌ ಅಧ್ಯಕ್ಷ ಡಾ| ವಿರಾರ್‌ ಶಂಕರ ಶೆಟ್ಟಿ ಅವರು ವಹಿಸಿದ್ದು, ಬಹುಜನ ವಿಕಾಸ ಅಘಾಡಿಯಶಾಸಕರಾದ ಹಿತೇಂದ್ರ ಠಾಕೂರ್‌, ಕ್ಷಿತಿಜ್‌ ಠಾಕೂರ್‌, ಪ್ರಥಮ ಮಹಾ ಪೌರರಾದ ಪ್ರವೀಣ್‌ ಶೆಟ್ಟಿ, ನವಘರ್‌ ಮಾಣಿಕ್‌ಪುರ ಮಾಜಿ ಅಧ್ಯಕ್ಷ ರಾಜೇಶ್ವರಿ ನಾರಾಯಣ್‌, ಬೊಯಿಸರ್‌ನ ಉದ್ಯಮಿ ಭುಜಂಗ ಶೆಟ್ಟಿ, ವಸಾಯಿ ತಾಲೂಕು ಸೌತ್‌ ಇಂಡಿಯನ್‌ ಫೆಡರೇಶನ್‌ ಗೌರವ ಅಧ್ಯಕ್ಷ ಪಿ. ವಿ. ಕೆ. ನಂಬಿಯಾರ್‌, ಕಾರ್ಯದರ್ಶಿ ನರೇಂದ್ರ ಪ್ರಭು, ಕೋಶಾಧಿಕಾರಿ ಚಕ್ರಮಣಿ, ಜತೆ ಕೋಶಾಧಿಕಾರಿ ಡಯಾನ್‌ ಡಿಸೋಜಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಹಾಪೌರರಾದ ಪ್ರವೀಣ್‌ ಶೆಟ್ಟಿ ಮಾತನಾಡಿ ಫೆಡರೇಶನ್‌ನ ಪ್ರೋತ್ಸಾಹ ಮತ್ತು ಪ್ರಯತ್ನದಿಂದ ನಮ್ಮ ಮೂವರು ಶಾಸಕರು ಜಯಗಳಿಸಿದ್ದಾರೆ. ಕರ್ಮಭೂಮಿಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯ ನಿರ್ವಹಿಸುತ್ತಿರುವುದು ಅಭಿನಂದನೀಯ. ಇದರ ಶ್ರೇಯಸ್ಸು ಫೆಡರೇಶನ್‌ನ ಎಲ್ಲ ಪದಾಧಿಕಾರಿಗಳಿಗೆ ಪ್ರಥಮವಾಗಿ ವಿರಾರ್‌ ಶಂಕರ್‌ ಶೆಟ್ಟಿ ಅವರಿಗೆ ಸಲ್ಲುತ್ತದೆ. ನಾವೆಲ್ಲ ಸಂಘ ಸಂಸ್ಥೆಗಳು ಒಗ್ಗೂಡಿ ಕ್ಷೇತ್ರದ ಅಭಿವೃದ್ಧಿ ದುಡಿಯೋಣ ಎಂದು ತಿಳಿಸಿದರು.

ಹಿತೇಂದ್ರ ಠಾಕೂರ್‌ ಮಾತನಾಡಿ, ಫೆಡರೇಶನ್‌ ಮಾಡಿರುವ ಕೆಲಸಕ್ಕೆ ಸಂಸ್ಥೆಯ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ನಮ್ಮ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಯಾವ ಒಳ್ಳೆಯ ಕೆಲಸಗಳಲ್ಲಿ ವಿಳಂಬ ಅಥವಾ ಆಗದೇ ಇದ್ದಲ್ಲಿ ನನ್ನ ಗಮನಕ್ಕೆ ತರಬೇಕು. ನಗರ ಸೇವಕರು ಕೆಲಸಗಳಲ್ಲಿ ವಿಫಲವಾದರೆ ನಮ್ಮಲ್ಲಿ ತಿಳಿಸಿದರೆ ನಾವೂ ಅದನ್ನು ತಿದ್ದುಪಡಿಸಬಹುದು. ಎಲ್ಲರ ಸಹಕಾರ ಅಗತ್ಯವಿದೆ ಎಂದು ನುಡಿದರು.

ನಮ್ಮ ಜಯಕ್ಕೆ ಫೆಡರೇಶನ್‌ನ ಅಧ್ಯಕ್ಷರ ಮುಂದಾಳತ್ವದಲ್ಲಿ ಹಲವು ಸಭೆಗಳನ್ನು ನಡೆಸಿ, ಗೆಲುವಿಗೆ ಶ್ರಮ ಪಟ್ಟ ಎಲ್ಲರಿಗೂ ನಮ್ಮ ಧನ್ಯವಾದಗಳು. ವಸಾಯಿ ತಾಲೂಕು ಅಭಿವೃದ್ಧಿ ಕ್ಷೇತ್ರವೆಂದು ಪರಿಗಣಿಸಲು ನಾವೂ ಸಂಪೂರ್ಣವಾಗಿ ಪ್ರಯತ್ನಿಸುತ್ತೇವೆ. ಅದಕ್ಕಾಗಿ ಎಲ್ಲರ ಸಹಕಾರ ಅಗತ್ಯ ಎಂದು ನಲಸೋಪರ ವಿಧಾನ ಸಭೆಯ ಶಾಸಕ ಕ್ಷಿತಿಜ್‌ ಠಾಕೂರ್‌ ತಿಳಿಸಿದರು. ಇದೇ ಸಂದರ್ಭದಲ್ಲಿ ಇತ್ತೀಚಿಗೆ ರಾಜ್ಯಪಾಲರಿಂದ ದೊರೆತಿರುವ ಧಾರ್ಮಿಕ ಸಾಮರಸ್ಯ ಮತ್ತು ಶಾಂತಿ ಪುರಸ್ಕಾರ ಪಡೆದಿರುವ ವಿರಾರ್‌ ಶಂಕರ ಶೆಟ್ಟಿ ಅವರನ್ನು ಜಯೇಂದ್ರ ಠಾಕೂರ್‌ ಅವರು ಅತಿಥಿಗಳನ್ನೊಳಗೊಂಡು ಶಾಲು ಹೊದೆಸಿ, ಪೇಟ ತೊಡಿಸಿ, ಸಮ್ಮಾನಿಸಿ ನಿಮ್ಮ ಸಮಾಜ ಸೇವೆ ನಿರಂತರ ನಡೆಯಲಿ, ಅನೇಕ ಗೌರವ ಪುರಸ್ಕಾರಗಳು ನಿಮ್ಮನ್ನು ಅರಸಿಕೊಂಡು ಬರಲಿ. ಜೀವದಾನಿ ಮಾತೆ ಮತ್ತು ಸಾಯಿಬಾಬಾರ ಆಶೀರ್ವಾದ ನಿಮ್ಮೊಡನೆ ಸದಾ ಇರಲಿ ಎಂದು ಶುಭ ಹಾರೈಸಿದರು.

ವಿರಾರ್‌ ಶಂಕರ ಶೆಟ್ಟಿ ಅವರು ಅಧ್ಯಕ್ಷೀಯ ಭಾಷಣಗೈದು ಫೆಡರೇಶನ್‌ನ ಎಲ್ಲರೂ ಒಗ್ಗೂಡಿ ಮೂವರು ಶಾಸಕರನ್ನು ಜಯಭೇರಿಗೊಳಿಸಿದಕ್ಕೆ ಎಲ್ಲರಿಗೂ ಅಂತರಾಳದಿಂದ ಅಭಿನಂದಿಸಿ ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ನಿಮ್ಮೆಲ್ಲರ

ಪರವಾಗಿ ನೂತನ ಶಾಸಕರನ್ನು ಸಮ್ಮಾನಿಸುತ್ತೇವೆ. ನನ್ನಿಂದ ಒಬ್ಬನಿಗೆ ಸಾಧ್ಯವಿಲ್ಲ, ನಿಮ್ಮೆಲ್ಲರ ವಿಶ್ವಾಸ, ತನು ಮನ ಸಹಕಾರದಿಂದ ಸಾಧ್ಯವಾಗಿದೆ. ನಾವೆಲ್ಲರೂ ಒಗ್ಗಟ್ಟಾದಾಗ ಮಾತ್ರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯ ಎಂದು ನುಡಿದು ಎಲ್ಲರಿಗೂ ಅಭಿವಂದಿಸಿದರು.

ಈ ಸಂದರ್ಭದಲ್ಲಿ ಲಯನ್‌ ಡಾ| ಕೆ. ಟಿ. ಶಂಕರ ಶೆಟ್ಟಿ, ಲಯನ್‌ ಶಶಿಕಾಂತ್‌ ಸುವರ್ಣ, ವಿರಾರ್‌-ನಲಸೋಪರ ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಸದಾಶಿವ ಕರ್ಕೇರ, ವಸಾಯಿ-ಡಹಾಣು ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದು ಶುಭ ಕೋರಿದರು. ನರೇಂದ್ರ ಪ್ರಭು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.