ವಿದ್ಯಾದಾನಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ: ರೂಪಿಣಿ


Team Udayavani, Sep 7, 2019, 11:44 AM IST

mumbai-tdy-2

ಮುಂಬಯಿ, ಸೆ. 6: ನಗರದ ಯಾಂತ್ರಿಕ ಬದುಕಿನ ಮಧ್ಯೆ ನಮ್ಮನ್ನು ನಾವು ಸಮಾಜಮುಖೀಯಾಗಿ ಗುರುತಿಸಿಕೊಂಡು ಸಮಾಜಕ್ಕಾಗಿ ಏನಾದರೂ ಕೊಡುಗೆಯನ್ನು ನೀಡಬೇಕು. ಆಗಲೇ ನಮ್ಮ ಬದುಕು ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಲು ಸಹಕರಿಸುತ್ತಿರುವ ದಿ ಹೋಪ್‌ ಫೌಂಡೇಶನ್‌ ಧಾರಾವಿ ಕಾರ್ಯಗಳು ಶ್ಲಾಘನೀಯ. ವಿದ್ಯಾದಾನಕ್ಕಿಂತ ಮಿಗಿಲಾದ ದಾನ ಮತ್ತೂಂದಿಲ್ಲ ಎಂದು ನಾಮಾಂಕಿತ ನೃತ್ಯ ಕಲಾವಿದೆ ತಮಿಳು, ಕನ್ನಡ ಚಿತ್ರನಟಿ ರೂಪಿಣಿ ನುಡಿದರು.

ಆ. 28ರಂದು ಸಾವಿತ್ರಿಬಾಯಿ ಪುಲೆ ಸಭಾಗೃಹ ಧಾರಾವಿ ಇಲ್ಲಿ ಧಾರಾವಿ ಪರಿಸರದ ಬಡ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್‌ ತರಗತಿಯನ್ನು ನೀಡುವುದರ ಜತೆಗೆ ಶೈಕ್ಷಣಿಕ ನೆರವನ್ನು ನೀಡುತ್ತಿರುವ ಸರಕಾರೇತರ ಸಂಸ್ಥೆ ದಿ ಹೋಪ್‌ ಫೌಂಡೇಶನ್‌ ಧಾರಾವಿ ಇದರ ಪ್ರಥಮ ವಾರ್ಷಿಕೋತ್ಸವ ಸಂಭ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದ ಅವರು, ಫೌಂಡೇಶನ್‌ನ ಮುಖೇನ ಇನ್ನಷ್ಟು ಕಾರ್ಯಗಳು ನೆರವೇರಲಿ ಎಂದು ಶುಭ ಹಾರೈಸಿದರು.

ಫೌಂಡೇಶನ್‌ನ ಹಿತೈಷಿ ಸಮಾಜ ಸೇವಕ ಡಾ| ಪ್ರಕಾಶ್‌ ಮೂಡಬಿದ್ರೆ ಅವರು ಅತಿಥಿ-ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಅತಿಥಿ ಸ್ಥಾನದಿಂದ ವಿದ್ಯಾದಾಯಿನಿ ಸಭಾದ ಕಾರ್ಯದರ್ಶಿ ಚಿತ್ರಾಪು ಕೆ. ಎಂ. ಕೋಟ್ಯಾನ್‌ ಮಾತನಾಡಿ, ಬೇಟಿ ಪಡಾವೋ ಬೇಟಿ ಬಚಾವೋ ಆಂದೋಲನಕ್ಕೆ ಪೂರಕವಾಗಿ ವಿದ್ಯಾದಾಯಿನಿ ಸಭಾ ಕೂಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚು ಒತ್ತು ಕೊಟ್ಟು ಸಹಕರಿಸುತ್ತಿದೆ. ಈ ನಿಟ್ಟಿನಲ್ಲಿ ಹೋಪ್‌ ಫೌಂಡೇಶನ್‌ ಶೈಕ್ಷಣಿಕ ಕ್ಷೇತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಸಹಕಾರ ಗುರುತರವಾಗಿದೆ. ಡಾ| ಪ್ರಕಾಶ್‌ ಮೂಡಬಿದ್ರಿ ಮತ್ತು ಯಶೋಧರ ಪ್ರಕಾಶ್‌ ಮೂಡಬಿದ್ರಿ ಇವರು ಶೈಕ್ಷಣಿಕ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅಪಾರ. ಅವರಿಂದ ಇನ್ನಷ್ಟು ಸಮಾಜಮುಖೀ ಕಾರ್ಯಗಳು ನೆರವೇರಲಿ ಎಂದು ಆಶಿಸಿದರು.

ವೇದಿಕೆಯಲ್ಲಿ ಫೌಂಡೇಶನ್‌ನ ಹಿತೈಷಿ ಸಮಾಜ ಸೇವಕಿ ಯಶೋಧರ ಪ್ರಕಾಶ್‌ ಮೂಡಬಿದ್ರಿ, ನಿರಂಜನ್‌ ಎಚ್. ನಂದೇಪಲ್ಲಿ, ತಮ್ಮಯ್ಯ ಕ್ಯಾಸರಾಮ್, ಸಮಾಜ ಸೇವಕಿ ಸಂಜೀವಿ ಕೋಟ್ಯಾನ್‌, ಸಮಾಜ ಸೇವಕರಾದ ಡಾ. ಸತೀಶ್‌ ಬಂಗೇರ, ಶೇಖರ್‌ ಕರ್ಕೇರ ಮತ್ತು ನಮನ ಫ್ರೆಂಡ್ಸ್‌ ಮುಂಬಯಿ ಇದರ ಸಂಸ್ಥಾಪಕ ಸಂಘಟಕರಾದ ಪ್ರಭಾಕರ ಬೆಳುವಾಯಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಫೌಂಡೇಶನ್‌ನ ಬೆನ್ನೆಲುಬಾಗಿ ಪ್ರೊತ್ಸಾಹವನ್ನಿತ್ತು ಸಹಕರಿಸುತ್ತಿರುವ ಪ್ರಕಾಶ್‌ ಮೂಡಬಿದ್ರಿ ಇವರನ್ನು ಫೌಂಡೇಶನ್‌ನ ವತಿಯಿಂದ ಗೌರವಿಸಿ ಸಮ್ಮಾನಿಸಲಾಯಿತು. ಮಾತ್ರವಲ್ಲದೆ ಮಕ್ಕಳಿಗೆ ಜರಗಿದ ಪ್ರತಿಭಾ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ಅಥಿತಿ ಗಣ್ಯರ ಹಸ್ತದಿಂದ ನೀಡಲಾಯಿತು. ಅತಿಥಿ-ಗಣ್ಯರನ್ನು ದಿ ಹೋಪ್‌ ಫೌಂಡೇಶನ್‌ ಧಾರಾವಿ ಇದರ ಅಧ್ಯಕ್ಷರಾದ ಅನಿಲ್ ಬೋದಲ್, ಕೋಚಿಂಗ್‌ ಶಿಕ್ಷಕ ಸಿದಾನಂದ ಅಮ್ಮೆನಾರ್‌ ಹಾಗೂ ಫೌಂಡೇಶನ್‌ನ ಪದಾಧಿಕಾರಿಗಳು ಸ್ಮರಣಿಕೆ ಪುಷ್ಪಗುಚ್ಛವನ್ನಿತ್ತು ಗೌರವಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮಕ್ಕಳಿಂದ ನೃತ್ಯ ವೈಭವ, ಕಿರು ಪ್ರಹಸನ ಜರಗಿತು. ಕಾರ್ಯಕ್ರಮದ ಶ್ರೇಯಸ್ಸಿಗೆ ಫೌಂಡೇಶನ್‌ನ ಕಾರ್ಯದರ್ಶಿ ತಯಪ್ಪ ಅನ್ಮೋಲ್, ಕೋಶಾಧಿಕಾರಿ ರಾಕೇಶ್‌ ಬಡಿಗೇರ್‌, ಉಪಾಧ್ಯಕ್ಷ ಭೀಮರಾಯ ಚಿಲ್ಕ, ಜತೆ ಕಾರ್ಯದರ್ಶಿ ರವಿ ದಂಡು ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯರು ಶ್ರಮಿಸಿದರು. ಕಾರ್ಯಕ್ರಮವನ್ನು ಕು| ಸೋನಿ ಬಸ್‌ರಾಜ್ ಮತ್ತು ಕು| ಯಶೋಧಾ ವಸುಮಣಿ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.