ಒಂದೇ ಹಾಸಿಗೆಯಲ್ಲಿ ಇಬ್ಬರು ರೋಗಿಗಳಿಗೆ ಚಿಕಿತ್ಸೆ


Team Udayavani, Mar 29, 2021, 12:02 PM IST

ಒಂದೇ ಹಾಸಿಗೆಯಲ್ಲಿ ಇಬ್ಬರು ರೋಗಿಗಳಿಗೆ ಚಿಕಿತ್ಸೆ

ಸಾಂದರ್ಭಿಕ ಚಿತ್ರ

ನಾಗಪುರ: ನಗರದ ಅತಿದೊಡ್ಡ ಸರಕಾರಿ ವೈದ್ಯಕೀಯ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾದ ಕಾರಣ ಒಂದೇ ಹಾಸಿಗೆಯಲ್ಲಿ ಇಬ್ಬರು ರೋಗಿಗಳನ್ನು ಮಲಗಿಸುವ ದೃಶ್ಯಗಳು ಕಂಡುಬಂದಿದ್ದು, ಸಾರ್ವಜನಿಕರನ್ನುಆತಂಕಕ್ಕೆ ಎಡೆಮಾಡಿದೆ.

ಈ ಕುರಿತಾದ ವೀಡಿಯೋವೊಂದು ವೈರಲ್‌ ಆದ ಬಳಿಕ ನಾಗಪುರದ ಆಡಳಿತದಲ್ಲಿ ಸಮನ್ವಯದ ಕೊರತೆಯಿಂದ ನಾಗರಿಕರ ಪ್ರಾಣಕ್ಕೆ ಕಂಟಕ ತರುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ವಿಷಯದ ಕುರಿತು ಆಸ್ಪತ್ರೆ ಆಡಳಿತವು ಮೌನವಾಗಿದ್ದು, ನಗರದಲ್ಲಿ ಸಾಕಷ್ಟು ಹಾಸಿಗೆಗಳು ಲಭ್ಯವಿದೆ ಎಂದು ಮಹಾನಗರ ಪಾಲಿಕೆಯ ಹೇಳಿದೆ.

ನಾಗಪುರ ಸರಕಾರಿ ವೈದ್ಯಕೀಯ ಆಸ್ಪತ್ರೆಯ ತುರ್ತು ರೋಗಿಗಳ ವಿಭಾಗದಲ್ಲಿ ಶೀತ, ಕೆಮ್ಮು, ಜ್ವರ ಮತ್ತು ಇತರ ರೋಗಲಕ್ಷಣಗಳನ್ನು ಹೊಂದಿರುವ ಸೋಂಕಿತರನ್ನು ಸೇರಿಸಲಾಗಿದೆ. ಹೆಚ್ಚಿನ ರೋಗಿಗಳಿಗೆ ಉಸಿರಾಟದ ತೊಂದರೆಇರುವುದರಿಂದ ಆಮ್ಲಜನಕ ನೀಡಲಾಗಿದೆ. ವಾರ್ಡ್‌ಗಳಲ್ಲಿ ಸೋಂಕಿತರು ತುಂಬಿರುವುದರಿಂದ ಇಬ್ಬರು ರೋಗಿಗಳನ್ನು ಒಂದೇ ಹಾಸಿಗೆಯ ಮೇಲೆ ಮಲಗಿಸುವುದಲ್ಲದೆ ಬೇರೆ ಪರ್ಯಾಯಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಪ್ರಸ್ತುತ ನಾಗಪುರ ಜಿಲ್ಲೆಯುಕೋವಿಡ್ ಕಪಿಮುಷ್ಠಿಯಲ್ಲಿ ಸಿಲುಕಿದ್ದು, ಜಿಲ್ಲೆಯಲ್ಲಿ ಶುಕ್ರವಾರ 3,579ಸೋಂಕು ಪ್ರಕರಣಗಳು ಪತ್ತೆಯಾಗಿವೆ.ಈ ಪೈಕಿ ನಗರ ಪ್ರದೇಶದಲ್ಲಿ 2,597ಪ್ರಕರಣಗಳು ಪತ್ತೆಯಾಗಿವೆ. ನಾಗಪುರ ನಗರದಲ್ಲಿ ಕೋವಿಡ್ ವೇಗವಾಗಿ ಹೆಚ್ಚುತ್ತಿರುವುದರಿಂದ ಸರಕಾರಿ ಆಸ್ಪತ್ರೆಯ ಕೋವಿಡ್ ವಾರ್ಡ್‌ ತುಂಬಿದ್ದು, ತುರ್ತು ವಿಭಾಗವೂ ಸೋಂಕಿತರಿಂದ ತುಂಬಿದೆ.

ಆಡಳಿತ ಪಕ್ಷದ ಬಗ್ಗೆ ಬಿಜೆಪಿ ಟೀಕೆ :

ನಾಗಪುರ ಸರಕಾರಿ ಆಸ್ಪತ್ರೆಯಪರಿಸ್ಥಿತಿ ಕುರಿತು ಮಾತನಾಡಿದ ಬಿಜೆಪಿಶಾಸಕರು, ಸ್ಥಳೀಯ ಆಡಳಿತ ಹಾಗೂ ಸರಕಾರದ ನಿರ್ಲಕ್ಷéದಿಂದ ಕೋವಿಡ್ ಹೆಚ್ಚಳವಾಗಿದೆ ಎಂದು ಆರೋಪಿಸಿದ್ದಾರೆ. ನಾಗಪುರದ ಜಿಲ್ಲಾ ಉಸ್ತುವಾರಿ ಸಚಿವರು ತಮಿಳುನಾಡಿನಲ್ಲಿ ಪಕ್ಷದ ಪರವಾಗಿ ಪ್ರಚಾರದಲ್ಲಿ ನಿರತರಾಗಿದ್ದರೆ, ಗೃಹ ಸಚಿವರು ಸ್ಥಾನ ಉಳಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಚಂದ್ರಶೇಖರ್‌ಬಾವಂಕುಲೆ ಆರೋಪಿಸಿದ್ದಾರೆ. ಸರಕಾರ ಮತ್ತು ಆಡಳಿತದ ನಡುವೆ ಸಮನ್ವಯದಕೊರತೆಯೇ ಪ್ರಸ್ತುತ ಸ್ಥಿತಿ ಸಂಭವಿಸಿದೆ ಎಂದು ಬಾವಂಕುಲೆ ಆರೋಪಿಸಿದ್ದಾರೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರಿಗೆ ಹೆಚ್ಚುವರಿ ಹಾಸಿಗೆಗಳನ್ನು ವ್ಯವಸ್ಥೆ ಮಾಡಲು ಮನಪಾಪ್ರಾರಂಭಿಸಿದೆ. ನಾಗಪುರದ 79 ಖಾಸಗಿ ಆಸ್ಪತ್ರೆಗಳಲ್ಲಿ ಪ್ರಸ್ತುತ 2,936 ಹಾಸಿಗೆಗಳನ್ನು ಕೊರೊನಾ ಪೀಡಿತರಿಗೆ ಮೀಸಲಿಡಲಾಗಿದೆ ಎಂದು ನಾಗಪುರ ಮನಪಾಹೇಳಿದೆ. ಈ ಪೈಕಿ 1,839 ಹಾಸಿಗೆಗಳು ಆಮ್ಲಜನಕಯುಕ್ತವಾಗಿದ್ದು, 994 ಐಸಿಯು ಹಾಸಿಗೆಗಳು ಮತ್ತು 261ವೆಂಟಿಲೇಟರ್‌ಗಳನ್ನು ಒಳಗೊಂಡಿದೆ.  ನಗರದ 8 ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರಿಗೆ ಒಟ್ಟು 1,515 ಹಾಸಿಗೆಗಳನ್ನು ಹೊಂದಿದೆ. ಇದರಲ್ಲಿಆಮ್ಲಜನಕದೊಂದಿಗೆ 152 ಹಾಸಿಗೆಗಳುಮತ್ತು ಐಸಿಯು ಸೌಲಭ್ಯದೊಂದಿಗೆ319 ಹಾಸಿಗೆಗಳನ್ನು ಹೊಂದಿದೆ. ಸರಕಾರಿ ಆಸ್ಪತ್ರೆಯಲ್ಲಿ 271 ವೆಂಟಿಲೇಟರ್‌ಗಳಿವೆ. ನಿಗಮದ ಅಂಕಿಅಂಶಗಳ ಪ್ರಕಾರ,ಈ ಹಾಸಿಗೆಗಳಲ್ಲಿ ಹೆಚ್ಚಿನವು ಅಂದರೆಶೇ. 90 ರಷ್ಟು ಈಗಾಗಲೇ ರೋಗಿಗಳ ಸೇವೆಯಲ್ಲಿವೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.