ಪೂಜೆಯಲ್ಲಿ ತುಳಸಿಯ ಮಹತ್ವ ಅನನ್ಯ: ಧರ್ಮದರ್ಶಿ ಅಶೋಕ ದಾಸು ಶೆಟ್ಟಿ
Team Udayavani, Nov 30, 2020, 10:06 AM IST
ಡೊಂಬಿವಲಿ, ನ. 29: ಡೊಂಬಿವಲಿ ಪರಿಸರದ ಪ್ರತಿಷ್ಠಿತ ಧಾರ್ಮಿಕ ಹಾಗೂ ಸಾಮಾಜಿಕ ಸಂಸ್ಥೆಗಳಲ್ಲಿ ಒಂದಾದ ಡೊಂಬಿವಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ವತಿಯಿಂದ ಮಂದಿರದ ಸಭಾಂಗಣದಲ್ಲಿ ಕಾರ್ತಿಕ ಮಾಸದ ದ್ವಾದಶಿಯ ನಿಮಿತ್ತ ಶ್ರೀ ತುಳಸಿ ಪೂಜೆಯು ನ. 27ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ವೇದಮೂರ್ತಿ ಪಂಡಿತ್ ಶುಭಕರ ಭಟ್ ಮತ್ತು ರಾಜೇಶ್ ಭಟ್ ಅವರ ಪೌರೋಹಿತ್ಯದಲ್ಲಿ ವೇದ ಘೋಷಗಳ ಮಧ್ಯೆ ಮಂಡಳದ ಧರ್ಮದರ್ಶಿ ಅಶೋಕ್ ದಾಸು ಶೆಟ್ಟಿ ಮತ್ತು ಚಾರುಲತಾ ಅಶೋಕ್ ಶೆಟ್ಟಿ ದಂಪತಿ ತುಳಸಿ ಪೂಜೆಯ ವಿವಿಧ ಪೂಜಾ ಕೈಂಕರ್ಯಗಳ ಯಜಮಾನತ್ವ ವಹಿಸಿದ್ದರು. ತುಳಸಿ ಪೂಜೆಯ ನಿಮಿತ್ತ ತುಳಸಿ ಕಟ್ಟೆಯ ಪರಿಸರವನ್ನು ದೀಪಗಳಿಂದ ಸಿಂಗರಿಸಲಾಗಿತ್ತು. ಡೊಂಬಿವಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಮಹಿಳಾ ವಿಭಾಗದಿಂದ ಭಜನ ಕಾರ್ಯಕ್ರಮ ನಡೆಯಿತು.
ತುಳಸಿ ಪೂಜೆಯ ಬಳಿಕ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಮಂಡಳದ ಧರ್ಮದರ್ಶಿ ಅಶೋಕ ದಾಸು ಶೆಟ್ಟಿ ಅವರು, ಪರಮಾತ್ಮನ ಪೂಜೆಯಲ್ಲಿ ತುಳಸಿಯ ಮಹತ್ವ ಅನನ್ಯವಾಗಿದೆ. ನಮ್ಮ ಸನಾತನ ಭಾರತೀಯ ಸಂಸ್ಕೃತಿ ಹಾಗೂ ಆಯುರ್ವೇದದಲ್ಲಿಯೂ ತುಳಸಿ ಮಹತ್ವ ಪಡೆದ ದಿವ್ಯೌಷಧೀಯು ಹೌದು ಎಂದು ಹೇಳಿದ ಅವರು, ತುಳಸಿ ಪೂಜೆಯನ್ನು ಪ್ರತೀ ವರ್ಷ ನಡೆಸುವ ಮೂಲಕ ನಮ್ಮ ಹಿರಿಯರು ಭಾವೈಕ್ಯತೆಗೆ ಭದ್ರ ಬುನಾದಿಯನ್ನು ಹಾಕಿದ್ದಾರೆ. ನಮ್ಮ ಹಿರಿಯರು ಹಾಕಿ ಕೂಟ್ಟ ಮಾರ್ಗದಲ್ಲಿ ನಡೆದು ಸಾರ್ಥಕ ಜೀವನ ಸಾಗಿಸೋಣ. ಮಂಡಳಿಯ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ತುಳು, ಕನ್ನಡಿಗರು, ಭಕ್ತಾದಿಗಳು ಪಾಲ್ಗೊಂಡು ಸಹಕರಿಸಿ, ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿ ಶುಭಕೋರಿದರು.
ಮಂಡಳದ ಅಧ್ಯಕ್ಷ ಗೋಪಾಲ ಕೆ. ಶೆಟ್ಟಿ ಅವರು ಮಾತನಾಡಿ, ನಮ್ಮ ಸನಾತನ ಭಾರತೀಯ ಸಂಸ್ಕೃತಿಯಲ್ಲಿ ದೀಪಾವಳಿಗೆ ಮಹತ್ವವಿದೆ. ನಾವೆಲ್ಲರೂ ದೀಪಗಳನ್ನು ಹಚ್ಚುವ ಮೂಲಕ ನಮ್ಮ ಮನದ ಅಂಧಕಾರವನ್ನು ದೂರಗೂಳಿಸಿ ಸಾರ್ಥಕ ಜೀವನ ಸಾಗಿಸೋಣ ಎಂದು ಶುಭಹಾರೈಸಿದರು.
ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಪ್ರಾರಂಭದಲ್ಲಿ ಮಂಡಳದ ಆರಾಧ್ಯ ದೇವರಾದ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು. ಮಂಡಳದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು, ಭಕ್ತರು ಉಪಸ್ಥಿತರಿದ್ದು ಸಹಕರಿಸಿದರು. ಸ್ಥಳೀಯ ವಿವಿಧ ಸಮುದಾಯ ಮತ್ತು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಉದ್ಯಮಿಗಳು, ತುಳು, ಕನ್ನಡಿಗರು ಉಪಸ್ಥಿತರಿದ್ದು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ: ಗುರುರಾಜ ಪೊತನೀಸ್
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದ.ಕ.ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವ
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಹೊಸ ಸೇರ್ಪಡೆ
ಬೇಬಿಬೆಟ್ಟದಲ್ಲಿ ಅಕ್ರಮ, ಸಕ್ರಮ ಕಲ್ಲುಗಣಿಗಾರಿಕೆ ಶಾಶ್ವತ ನಿಷೇಧ
ವಿದೇಶಿ ನೆಲದ ಮುಗಿಲೆತ್ತರದಲ್ಲಿ ಹಾರಿದ ರಾಷ್ಟ್ರ ಧ್ವಜ
ಕೆಂಪುಕೋಟೆಗೆ ನುಗ್ಗಿದ ರೈತರು: ಪ್ರಧಾನಿ ಧ್ವಜಾರೋಹಣ ಮಾಡುವ ಸ್ಥಳದಲ್ಲಿ ರೈತರಿಂದ ಧ್ವಜಾರೋಹಣ!
ಹೇಮಗಿರಿಯಲ್ಲಿ ಫೆ.10ರಂದು ದನಗಳ ಜಾತ್ರೆ : ಗ್ರಾಮಸ್ಥರು, ಕಂದಾಯ ಇಲಾಖೆ ನೌಕರರಿಂದ ಶ್ರಮದಾನ
ಕಲಬುರಗಿಯಲ್ಲಿ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಜನತಾ ಪರೇಡ್: ಟ್ರ್ಯಾಕ್ಟರ್ ರಾಲಿ