ತುಳು ನಾಟಕ ನಿಶ್ಚಯ ಆಂಡ್ಗೆ ಮುಹೂರ್ತ
Team Udayavani, Nov 25, 2017, 4:41 PM IST
ಡೊಂಬಿವಲಿ: ಲೇಖಕ, ನಿರ್ದೇಶಕ, ರಂಗಕಲಾವಿದ ಧನಂಜಯ ಮೂಳೂರು ಇವರ 7ನೇ ಕೃತಿ ನಿಶ್ಚಯ ಆಂಡ್ ನಾಟಕದ ಮುಹೂರ್ತವು ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ನ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.
ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ ಅಧ್ಯಕ್ಷ ಆರ್. ಕೆ. ಸುವರ್ಣ, ಶಿವಸೇನ ದಕ್ಷಿಣ ಭಾರತೀಯ ಘಟಕ ಥಾಣೆ ಜಿಲ್ಲಾಧ್ಯಕ್ಷ ಜಯ ಪೂಜಾರಿ, ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಇನ್ನಂಜೆ, ಸಂಘದ ಕೋಶಾಧಿಕಾರಿ ಸದಾಶಿವ ಸಾಲ್ಯಾನ್ ಅವರು ದೀಪ ಪ್ರಜ್ವಲಿಸಿ ನೂತನ ನಾಟಕಕ್ಕೆ ಶುಭ ಹಾರೈಸಿದರು.
ನಾಟಕದ ಪ್ರತಿಯನ್ನು ಸಂಘದ ಅಧ್ಯಕ್ಷ ಆರ್. ಕೆ. ಸುವರ್ಣ, ಲೇಖಕ ಧನಂಜಯ ಮೂಳೂರು ಇವರು ರಂಗಕಲಾವಿದ ಶ್ರೀನಿವಾಸ ಕಾವೂರು ಮತ್ತು ಇತರ ಕಲಾವಿದರಿಗೆ ಹಸ್ತಾಂತರಿಸಿದರು. ಜ. 7ರಂದು ಡೊಂಬಿವಲಿ ಪೂರ್ವದ ಠಾಕೂರ್ ಸಭಾಗೃಹದಲ್ಲಿ ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ನ ವಾರ್ಷಿಕೋತ್ಸವ ಸಂಭ್ರಮದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ.
ಕಲಾವಿದರಾಗಿ ಶ್ರೀನಿವಾಸ ಕಾವೂರು, ಅಜೆಕಾರು ಜಯ ಶೆಟ್ಟಿ, ಜಯ ಪೂಜಾರಿ, ಜಗದೀಶ್ ಶೆಟ್ಟಿ, ಶೋಭಾ ಟಿ. ಪೂಜಾರಿ, ಚಿತ್ರಾ ಆರ್. ಸಾಲ್ಯಾನ್, ಬೈಲೂರು ಅರ್ಚನಾ ಜೆ. ಶೆಟ್ಟಿ, ಚಂದ್ರಹಾಸ ರೈ, ಉದಯಾ ಜೆ. ಶೆಟ್ಟಿ, ಕೆ. ಕೆ. ಸಾಲ್ಯಾನ್, ವಿಶ್ವನಾಥ್ ಶೆಟ್ಟಿ, ವಿನೋದ್ ಕರ್ಕೇರ, ತೃಪ್ತಿ ಕುಂದರ್, ಗುರುರಾಜ ಸುವರ್ಣ, ವಿನೀತ್ ಕೆ. ಶೆಟ್ಟಿ ಇವರು ಪಾಲ್ಗೊಳ್ಳಲಿದ್ದಾರೆ. ಸಂಘದ ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು