ಮಕ್ಕಳಲ್ಲಿ ದೈವ-ದೇವರ ಅರಿವು ಮೂಡಿಸಿ: ನಿತ್ಯಾನಂದ ಡಿ. ಕೋಟ್ಯಾನ್‌


Team Udayavani, Mar 18, 2021, 2:44 PM IST

ಮಕ್ಕಳಲ್ಲಿ ದೈವ-ದೇವರ ಅರಿವು ಮೂಡಿಸಿ: ನಿತ್ಯಾನಂದ ಡಿ. ಕೋಟ್ಯಾನ್‌

ಮುಂಬಯಿ: ಉಡುಪಿ ಜಿಲ್ಲೆಯ ಕಲ್ಯಾಣಪುರ ಮೂಡುತೋನ್ಸೆಯ ಬ್ರಹ್ಮಶ್ರಿ ಬೈದರ್ಕಳ ಪಂಚ ಧೂಮಾವತೀ ಗರೋಡಿಯ ಸರ್ವೋನ್ನತಿಗಾಗಿ ಸೇವಾನಿರತವಾಗಿರುವ ತೋನ್ಸೆ ಶ್ರೀ ಬ್ರಹ್ಮಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್‌ ಮುಂಬಯಿ ಇದರ ದ್ವಿತೀಯ ವಾರ್ಷಿಕ ಮಹಾಸಭೆಯು ಮಾ. 14ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವರ ಭವನದ ಸಭಾಗೃಹದಲ್ಲಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನಿತ್ಯಾನಂದ ಡಿ. ಕೋಟ್ಯಾನ್‌ ಅಧ್ಯಕ್ಷೀಯ ಭಾಷಣಗೈದು, ಭವಿಷ್ಯದಲ್ಲಿ ನಮ್ಮ ಟ್ರಸ್ಟ್‌ ಅತ್ಯಂತ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಮತ್ತು ಸದಸ್ಯರಲ್ಲಿ  ಏಕತೆಯನ್ನು ತರಲು ವಿಭಿನ್ನ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ನಡೆಸಬೇಕು. ಯುವಕರು ಮತ್ತು ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಟ್ರಸ್ಟ್‌  ತೋನ್ಸೆ ಗರೋಡಿ ಧಾರ್ಮಿಕ ಕ್ರಮಬದ್ಧತೆಯ ಚಟುವಟಿಕೆಗಳಿಗೆ ಕೊಡುಗೆ ನೀಡಬೇಕು. ಭಕ್ತರಿಂದ ಹಣಕಾಸಿನ ಸಹಾಯಕ್ಕಾಗಿ ಮನವಿ ಮಾಡಲು ಮುಂದಾಗಬೇಕು ಎಂದು ತಿಳಿಸಿ, ಟ್ರಸ್ಟ್‌ನ ಆರ್ಥಿಕ ಬಲವನ್ನು ಹೆಚ್ಚಿಸಲು ಸಂಪನ್ಮೂಲಗಳನ್ನು ಸಜ್ಜುಗೊಳಿಸಲು ಸದಸ್ಯರಿಗೆ ಮನವಿ ಮಾಡಿದರು.

ಹಿರಿಯರು ಮತ್ತು ಕಿರಿಯರ ಸರ್ವಕಾಲಿಕ ಮತ್ತು ಸಮಯೋಚಿತ ಬೆಂಬಲಕ್ಕಾಗಿ ಧನ್ಯವಾದಗಳು. ಇಂದಿನ ಮಹಾಸಭೆಯಲ್ಲಿ ಸೇರಿರುವ ಇಷ್ಟೊಂದು ಸಂಖ್ಯೆಯ ಸದಸ್ಯರನ್ನು ಕಂಡಾಗ ಸಂತೋಷವಾಗುತ್ತದೆ. ನಾವೆಲ್ಲರು ಒಮ್ಮತ ಮತ್ತು ಒಗ್ಗಟ್ಟಿನಿಂದ ಸಮಿತಿಯನ್ನು ಮುನ್ನಡೆಸುವುದರೊಂದಿಗೆ ಮಕ್ಕಳಲ್ಲಿ ಧಾರ್ಮಿಕ ಭಾವನೆಯನ್ನು ಮೂಡಿಸೋಣ ಎಂದು ತಿಳಿಸಿದರು.

ಜತೆ ಕಾರ್ಯದರ್ಶಿ ಕರುಣಾಕರ್‌ ಬಿ. ಪೂಜಾರಿ ಅವರು ಗತಸಾಲಿನ ಮಹಾಸಭೆಯ ವರದಿ ವಾಚಿಸಿದರು. ವರದಿಯನ್ನು ಸಭೆಯು ಸರ್ವಾನುಮತದಿಂದ ಅಂಗೀಕರಿಸಿತು. ಗೌರವ ಪ್ರಧಾನ ಕಾರ್ಯದರ್ಶಿ ಸಂಜೀವ ಪೂಜಾರಿ ತೋನ್ಸೆ ಗತ ವರ್ಷದ ಕಾರ್ಯಚಟುವಟಿಕೆಗಳ ಮಾಹಿತಿಯನ್ನಿತ್ತು ಟ್ರಸ್ಟ್‌ನ ವೈದ್ಯಕೀಯ ನೆರವು ಯೋಜನೆಗೆ ಕೊಡುಗೆ ನೀಡಿದವರ, ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಇತ್ಯಾದಿ ವಿವರಗಳೊಂದಿಗೆ ವಾರ್ಷಿಕ ವರದಿ ಪ್ರಸ್ತುತಪಡಿಸಿದರು. ಗೌರವ ಪ್ರಧಾನ ಕೋಶಾಧಿಕಾರಿ ರವಿರಾಜ್‌ ಕಲ್ಯಾಣಪುರ ಅವರು ಗತ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು.

ಈ ವರೆಗೆ ಉಚಿತ ಸೇವೆಗಳನ್ನು ಸಲ್ಲಿಸುತ್ತಿರುವ ಎಸ್‌. ಎನ್‌. ಪೂಜಾರಿ ಆ್ಯಂಡ್‌ ಕಂಪೆನಿ ಚಾರ್ಟರ್ಡ್‌ ಅಕೌಂಟೆಂಟ್‌ ಅವರನ್ನೇ 2020-21ರ ಸಾಲಿಗೂ ಲೆಕ್ಕ ಪರಿಶೋಧಕರನ್ನಾಗಿ ಸಭೆಯಲ್ಲಿ ಸರ್ವಾನುಮತದಿಂದ ನೇಮಿಸಲಾಯಿತು. ಬಿಇ ಮೆಕ್ಯಾನಿಕಲ್‌ ಪರೀಕ್ಷೆಯಲ್ಲಿ ಅಗ್ರಸ್ಥಾನ ಗಳಿಸಿದ ಸಾಹಿಲ್‌ ಮಹೇಶ್‌ ಮತ್ತು ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳೊಂದಿಗೆ ಉತ್ತೀರ್ಣರಾದ ಸಿಯಾ ಕಿರಣಚಂದ್ರ ಪೂಜಾರಿ ಮತ್ತು ಅನುಷಾ ಜಯ ಪೂಜಾರಿ ಅವರನ್ನು ಟ್ರಸ್ಟ್‌ ಪರವಾಗಿ ಸ್ಮರಣಿಕೆ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಯಿತು. ವಿಶ್ವನಾಥ ತೋನ್ಸೆ ಪ್ರತಿಭಾನ್ವಿತರ ಬಗ್ಗೆ ಮಾಹಿತಿ ನೀಡಿದರು.

ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯ ನಡುವೆ ಸಭೆಯಲ್ಲಿ ಅನೇಕ ಸದಸ್ಯರು ಹಾಜರಿರುವುದು ನಮ್ಮ ಟ್ರಸ್ಟ್‌ನ ಹಿರಿಮೆ. ಯಾವುದೇ ಸಂಘವು ತನ್ನ ಧ್ಯೇಯವನ್ನು ನಿರ್ವಹಿಸಲು ಬಲವಾದ ಅಡಿಪಾಯ ಅಗತ್ಯವಾಗಿದ್ದು, ನಿರಂತರ ಬೆಂಬಲವಿದೆ ಎಂದು ಉಪಾಧ್ಯಕ್ಷರಾದ ಸಿ. ಕೆ. ಪೂಜಾರಿ ಮತ್ತು ಡಿ. ಬಿ. ಅಮೀನ್‌ ಅವರು ತಿಳಿಸಿ, ಸಂತೋಷ ವ್ಯಕ್ತಪಡಿಸಿದರು. ಸಭಿಕರ ಪರವಾಗಿ ಕೃಷ್ಣ ಪಾಲನ್‌, ಭಾರತಿ ಎನ್‌. ಸುವರ್ಣ, ಲಕ್ಷ್ಮೀ ಎನ್‌. ಕೋಟ್ಯಾನ್‌, ವಿಜಯ್‌ ಸನಿಲ್‌, ಸಾಹಿಲ್‌ ಮಹೇಶ್‌ ಮತ್ತು ಅನುಷಾ ಪೂಜಾರಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರು, ಸಲಹೆಗಾರರು, ಸದಸ್ಯರು ಹಾಜರಿದ್ದು, ಸದಸ್ಯರು ಶ್ರೀ ಬ್ರಹ್ಮ ಬೈದರ್ಕಳರಿಗೆ ಪ್ರಾರ್ಥನೆಗೈದು ಮಹಾಸಭೆ ಉದ್ಘಾಟಿಸಿದರು. ಉಪಾಧ್ಯಕ್ಷ ವಿಶ್ವನಾಥ ತೋನ್ಸೆ ಸ್ವಾಗತಿಸಿದರು. ಗತ ಸಾಲಿನಲ್ಲಿ ಅಗಲಿದ ಟ್ರಸ್ಟ್‌ನ ಹಿತೈಷಿ ಹಾಗೂ ಕೊಡುಗೈದಾನಿಗಳಾದ ಜಯ ಸಿ. ಸುವರ್ಣ, ಎಂ. ಬಿ. ಕುಕ್ಯಾನ್‌, ಪ್ರೊ| ಶಿವ ಬಿಲ್ಲವ ಮತ್ತು ಟ್ರಸ್ಟ್‌ನ

ಸದಸ್ಯ ಶೇಖರ್‌ ಪೂಜಾರಿ ಸಹಿತ ಅನೇಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಜೀವ ಪೂಜಾರಿ ತೋನ್ಸೆ ಅವರು ಭಕ್ತರು ಒದಗಿಸಿದ ಹಣಕಾಸಿನ ಸಹಾಯದ ವಿವರಗಳನ್ನು ನೀಡಿ, ದಾನಿಗಳ ಹೆಸರುಗಳನ್ನು ತಿಳಿಸಿ ವಂದಿಸಿದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.