ತುಳು-ಕನ್ನಡ ವೆಲ್ಪೇರ್‌ ಅಸೋಸಿಯೇಶನ್‌  ಪ್ರಶಸ್ತಿ ಪ್ರದಾನ


Team Udayavani, Mar 14, 2019, 4:07 PM IST

1303mum07.jpg

ಮುಂಬಯಿ: ಗುರು ಶಿಷ್ಯರ ಸಂಬಂಧಗಳನ್ನು ಭದ್ರವಾಗಿರಿಸಿ ಉಸಿರಿನ ನಂತರವೂ ಹೆಸರನ್ನು ಉಳಿಸಿಕೊಂಡ ಆದರ್ಶ ಶಿಕ್ಷಕ, ಕವಿ, ನಾಟಕಕಾರ, ಅಂಕಣಕಾರ ದಿವಂಗತ ಬಿ. ಎಸ್‌. ಕುರ್ಕಾಲ್‌ ಆಗಿದ್ದಾರೆ. ಹಾಡು ಕವಿಯಾಗಿ ಮಕ್ಕಳಿಗೆ ಪದ್ಯ ಬರೆದು ಅವರ ಜವಾಬ್ದಾರಿಯನ್ನು  ಹೆಚ್ಚಿಸಿ ದೇಶಭಕ್ತಿ, ಪ್ರಕೃತಿ, ಧರ್ಮ, ಮಾನವೀಯ ಚಿಂತನೆಗಳ ಬರವಣಿಗೆ ನೀಡಿ ಜನ ಜಾಗೃತಿಗೊಸಿದ ಅವರು ಇತರರಿಗೆ ಮಾದರಿಯಾಗಿದ್ದಾರೆ. ಅವರ  ಸ್ಮರಣಾರ್ಥ ಜರಗುವ  ದತ್ತಿನಿಧಿ ಸಂಸ್ಮರಣಾ ಪ್ರಶಸ್ತಿ ಸಮಾರಂಭ ಅವರ ಸಾಧನೆಗೆ ಸಂದ ಗೌರವವಾಗಿದೆ ಎಂದು ಸಾಹಿತಿ, ವಿಮರ್ಶಕ ಡಾ| ಕರುಣಾಕರ ಎನ್‌. ಶೆಟ್ಟಿ ಅಭಿಪ್ರಾಯಪಟ್ಟರು.

ಮಾ.10ರಂದು  ಮೀರಾ ರೋಡು ಪೂರ್ವದ ಜಹಾಂಗೀರ್‌ ಸರ್ಕಲ್‌ ಸಮೀಪದ ಶೀ ಗುರುನಾರಾಯಣ ಸಭಾಗೃಹದಲ್ಲಿ ತುಳು-ಕನ್ನಡ ವೆಲ್ಪೇರ್‌ ಅಸೋಸಿಯೇಶನ್‌ ಮೀರಾ-ಭಾಯಂದರ್‌ ಇದರ ದಿ| ಬಿ. ಎಸ್‌. ಕುರ್ಕಾಲ್‌ ಸ್ಮರಣಾರ್ಥ  ದತ್ತಿ ನಿಧಿ ಪ್ರಶಸ್ತಿ ಪ್ರಧಾನ  ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತ

ನಾಡಿದ ಅವರು, ಮುಂಬಯಿ ಮಹಾನಗರದಲ್ಲಿ ಕನ್ನಡವನ್ನು ಡಾ| ಜಿ. ಡಿ. ಜೋಶಿ ಪ್ರತಿಷ್ಠಾನ ಹೆಸರಿನಲ್ಲಿ ಮನೆ ಮನೆಯಲ್ಲಿ ಸಾಹಿತ್ಯ ಸಂಭ್ರಮವನ್ನು ನಡೆಸುತ್ತಾ ಕ್ರಿಯಾಶೀಲರಾಗಿರುವ ಡಾ| ಜಿ. ಡಿ. ಜೋಶಿ  ದತ್ತಿ ನಿಧಿ ಪ್ರಶಸ್ತಿ ಪ್ರಧಾನಿಸಿ ಅದರ ಘನತೆ ಗೌರವ ಹೆಚ್ಚಿಸಿದ್ದೀರಿ. ಇಂತಹ  ಕಾರ್ಯಗಳು ನಿರಂತರ ಸಾಗಲಿ ಎಂದು ಹಾರೈಸಿದರು.

ಸಮಾರಂಭದಲ್ಲಿ ಹಿರಿಯ ಸಾಹಿತಿ, ನಿವೃತ್ತ ಪ್ರಾಂಶುಪಾಲ ಡಾ| ಜಿ. ಡಿ. ಜೋಶಿ ಅವರಿಗೆ ಪ್ರಶಸ್ತಿ ಪ್ರಧಾನಿಸಿ ಗಣ್ಯರು ಗೌರವಿಸಿದರು. ಸಮ್ಮಾನ  ಸ್ವೀಕರಿಸಿ ಮಾತನಾಡಿದ ಡಾ| ಜಿ. ಡಿ. ಜೋಶಿ ಅವರು ಸೃಜನ ಶೀಲ ಲೇಖಕರಿಗೆ, ಉದಯೋನ್ಮಖ ಬರಹಗಾರರಿಗೆ, ಸಾಹಿತ್ಯಾಸಕ್ತರಿಗೆ ಮುಂಬಯಿ ಜನತೆಯ ಪ್ರೋತ್ಸಾಹ ಅನನ್ಯವಾಗಿದೆ.  ಸಾಮಾನ್ಯ  ಶಿಕ್ಷಕನಾದ ನನಗೆ ಪದೋನ್ನತಿ,  ಹಲವಾರು ಪ್ರಶಸ್ತಿ, ಸಂಘ ಸಂಸ್ಥೆಗಳ ವಿವಿಧ ಹು¨ªೆಗಳಲ್ಲಿ ಸಮಾಜ ಸೇವೆ ಮಾಡುವ ಅವಕಾಶ ನೀಡಿ ಇಷ್ಟು ಎತ್ತರಕ್ಕೆ ಬೆಳೆಸಿದ್ದಿರಿ ಎಂದು ಹೇಳಿ ಅವರು  ಕೃತಜ್ಞತೆ  ಸಲ್ಲಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಡಾ| ಎನ್‌.  ಎ. ಹೆಗ್ಡೆ ಮಾತನಾಡಿ ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಗೊಂಡು ಸ್ವಾವಲಂಬಿ ಬದುಕಿಗೆ ಮಹತ್ವರ ಆದ್ಯತೆ ನೀಡಬೇಕು. ಹೆಣ್ಣು ಮಗುವನ್ನು ಆರೋಗ್ಯಕರ ಸ್ಥಾನಮಾನದೊಂದಿಗೆ ಪೋಷಿಸಬೇಕು ಎಂದರು. ವಿದ್ವಾನ್‌ ರಾಧಾಕೃಷ್ಣ ಭಟ್‌, ಲಯನ್‌ ಡಾ| ಶಂಕರ್‌  ಕೆ. ಟಿ., ರವೀಂದ್ರ  ಶೆಟ್ಟಿ ಕೊಟ್ರಪಾಡಿ ಶುಭ ಹಾರೈಸಿ ಮಾತನಾಡಿದರು. ತುಳು ಕನ್ನಡ  ವೆಲ್ಪೇರ್‌ನ ಅಧ್ಯಕ್ಷ ಎ. ಕೆ. ಹರೀಶ್‌ ಸ್ವಾಗತಿದರು.ಅಶೋಕ್‌ ವಳದೂರ್‌ ಅತಿಥಿಗಳನ್ನು ಪರಿಚ ಯಿಸಿ ಕಾರ್ಯಕ್ರಮ ನಿರೂಪಿಸಿದರು. ಗೀತಾ  ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು. ಆಶಾ ಪಿ.  ಶೆಟ್ಟಿ ವಂದಿಸಿ ದರು. ವೇದಿಕೆಯಲ್ಲಿ ಉದಯ ಶೆಟ್ಟಿ  ಪೆಲತ್ತೂರು, ಶುಭಾ ಸತೀಶ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಎಸ್‌. ಶೆಟ್ಟಿ, ಉಪಾಧ್ಯಕ್ಷೆ ಲೀಲಾ ಗಣೇಶ್‌ ಕಾರ್ಕಳ ಉಪಸ್ಥಿತರಿದ್ದರು. ಸಂಸ್ಕೃತಿ ಕಾರ್ಯಕ್ರಮದಲ್ಲಿ ಮಕ್ಕಳ  ನೃತ್ಯ ವೈಭವ ಮತ್ತು ಗಣೇಶ್‌ ಎರ್ಮಾಳ್‌ ಅವರಿಂದ  ಸಂಗೀತ ರಸಮಂಜರಿ ನಡೆಯಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆ ಆಯೋಜಿಸಲಾಗಿತ್ತು.

 ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.