ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವುದೆ ಟ್ರಸ್ಟ್ ಉದ್ದೇಶ: ಜಯಂತಿ ರಾವ್
Team Udayavani, Jan 15, 2020, 6:21 PM IST
ಮುಂಬಯಿ, ಜ. 14: ದಿ| ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ಮತ್ತು ಮುಂಬಯಿ ಚುಕ್ಕಿ ಸಂಕುಲ ಸಹಕಾರದೊಂದಿಗೆ ಸ್ವರ್ಗೀಯ ಚಂದ್ರಶೇಖರ ರಾವ್ ಸಂಸ್ಮರಣಾ ಕಾರ್ಯಕ್ರಮವು ಜ. 9 ರಂದು ಭಾಂಡೂಪ್ನಲ್ಲಿ ಹಮ್ಮಿಕೊಳ್ಳಲಾಯಿತು.
ಜಯಂತಿ ಸಿ. ರಾವ್ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಚಂದ್ರಶೇಖರ ರಾವ್ ಅವರ ಆಶಯದಂತೆ ಈ ಟ್ರಸ್ಟ್ ರಚಿಸಲಾಗಿದ್ದು, ಮಕ್ಕಳ ಪ್ರತಿಭೆ ಪುರಸ್ಕಾರ, ಅಸಹಾಯಕರಿಗೆ ನೆರವು ಮತ್ತು ಅವರ ಆಸಕ್ತಿಯ ಕ್ಷೇತ್ರವಾದ ಸಾಹಿತ್ಯದಲ್ಲಿ ತೆರೆಮರೆಯಲ್ಲಿರುವ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವುದೇ ಉದ್ದೇಶವಾಗಿದೆ. ತಮ್ಮೆ ಲ್ಲರ ಸಹಕಾರದಿಂದ ಈ ನಿಟ್ಟಿಯಲ್ಲಿ ಮುಂದುವರಿಯುವ ಇಚ್ಛೆ ಇದೆ. ಇದೆಲ್ಲವನ್ನು ಸಾಧ್ಯವಾಗಿಸಲು ಸದಾ ಬೆನ್ನೆಲುಬಾಗಿರುವ ಚುಕ್ಕಿ ಸಂಕುಲದ ಕವಿ, ಸಾಹಿತಿ, ಕಲಾವಿದರಾದ, ರಾವ್ ಅವರ ನಿಕಟವರ್ತಿಗಳೂ ಆಗಿರುವ ಸಾ. ದಯಾ ಮತ್ತು ಗೋಪಾಲ ತ್ರಾಸಿ ಇವರ ಸಹಕಾರ ಅನುಪಮವಾದುದು ಎಂದರು.
ಈ ಸಂದರ್ಭದಲ್ಲಿ ನೆರೆದ ಕವಿಗಳಾದ ಶಾರದಾ ಅಂಬೆಸಂಗೆ, ಡಾ| ರಜನಿ ವಿ. ಪೈ, ಡಾ| ದಾಕ್ಷಾಯಣಿ ಯಡಹಳ್ಳಿ, ಸರೋಜ ಅಮಾತಿ, ಕುಮುದಾ ಶೆಟ್ಟಿ ಕಾವ್ಯ ವಾಚನ ಮಾಡಿದರು. ಅರುಣ್ ಶೇಠ್ ಮತ್ತು ಎಸ್. ಶೆಣೈ ಮಾತಾಡಿದರು. ಕಾರ್ಯಕ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು. ರಾವ್ ಅವರ ಹಿತೈಷಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ, ಮಕ್ಕಳ ಹಾಡು, ನೃತ್ಯ ಮತ್ತು ಕಾವ್ಯ ವಾಚನಗೈದರು. ಹೋಪ್ ಫೌಂಡೇಶನ್ ಧಾರಾವಿ ಇದರ ಅನಿಲ ಬೊಡಲ್, ಭೀಮರಾಯ ಚಿಲ್ಕಾ ಮತ್ತಿತರರು ಉಪಸ್ಥಿತರಿದ್ದರು. ಕವಿ, ಕಥೆಗಾರ ಗೋಪಾಲ ತ್ರಾಸಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ ರಾವ್ ಅವರ ಕವನ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಾಹಿತ್ಯಾಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ