ತುಳುಕೂಟ ಐರೋಲಿ ದಶಮಾನೋತ್ಸವ ಸಮಾಲೋಚನ ಸಭೆ


Team Udayavani, Mar 22, 2017, 4:58 PM IST

21-Mum05a.jpg

ನವಿಮುಂಬಯಿ: ಕಳೆದ ಒಂಭತ್ತು ವರ್ಷಗಳು ಒಂಭತ್ತು ತಿಂಗಳಂತೆ ಭಾಸವಾಗುತ್ತಿದೆ. ನಿನ್ನೆ ಸಸಿಯಾಗಿ ನಿಂತಿದ್ದ ತುಳುಕೂಟ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಇದಕ್ಕೆ ಮುಖ್ಯ ಕಾರಣ ತುಳುಕೂಟದ ಸದಸ್ಯರ ಒಕ್ಕೂಟದ ಆತ್ಮೀಯತೆ ಹಾಗೂ ಅವರ ಹೃದಯ ವೈಶಾಲ್ಯ. ಮನುಷ್ಯನು ತನ್ನ ಉತ್ತಮ ಕಾರ್ಯದ ಮೂಲಕ ತಾನು ಹಾಗೂ ತನ್ನ ಪರಿವಾರದೊಂದಿಗೆ ಶ್ರೇಷ್ಠನಾಗುತ್ತಾನೆ. ತನ್ನ ಒಳ್ಳೆಯ ಕೆಲಸ ಕಾರ್ಯಗಳಿಂದ ಸಮಾಜಕ್ಕೆ ಆದರ್ಶಪ್ರಾಯನಾಗಿ ಬದುಕುತ್ತಾನೆ. ತುಳು

ಕೂಟದಂತಹ ಸಮಾಜಪರ ಕಾರ್ಯಕ್ರಮಗಳನ್ನು ಮಾಡುವ ಸಂಸ್ಥೆಗೆ ತಮ್ಮ ಕೊಡುಗೆಯನ್ನು ನೀಡುತ್ತಾನೆ. ಸಂಸ್ಥೆಯ ಅಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾನಿಧಿ ಕುಂಭದ ಯೋಜನೆಯು ನಿಜವಾಗಿಯೂ ಸದುದ್ದೇಶ ಪೂರಿತವಾಗಿದೆ. ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ, ಅವರ  ಹನ್ನೆರಡನೇ ತರಗತಿಯವರೆಗಿನ ವ್ಯಾಸಂಗದ ಶುಲ್ಕವನ್ನು ಭರಿಸುವುದು ಉತ್ತಮ ಕಾರ್ಯವಾಗಿದೆ. ಈಗಾಗಲೇ ಈ ಯೋಜನೆಯಡಿ ಸುಮಾರು 25 ಲಕ್ಷ ರೂ. ಗಳನ್ನು ಸಂಗ್ರಹಿಸಲಾಗಿರುವುದು ಹೆಮ್ಮೆಯ ವಿಷಯವಾಗಿದೆ. ಸಂಸ್ಥೆಯ ಎಲ್ಲಾ ಸದಸ್ಯರು ಈ ಯೋಜನೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ನುಡಿದರು.

ಮಾ. 19ರಂದು ಸಂಜೆ ಐರೋಲಿಯ ಹೆಗ್ಗಡೆ ಭವನದಲ್ಲಿ ತುಳುಕೂಟ ಐರೋಲಿ ವತಿಯಿಂದ ನಡೆದ ಸಂಸ್ಥೆಯ ದಶಮಾನೋತ್ಸವ ಸಮಾಲೋಚನ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರನ್ನಾಗಿ ಚಂದ್ರಹಾಸ ರೈ ಬೊಲಾ°ಡುಗುತ್ತು ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ. ಅವರೋರ್ವ ದಾನಿಯಾಗಿ, ಅನುಭವಿ ಸಮಾಜ ಸೇವಕರಾಗಿದ್ದು, ಈ ಗೌರವವನ್ನು ಅವರು ಯಶಸ್ವಿಯಾಗಿ ಅಲಂಕರಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ನುಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತುಳುಕೂಟ ಐರೋಲಿಯ ಅಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ ಅವರು ಮಾತನಾಡಿ, ಕಳೆದ ಒಂಭತ್ತು ವರ್ಷಗಳಿಂದ ವಿವಿಧ ಕಾರ್ಯಚಟುವಟಿಕೆಗಳನ್ನು ಮಾಡಿ, ಅಪಾರ ಜನಮನ್ನಣೆಯನ್ನು ಪಡೆದು ಇಂದು ದಶಮಾನೋತ್ಸವ ಸಂಭ್ರಮದಲ್ಲಿರುವ ತುಳುಕೂಟಕ್ಕೆ ನಿವಾಜದ ಸಹಾಯ ಕಾರ್ಯಕಾರಿ ಸಮಿತಿಯ ಸದಸ್ಯರು, ಹೃದಯವಂತ ದಾನಿಗಳಿಂದ ಲಭಿಸಿದೆ. ಸಂಸ್ಥೆಯು ಇತರ ಜಾತ್ಯತೀಯ ಸಂಸ್ಥೆಗಳಿಗೆ ಮಾದರಿಯಾಗಿದೆ. ಮಾಜಿ ಅಧ್ಯಕ್ಷರಾದ ಮಧು ಎನ್‌. ಕೋಟ್ಯಾನ್‌, ಲ್ಯಾನ್ಸಿ ಡಿಕುನ್ಹಾ, ಪ್ರಕಾಶ್‌ ಆಳ್ವ, ಜಗದೀಶ್‌ ಶೆಟ್ಟಿ ನಾಡಾಜೆಗುತ್ತು  ಅವರ ಮುನ್ನೋಟದ ಫಲ ಇಂದು ದಶಮಾನೋತ್ಸವ ಸಂಭ್ರಮವಾಗಿದೆ. ವಿದ್ಯಾನಿಧಿ ಕುಂಭ ಯೋಜನೆಯ ಸಫಲತೆಗಾಗಿ ದುಡಿಯುತ್ತಿರುವ ಎಲ್ಲಾ ಸದಸ್ಯರಿಗೂ ವಿಶೇಷವಾಗಿ ಹಿರಿಯ ಸದಸ್ಯರು, ಮಹಿಳಾ ವಿಭಾಗದವರ ಶ್ರಮಕ್ಕೆ ಋಣಿಯಾಗಿದ್ದೇನೆ. ಮುಂದಿನ ಕಾಲಾವಧಿಯಲ್ಲಿ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರವಿರಲಿ ಎಂದರು.

ನೂತನ ಗೌರವಾಧ್ಯಕ್ಷರಾಗಿ ನೇಮಕಗೊಂಡ ಬೊಲಾ°ಡುಗುತ್ತು ಚಂದ್ರಹಾಸ ರೈ ಅವರು ಮಾತನಾಡಿ, ನಾನು ಅನೇಕ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಕೆಲಸದ ಒತ್ತಡದಲ್ಲಿದ್ದರೂ ಕೂಡಾ ನಮ್ಮ ಪ್ರಿಯ ಸಂಸ್ಥೆಯಾಗಿರುವ ತುಳುಕೂಟದ ಮನವಿಯನ್ನು ಪರಿಗಣಿಸಿ ಈ ಪದವಿಯನ್ನು ಸ್ವೀಕರಿಸಿದ್ದೇನೆ. ದಶಮಾನೋತ್ಸವದ ಯಶಸ್ಸಿಗಾಗಿ ಪ್ರಯತ್ನಿಸುತ್ತೇನೆ. ಮಹಿಳೆಯರು ಕೂಡಾ ಇಲ್ಲಿ ವಿದ್ಯಾನಿಧಿಗೆ ಸಹಕರಿಸುತ್ತಿರುವುದನ್ನು ಕಂಡು ಸಂತೋಷವಾಯಿತು. ದಶಮಾನೋತ್ಸವ ಸಂದರ್ಭದಲ್ಲಿ ತುಳುನಾಡಿನ ಏಳ್ಗೆಗಾಗಿ ಶ್ರಮಿಸಿದ ತುಳುವರ ಭಾವಚಿತ್ರ ಅಥವಾ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿ ಅವರ ಕೊಡುಗೆಯನ್ನು ಸ್ಮರಿಸುವ ಪ್ರಯತ್ನ ಮಾಡೋಣ. ತಮ್ಮೆಲ್ಲರ ಸಹಕಾರದಿಂದ ದಶಮಾನೋತ್ಸವ ಉತ್ತಮ ರೀತಿಯಿಂದ ಸಾಗಲಿ ಎಂದರು.

ಮಾಜಿ ಅಧ್ಯಕ್ಷರಾದ ಲ್ಯಾನ್ಸಿ ಕುನ್ಹಾ, ಜಗದೀಶ್‌ ಶೆಟ್ಟಿ ನಾಡಾಜೆಗುತ್ತು ಅವರು ವಿದ್ಯಾನಿಧಿಯ ದೇಣಿಗೆ ಸಂಗ್ರಹದ ಬಗ್ಗೆ ಮಾಹಿತಿ ನೀಡಿದರು. ಶ್ರೀ ಶನೀಶ್ವರ ಮಂದಿರ ನೆರೂಲ್‌ ಅಧ್ಯಕ್ಷ ಧರ್ಮದರ್ಶಿ ರಮೇಶ್‌ಎನ್‌. ಪೂಜಾರಿ, ಶ್ರೀ ಮಣಿಕಂಠ ಸೇವಾ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ, ರಂಗಭೂಮಿ ಫೈನ್‌ಆರ್ಟ್ಸ್ ಅಧ್ಯಕ್ಷ ವಿ. ಕೆ. ಸುವರ್ಣ ಅವರು ಮಾತನಾಡಿ ಶುಭ ಹಾರೈಸಿದರು.

ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಅಮರನಾಥ್‌ ಶೆಟ್ಟಿ ಕಳತ್ತೂರು ದಶಮಾನೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೋಶಾಧಿಕಾರಿ ಗಂಗಾಧರ ಬಂಗೇರ ಬಂಟ್ವಾಳ ಲೆಕ್ಕಪತ್ರ ಮಂಡಿಸಿದರು. ವೇದಿಕೆಯಲ್ಲಿ ಕೆ. ಕೆ. ಹೆಬ್ಟಾರ್‌, ನಾಗೇಶ್‌ ಶೆಟ್ಟಿ ಬೈಕಾಡಿ ಹೆದ್ದಾರಿಮನೆ, ಜಗದೀಶ್‌ ಶೆಟ್ಟಿ ನಾಡಾಜೆಗುತ್ತು, ರಾಜೇಶ್‌ ಬಿ. ಶೆಟ್ಟಿ, ವಿಜಯ ಕೆ. ಶೆಟ್ಟಿ, ಉದಯ ಎನ್‌. ಶೆಟ್ಟಿ ಅವರು ಉಪಸ್ಥಿತರಿದ್ದರು. ಸನ್ನಿಧಿ ವಿ. ಶೆಟ್ಟಿ ಪ್ರಾರ್ಥನೆಗೈದರು. ರಮೇಶ್‌ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. 

ಸಭೆಯಲ್ಲಿ ಬಂಟರ ಸಂಘ ಮುಂಬಯಿ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ, ಉದ್ಯಮಿ ಚಂದ್ರಹಾಸ ರೈ ಬೊಲಾ°ಡುಗುತ್ತು ಅವರನ್ನು ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರನ್ನಾಗಿ ನೇಮಿಸಲಾಯಿತು. ವಿಜಯ ಕೆ. ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಹಾಗೂ ಉದಯ ಎನ್‌. ಶೆಟ್ಟಿ ಅಂಗಡಿಗುತ್ತು ಅವರನ್ನು ಲೆಕ್ಕಪತ್ರ ಮೇಲ್ವಿಚಾರಕರನ್ನಾಗಿ ನೇಮಿಸಲಾಯಿತು. ನೂತನ ಗೌರವಾಧ್ಯಕ್ಷರನ್ನು ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಸ್ವಾಗತಿಸಿ ಗೌರವಿಸಿ ಅಭಿನಂದಿಸಿದರು. ವಿಜಯ ಕೆ. ಶೆಟ್ಟಿ ಹಾಗೂ ಉದಯ ಎನ್‌. ಶೆಟ್ಟಿ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.