ಭಗವಂತನಿಗೆ ಪ್ರಿಯವಾದ ದ್ರವ್ಯ ತುಳಸಿ: ಸಚ್ಚಿದಾನಂದ ರಾವ್‌


Team Udayavani, Nov 24, 2020, 7:51 PM IST

ಭಗವಂತನಿಗೆ ಪ್ರಿಯವಾದ ದ್ರವ್ಯ ತುಳಸಿ: ಸಚ್ಚಿದಾನಂದ ರಾವ್‌

ಮುಂಬಯಿ, ನ. 23: ಮೀರಾರೋಡ್‌ ಪೂರ್ವದ ಗೀತಾ ನಗರದಲ್ಲಿರುವ ಪ್ರತಿಷ್ಠಿತ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯ ಅವರಣದಲ್ಲಿ ತುಳಸಿ ಪೂಜೆಯು ದೀಪಾವಳಿ ಬಲಿಪಾಡ್ಯಮಿಯಂದು ಆರಂಭಗೊಂಡಿದ್ದು, ಪಲಿಮಾರು ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ನೇತೃತ್ವದಲ್ಲಿ ನ. 27ರ ಉತ್ಥಾನ ದ್ವಾದಶಿವರೆಗೆ 12 ದಿನಗಳ ಕಾಲ ತುಳಸಿ ಸಂಕೀರ್ತನೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸಂಜೆಯಾಗುತ್ತಿದ್ದಂತೆ ಶ್ರೀ ಬಾಲಾಜಿ ಮಂದಿರದ ಸುತ್ತಮುತ್ತಲಿನ ಪ್ರಾಂಗಣದಲ್ಲಿ ಸಾಲು ಸಾಲಿನಲ್ಲಿ  ಪಜ್ವಲಿಸುವ ಸ್ವದೇಶಿ ನಿರ್ಮಿತ ಹಣತೆ ದೀಪಗಳ ಸೊಬಗು, ರಂಗು ರಂಗಿನ ಗೂಡುದೀಪ, ಸನ್ನಿಧಿಯಲ್ಲಿ ಮೊಳಗುವ ಶಂಖನಾದ, ಗಂಟೆಗಳ ಧ್ವನಿ ಆತ್ಮಸ್ಥೆರ್ಯವನ್ನು ಹೆಚ್ಚುಸುತ್ತಿದೆ. ಕಾರ್ತಿಕ ಮಾಸದಲ್ಲಿ ಆಚರಿಸುವಂತಹ ವಿಶೇಷ ಆಚರಣೆಯಲ್ಲಿ ತುಳಸಿ ಪೂಜೆಯು ಅತ್ಯಂತ ಪ್ರಧಾನವಾಗಿದ್ದು, ಮಠದ ಅವರಣದಲ್ಲಿರುವ ತುಳಸಿ ಕಟ್ಟೆಯನ್ನು ರಂಗೋಲಿಯಿಂದ ಶೃಂಗರಿಸಿ ಆರಾಧಿಸಲಾಗುತ್ತಿದೆ.

ಟ್ರಸ್ಟಿ ಸಚ್ಚಿದಾನಂದ ರಾವ್‌ ತುಳಸಿ ಮಹತ್ವವನ್ನು ವಿವರಿಸಿ, ಲಕ್ಷ್ಮೀ ದೇವಿಯ ಪ್ರತಿರೂಪಳಾದ ತುಳಸಿದೇವಿ ಮಾತೆಯನ್ನು ಸಂಕೀರ್ತನೆಯೊಂದಿಗೆ ಭಜಿಸಲಾಗುತ್ತಿದೆ. ಧನಾತ್ಮಕ ಶಕ್ತಿ ಮತ್ತು ಸಮೃದ್ಧಿಗಾಗಿ ತುಳಸಿ ಗಿಡಕ್ಕೆ ಮುಂಜಾನೆ ನೀರೆರೆದರೆ ಮನೆಯಲ್ಲಿ ಸುಖ, ಶಾಂತಿ ನೆಲೆಸಿರುತ್ತದೆ ಎಂಬ ನಂಬಿಕೆ ಇದೆ. ಧಾರ್ಮಿಕವಾಗಿಯೂ ಅತ್ಯಂತ ಪವಿತ್ರ ಸ್ಥಾನ ಹೊಂದಿರುವ ತುಳಸಿ ಔಷಧೀಯ ಗುಣವನ್ನು ಹೊಂದಿದೆ. ತುಳಸಿ ದಳವನ್ನು ಬಳಸದೆ ಪೂಜಾ ಕಾರ್ಯಗಳು ಸಂಪನ್ನವಾಗುವುದಿಲ್ಲ. ಒಂದು ಹನಿ ತುಳಸಿ ನೀರು ಪವಿತ್ರ ಶಕ್ತಿಯನ್ನು ಒಳಗೊಂಡಿರುತ್ತದೆ. ಭಗವಂತನಿಗೆ ಪ್ರೀಯವಾದ ದ್ರವ್ಯ ತುಳಸಿಯಾಗಿದೆ ಎಂದರು.

ಪಲಿಮಾರು ಮಠದ ಟ್ರಸ್ಟಿ ವಾಸುದೇವ ಎಸ್‌. ಉಪಾಧ್ಯಾಯ ಅವರ ಪೌರೋಹಿತ್ಯ ದಲ್ಲಿ ರಾತ್ರಿ ತುಳಸಿ ಪೂಜೆ, ತುಳಸಿ ಸಂಕೀರ್ತನೆ ನೆರವೇರಿತು. ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಇಚ್ಛೆ, ಸಂಕಲ್ಪ ಹಾಗೂ ಮಾರ್ಗದರ್ಶನದಂತೆ ರಾತ್ರಿ ತುಳಸಿ ಪೂಜೆ, ತುಳಸಿ ಸಂಕೀರ್ತನೆ ಕುಣಿತ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ಇನ್ನಿತರ ಪೂಜಾಧಿಗಳು ನೆರವೇರಿದವು.

ಇದೇ ಸಂದರ್ಭದಲ್ಲಿ  ಶ್ರೀ ಬಾಲಾಜಿ ಸನ್ನಿಧಿಯ ಮಹಿಳಾ ಸದಸ್ಯೆಯರಿಂದ ಭಜನೆ, ರಾಮರಾಜ್‌ ದ್ವಿವೇದಿ ಅವರಿಂದ ಪ್ರವಚನ ನಡೆಯಿತು. ಸಂಕೀರ್ತನೆಯಲ್ಲಿ ಕುಮಾರ್‌ ಸ್ವಾಮಿ ಭಟ್‌, ರಾಘವೇಂದ್ರ ಆಚಾರ್ಯ, ಪ್ರಶಾಂತ್‌ ಭಟ್‌, ಶ್ರೀಶ ಉಡುಪ, ಶಂಕರ್‌ ಗುರು ಭಟ್‌, ಗುರುಶಂಕರ್‌ ಭಟ್‌, ರಾಮ ರಾಜ್‌ ದ್ವಿವೇದಿ, ವೃಷಭ ಭಟ್‌, ಗೋಪಾಲ ಭಟ್‌, ಕೃಷ್ಣಮೂರ್ತಿ ಉಪಾಧ್ಯಾಯ ಹಾಗೂ ಶ್ರೀ ಬಾಲಾಜಿ ಭಜನ ಮಂಡಳಿಯ ಸದಸ್ಯರು, ಸದಸ್ಯೆಯರು, ತುಳು-ಕನ್ನಡಿಗರು, ಭಕ್ತರು ಪಾಲ್ಗೊಂಡಿದ್ದರು. ಸಾಮಾಜಿಕ ಅಂತರ ಹಾಗೂ ಸರಕಾರದ ಕೋವಿಡ್‌ ಮಾರ್ಗ ಸೂಚಿಗಳಿಗೆ ಅನುಗುಣವಾಗಿ ಭಕ್ತರು ದೇವರ ದರ್ಶನ ಪಡೆದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.