ಬೀದಿ ಬದಿ ವ್ಯಾಪಾರಿಗಳಿಗೆ ಅವಕಾಶ ಇಲ್ಲ: ರಾಜ್ಯ ಸರಕಾರ
Team Udayavani, Aug 6, 2020, 12:45 PM IST
ಮುಂಬಯಿ: ಬೀದಿ ಬದಿ ವ್ಯಾಪಾರಿಗಳಿಗೆ ಈಗಿನಂತೆ ತಮ್ಮ ವ್ಯವಹಾರಗಳನ್ನು ಪುನರಾರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಮಹಾರಾಷ್ಟ್ರ ಸರಕಾರ ಬಾಂಬೆ ಹೈಕೋರ್ಟ್ ಮುಂದೆ ತನ್ನ ನಿಲುವನ್ನು ಪುನರುಚ್ಚರಿಸಿದೆ. ಸಾಮಾಜಿಕ ಕಾರ್ಯಕರ್ತ ಮನೋಜ್ ಓಸ್ವಾಲ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಉತ್ಪನ್ನಗಳು ಅಥವಾ ಆಹಾರವನ್ನು ಮಾರಾಟ ಮಾಡುವುದರ ಮೇಲೆ ಸಂಪೂರ್ಣ ನಿಷೇಧ ಹೇರುವುದು ಕಾನೂನುಬಾಹಿರ ಅಥವಾ ಅಸಂವಿಧಾನಿಕವಾಗಿದೆ. ಇದು ಜನರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ತಿಳಿಸಿದೆ.
ಇದಕ್ಕೆ ಉತ್ತರಿಸಿದ ರಾಜ್ಯ ಸರಕಾರ, ಹೈಕೋರ್ಟ್ನಲ್ಲಿ ಸಲ್ಲಿಸಿದ ಅಫಿಡವಿಟ್ನಲ್ಲಿ, ಬೀದಿ ಬದಿ ವ್ಯಾಪಾರಿಗಳಿಗೆ ಕಂಟೈನ್ಮೆಂಟ್ ವಲಯಗಳು ಮತ್ತು ಲಾಕ್ಡೌನ್ ಹೇರಲಾಗುವ ಪ್ರದೇಶಗಳಲ್ಲಿ ವ್ಯವಹಾರವನ್ನು ಪುನರಾರಂಭಿಸಲು ಅವಕಾಶ ನೀಡುವ ಬಗ್ಗೆ ಯೋಚಿಸುವ ಸಂದರ್ಭ ಇದಲ್ಲ ಎಂದು ಹೇಳಿದೆ. ಈಗಿನಂತೆ, ಲಾಕ್ಡೌನ್ ಪ್ರದೇಶಗಳು ಮತ್ತು ಕಂಟೈನ್ಮೆಂಟ್ ವಲಯಗಳ ಹೊರಗಿನ ಇತರ ಪ್ರದೇಶಗಳಲ್ಲಿ ವ್ಯವಹಾರಗಳನ್ನು ಪುನರಾರಂಭಿಸಲು ಅವರಿಗೆ ಅನುಮತಿಸಲಾಗುವುದಿಲ್ಲ ಎಂದು ಪರಿಹಾರ ಮತ್ತು ಪುನರ್ವಸತಿ ಇಲಾಖೆಯ ವಿಪತ್ತು ನಿರ್ವಹಣೆಯ ಕಾರ್ಯದರ್ಶಿ ಕಿಶೋರ್ ನಿಂಬಲ್ಕರ್ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಈ ವ್ಯವಹಾರಗಳ ನಡವಳಿಕೆಗಾಗಿ ಹೊರಡಿಸಲಾದ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿ ಸಿಕೊಳ್ಳಲು ಪೊಲೀಸ್ ಮತ್ತು ಬಿಎಂಸಿ ಸಿಬಂದಿಗಳು ಸೇರಿದಂತೆ ಬೃಹತ್ ಮಾನವಶಕ್ತಿಯ ಅಗತ್ಯವಿರುತ್ತದೆ. ಆದರೆ ಈ ಎಲ್ಲ ಏಜೆನ್ಸಿಗಳು ಕೊರೊನಾ ಬಿಕ್ಕಟ್ಟಿನ ಮಧ್ಯೆ ಹೆಚ್ಚಿನ ಹೊರೆಯಿಂದ ಈಗಾಗಲೇ ದಣಿದಿವೆ ಎಂದು ತಿಳಿಸಿದ್ದಾರೆ.
ಬೀದಿ ಬದಿ ವ್ಯಾಪಾರಿಗಳು ಅಂಗಡಿಗಳು ಹೆಚ್ಚಿನ ಸೋಂಕು ಹರಡಲು ಕಾರಣವಾಗಬಹುದು ಎಂಬ ಬಗ್ಗೆ ಯಾವುದೇ ಸಂಶೋಧನೆಗಳಿಂದ ತಿಳಿದು ಬಂದಿಲ್ಲ. ಅಥವಾ ವಿಜ್ಞಾನಿಗಳು ಇದರ ಬಗ್ಗೆ ತಿಳಿಸಿಲ್ಲ. ಇವರು ಬಡವರಾಗಿರುವುದರಿಂದ, ಅವರನ್ನು ಅಧಿಕ ಸೋಂಕು ಹರಡುವವರು ಎಂಬ ದೃಷ್ಟಿಯಿಂದ ನೋಡಲಾಗುತ್ತಿದೆ ಎಂದು ಮನೋಜ್ ಓಸ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ