ಸಂಸ್ಥೆಯ ಸಾಮಾಜಿಕ ಕಳಕಳಿಯ ಸೇವೆ ಅನನ್ಯ: ಚಂದ್ರಶೇಖರ ಪೂಜಾರಿ


Team Udayavani, Mar 12, 2020, 6:20 PM IST

mumbai-tdy-1

ಡೊಂಬಿವಲಿ, ಮಾ. 11: ತಾನು ಬೆಳೆದು ಇನ್ನೊಬ್ಬರನ್ನು ಬೆಳೆಸುವುದರ ಜತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ತುಳು-ಕನ್ನಡಿಗರ ಸಾಮಾಜಿಕ ಕಳಕಳಿ ಅನನ್ಯವಾಗಿದೆ ಎಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ನುಡಿದರು.

ಮಾ. 8 ರಂದು ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ನಡೆದ ಶ್ರೀ ಸಾಯಿನಾಥ ಮಿತ್ರ ಮಂಡಳ ಡೊಂಬಿವಲಿ ಇದರ 13 ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಾರಾಷ್ಟ್ರದ ತುಳುನಾಡು ಎಂಬ ಹೆಗ್ಗಳಿಕೆಗೆ ಪಾತ್ರವಾದ ಡೊಂಬಿವಲಿಯಲ್ಲಿ ಕಳೆದ 13 ವರ್ಷಗಳಿಂದ ಶ್ರೀ ಸಾಯಿನಾಥ ಮಿತ್ರ ಮಂಡಳಿ ತುಳುನಾಡಿನ ಸಂಸ್ಕೃತಿ, ಕಲೆಯನ್ನು ಉಳಿಸಿ-ಬೆಳೆಸುವುದರ ಜತೆಗೆ ಸಾಮಾಜಿಕ ಕ್ಷೇತ್ರದಲ್ಲೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವುದು ಹೆಮ್ಮೆಯ ವಿಷಯ. ಈ ಸಂಸ್ಥೆ ಚಿರಕಾಲ ಬಾಳಿ ತುಳುನಾಡಿನ ಸಂಸ್ಕೃತಿಯ ರಾಯಭಾರಿ ಎಂದೆಣಿಸಲಿ. ಹೆಣ್ಣು ಸಂಸಾರದ ಕಣ್ಣು. ಅವಳು ದೇಲತಾ ಸ್ವರೂಪಿ. ಆದ್ದರಿಂದ ಮಹಿಳೆ ಮನೆಯಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.

ಅತಿಥಿ, ಸಮಾಜ ಸೇವಕ, ಸಂಘಟಕ ಪ್ರಭಾಕರ ಹೆಗ್ಡೆ ಅವರು ಮಾತನಾಡಿ, ಪರಶುರಾಮ ಸೃಷ್ಟಿಯ ನಾಡಿನಿಂದ ಬಂದ ನಾವು ನಮ್ಮ ಸಿರಿವಂತ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ ಬೆಳೆಸಿದ ಹೆಗ್ಗಳಿಕೆ ನಮ್ಮದಾಗಿದೆ. ಡೊಂಬಿವಲಿ ನಗರದಲ್ಲಿ ಸಂಘಟನೆಗಳ ಮೂಲಕ ತುಳು-ಕನ್ನಡಿಗರು ಭಾಷೆ, ಸಂಸ್ಕೃತಿಯನ್ನು ಪೋಷಿಸುತ್ತಿರುವುದನ್ನು ಕಂಡು ಹೃದಯ ತುಂಬಿ ಬರುತ್ತದೆ. ಈ ವೇದಿಕೆಯಲ್ಲಿ ವಿಜಯ ಕುಮಾರ್‌ ಶೆಟ್ಟಿ ಅವರಂತಹ ಮೇರು ವ್ಯಕ್ತಿತ್ವದವರನ್ನು ಸಮ್ಮಾನಿಸಿದ್ದು ಅಭಿನಂದನೀಯ. ಇಂದು ವಿಶ್ವ ಮಹಿಳಾ ದಿನಾಚರಣೆಯಾದ್ದರಿಂದ ಮಹಿಳೆಯರೇ ತುಂಬಿರುವ ಈ ಸಭಾಗೃಹ ಕಂಡಾಗ ಸಂಸ್ಥೆಯ ಕಾರ್ಯವೈಖರಿ ಕಂಡು ಬರುತ್ತದೆ ಎಂದರು.

ಅತಿಥಿಯಾಗಿ ಆಗಮಿಸಿದ ಭಂಡಾರಿ ಸೇವಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಆರ್‌. ಎಂ. ಭಂಡಾರಿ ಅವರು ಮಾತನಾಡಿ, ಎಲ್ಲಿ ಮಹಿಳೆಯರಿಗೆ ಗೌರವ ಇರುತ್ತದೆಯೋ ಆ ಮನೆ ಶಾಂತಿ, ನೆಮ್ಮದಿಯಿಂದ ಇರುತ್ತದೆ. ಅದಕ್ಕೆ ಸಂಘ-ಸಂಸ್ಥೆಗಳು ಹೊರತಾಗಿಲ್ಲ. ಸಂಸ್ಥೆಯ ಅಧ್ಯಕ್ಷ ಮೋಹನ್‌ ಸಾಲ್ಯಾನ್‌ ಮತ್ತು ಅವರ ತಂಡದ ಸಾಮಾಜಿಕ ಕಳಕಳಿ ಪ್ರಶಂಸನೀಯವಾಗಿದೆ ಎಂದರು.

ತೀಯಾ ಸಮಾಜ ಮುಂಬಯಿ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ ಅವರು ಮಾತನಾಡಿ, ತುಳುನಾಡಿನ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿ-ಬೆಳೆಸುವ ನಿಮ್ಮ ಕಾರ್ಯ ಅಭಿನಂದನೀಯ. ನಿಮ್ಮ ಸಮಾಜ ಕಾರ್ಯಕ್ಕೆ ನನ್ನ ಸದಾ ಸಹಕಾರ ಇದೆ ಎಂದು ಹೇಳಿ ಶುಭಹಾರೈಸಿದರು.

ಜೈ ಭವಾನಿ ಶ್ರೀ ಶನೀಶ್ವರ ಮಂದಿರ ಹಾಗೂ ಬಿರುವೆರ್‌ ಕುಡ್ಲ ಡೊಂಬಿವಲಿ ಘಟಕದ ಅಧ್ಯಕ್ಷ ರವಿ ಮುದ್ದು ಸುವರ್ಣ ಅವರು ಮಾತನಾಡಿ, ಹದಿಮೂರು ವರ್ಷಗಳ ಹಿಂದೆ ನಾನು ಹಾಗೂ ಇಂದ್ರಾಳಿ ದಿವಾಕರ ಶೆಟ್ಟಿ ಅವರು ಜಂಟಿಯಾಗಿ ಈ ಸಂಸ್ಥೆಗೆ ಚಾಲನೆ ನೀಡಿದ್ದೇವು. ಇಂದು ಈ ಸಂಸ್ಥೆ ಅನೇಕ ಏರುಪೇರುಗಳನ್ನು ಎದುರಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ಹಾಗೂ ಅನಾರೋಗ್ಯದಿಂದ ಬಳಲುವ ಜನರಿಗೆ ಸಹಾಯಹಸ್ತ ನೀಡಿದರೆ ಪರಮಾತ್ಮನ ಮಹಾಪೂಜೆ ಮಾಡಿದಂತೆ. ಅಂತಹ ಕಾರ್ಯವನ್ನು ಈ ಸಂಸ್ಥೆ ಮಾಡುತ್ತಿದ್ದು, ನಮಗೆ ಸಂತಸ ನೀಡಿದೆ ಎಂದರು. ಮಂಡಳಿಯ ಅಧ್ಯಕ್ಷ ಮೋಹನ್‌ ಸಾಲ್ಯಾನ್‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಸುಕೇಶ್‌ ಮೊಗವೀರ ಅವರು ಸಂಸ್ಥೆಯು ನಡೆದು ಬಂದ ದಾರಿಯ ಸಾಧನೆ ಹಾಗೂ ಸಿದ್ಧಿಗಳನ್ನು ವಿವರಿಸಿದರು.

ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ವಿಜಯ ಕುಮಾರ್‌ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಯಕ್ಷಕಲಾ ಸಂಸ್ಥೆ, ಶ್ರೀ ಜಗದಂಬಾ ಮಂದಿರದ ಡೊಂಬಿವಲಿ ಅಧ್ಯಕ್ಷ ಹರೀಶ್‌ ಶೆಟ್ಟಿ, ಹೊಟೇಲ್‌ ಕಾರ್ಮಿಕ ನಾರಾಯಣ ಶೆಟ್ಟಿ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು. ಮಂಡಳದ ಗೌರವಾಧ್ಯಕ್ಷ ಗಣೇಶ್‌ ಮೊಗವೀರ ದಂಪತಿ, ಅಧ್ಯಕ್ಷ ಮೋಹನ್‌ ಸಾಲ್ಯಾನ್‌ ದಂಪತಿ, ದಾಂಪತ್ಯ ಜೀವನದ ಸುವರ್ಣ ಮಹೋತ್ಸವ ಆಚನಿಸಿದ ಆರ್‌. ಬಿ. ಶೆಟ್ಟಿ ದಂಪತಿ, ಸಮಾಜ ಸೇವಕ ರವಿ ಸನಿಲ್‌ ಅವರನ್ನು ಗೌರವಿಸಲಾಯಿತು. ಓಂದಾಸ್‌ ಕಣ್ಣಂಗಾರ್‌, ವಸಂತ ಸುವರ್ಣ, ಅಶೋಕ್‌ ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಹರೀಶ್‌ ಶೆಟ್ಟಿ ಅವರು, ತಾವು ನೀಡಿದ ಈ ಸಮ್ಮಾನ ತಾಯಿ ಜಗದಂಬೆಯ ಪ್ರಸಾದವಾಗಿದ್ದು, ನಾನು ಸಂಪಾದಿಸಿದ ಶೇ. 2ರಷ್ಟನ್ನು ನಾನು ಸಮಾಜಕ್ಕಾಗಿ ವಿನಿಯೋಗಿಸುತ್ತಿದ್ದೇನೆ. ತಾವು ನೀಡಿದ ಈ ಸಮ್ಮಾನವನ್ನು ಹೃದಯಾಂತ ರಾಳದಿಂದ ಸ್ವೀಕರಿಸಿದ್ದೇನೆ ಎಂದರು.

ಇನ್ನೋರ್ವ ಸಮ್ಮಾನಿತ ಆರ್‌. ಬಿ. ಶೆಟ್ಟಿ ಅವರು ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರಿಗೆ ಕಂಕಣ ಭಾಗ್ಯ ಹಾಗೂ ಶೈಕ್ಷಣಿಕ ನೆರವು ನೀಡಿದಾಗ ದೇವರು ಸದಾ ನಮಗೆ ದಯೇ ತೋರುತ್ತಾನೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಹಿಳೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿವಿಧ ಸಂಘಟನೆಗಳಿಂದ ನೃತ್ಯ ವೈವಿಧ್ಯ ನಡೆಯಿತು. ನಾರಾಯಣ ಪೂಜಾರಿ ಪ್ರಾರ್ಥನೆಗೈದರು. ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಮೋಹನ್‌ ಸಾಲ್ಯಾನ್‌, ಗಣೇಶ್‌ ಮೊಗವೀರ, ಚಂದ್ರಶೇಖರ ಪೂಜಾರಿ, ಕಲ್ಲಡ್ಕ ಕರುಣಾಕರ ಶೆಟ್ಟಿ, ರವಿ ಮುದ್ದು ಸುವರ್ಣ, ರವಿ ಪೂಜಾರಿ, ಪ್ರಭಾಕರ ಹೆಗ್ಡೆ, ಚಂದ್ರಶೇಖರ ಬೆಳ್ಚಡ, ಆರ್‌. ಬಿ. ಶೆಟ್ಟಿ, ಸುರೇಶ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ಭಾಸ್ಕರ್‌ ಪೂಜಾರಿ, ಸುರೇಶ್‌ ಮೊಗವೀರ, ವಾಸು ಮೊಗವೀರ, ವಸಂತ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಚಿನ್ಮಯ್‌ ಸಾಲ್ಯಾನ್‌ ನಿರ್ವಹಿಸಿದರು. ಸಭಾ ಕಾರ್ಯಕ್ರಮವನ್ನು ವಸಂತ ಸುವರ್ಣ ಅವರು ನಿರ್ವಹಿಸಿದರು.

 

-ಚಿತ್ರ-ವರದಿ : ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.