ತುಳುಕೂಟ ಐರೋಲಿ:ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮುಹೂರ್ತ


Team Udayavani, Oct 15, 2017, 4:13 PM IST

658.jpg

ನವಿಮುಂಬಯಿ: ತುಳುಕೂಟ ಐರೋಲಿ ಇದರ ದಶಮಾನೋತ್ಸವ ಸಂಭ್ರಮವನ್ನು 2018ನೇ ಜ. 7ರಂದು ವಾಶಿಯ ಸಿಡ್ಕೊà ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲು ನಿರ್ಧರಿಸಲಾಗಿದ್ದು, ಇದರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮುಹೂರ್ತ ಕಾರ್ಯಕ್ರಮವು ಇತ್ತೀಚೆಗೆ ಐರೋಲಿಯ ಹೆಗ್ಗಡೆ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಮಾತನಾಡಿ, ತುಳುಕೂಟ ಐರೋಲಿಯು ಜಾತ್ಯತೀತ ಸಂಸ್ಥೆಯಾಗಿ ಬೆಳೆದು ನಿಂತಿದೆ. ಸಂಸ್ಥೆಯ ಬೆಳವಣಿಗೆಗೆ ಅದರ ಕಾರ್ಯಕರ್ತರ ಕಾರ್ಯವೈಖರಿಯನ್ನು ಅವಲಂಬಿಸಿರುವುದು ನನಗೆ ಸಂತೋಷ ತಂದಿದೆ. ನಾನು ಈ ಸಂಸ್ಥೆಯೊಂದಿಗೆ ಕಳೆದ 9 ವರ್ಷಗಳಿಂದ ಸಲಹೆಗಾರನಾಗಿ ಸೇವೆ ಸಲ್ಲಿಸುತ್ತಿದ್ದು, ತುಳುಕೂಟವು ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಅನ್ಯ ಸಂಸ್ಥೆಗಳಿಗೆ ಮಾದರಿಯಾಗಿದೆ. ಇಂದಿನ ಶುಭ ದಿನದ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮುಹೂರ್ತ ನಡೆದಿದ್ದು, ಮೂಕಾಂಬಿಕೆಯ ಅನುಗ್ರಹ ಎಲ್ಲರ ಮೇಲೆ ಸದಾಯಿರಲಿ ಎಂದು ಹೇಳಿದರು.

ಇನ್ನೋರ್ವ ಅತಿಥಿ ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ ಅವರು ಮಾತನಾಡಿ, ಉತ್ತಮ ಕಾರ್ಯಕ್ರಮವನ್ನು ಮಾಡುತ್ತಿರುವ ತುಳುಕೂಟ ಐರೋಲಿಯು ಈಗಾಗಲೇ ಎಲ್ಲರ ಪ್ರೀತಿ, ಗೌರವಕ್ಕೆ ಪಾತ್ರವಾಗಿದೆ. ಹೆಗ್ಗಡೆ  ಸೇವಾ ಸಂಘದ ಸಹಕಾರ ಸಂಸ್ಥೆಗೆ ಸದಾಯಿದೆ. ದಶಮಾನೋತ್ಸವ ಸಂದರ್ಭದಲ್ಲಿ ಪ್ರದರ್ಶಿಸಲ್ಪಡುವ ಎಲ್ಲಾ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ನೆರವೇರಲಿ ಎಂದು ನುಡಿದು ಶುಭ ಹಾರೈಸಿದರು.

ತುಳುಕೂಟ ಐರೋಲಿಯ ಅಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ ಅವರು ಮಾತನಾಡಿ, ಕಳೆದ ಒಂಭತ್ತು ವರ್ಷಗಳಿಂದ ಸಕ್ರಿಯ ಕಾರ್ಯಕರ್ತರು, ಮಹಿಳೆಯರು ಹಾಗೂ ಯುವ ಜನತೆಯ ಸಹಕಾರದಿಂದ ನಮ್ಮ ಸಂಸ್ಥೆಯು ಉತ್ತಮ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಫಲವಾಗಿದೆ. ದಶಮಾನೋತ್ಸವ ಸಮಾರಂಭವು ಬಂಟರ ಸಂಘ ನವಿಮುಂಬಯಿ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಚಂದ್ರಹಾಸ ರೈ ಬೊಳ್ನಾಡುಗುತ್ತು ಅವರ ಮುಂದಾಳತ್ವದಲ್ಲಿ ನಡೆಯಲಿದ್ದು, ಸಂಸ್ಥೆಯ ಕಲಾವಿದರು ಮಾದರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಬೇಕು ಎಂಬ ನಿಟ್ಟಿನಲ್ಲಿ ನಾವೆಲ್ಲರೂ ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ನೃತ್ಯ ನಿರ್ದೇಶನವನ್ನು ಸಹನಾ ಭಾರದ್ವಾಜ್‌, ನವೀನ್‌ ಬೇಂಗ್ರೆ, ಕಾಜಲ್‌ ಕುಂದರ್‌, ಗೀತಾ ಜಿ. ಶೆಟ್ಟಿ, ಅನಂತೇಶ್‌ ಮುದ್ದು ಅಂಚನ್‌, ಲಾವಣ್ಯ ಯು. ರಾವ್‌ ಅವರು ಸಹಕರಿಸಲಿದ್ದಾರೆ ಎಂದು ನುಡಿದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗ ವಹಿಸುವವರು ಅಮರ್‌ನಾಥ್‌ ಶೆಟ್ಟಿ ಕಳತ್ತೂರು (9820030989), ಗಿರೀಶ್‌ ಶೆಟ್ಟಿ ಬಂಟ್ವಾಳ (9664966493), ಶೈಲಶ್ರೀ ಅಮರ್‌ ಶೆಟ್ಟಿ (9819346105) ಇವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಕೆ. ಕೆ. ಹೆಬ್ಟಾರ್‌, ನಾಗೇಶ್‌ ಶೆಟ್ಟಿ ಬೈಕಾಡಿ ಹೆದ್ದಾರಿಮನೆ, ಗೌರವ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಬಿ. ಶೆಟ್ಟಿ, ಕೋಶಾಧಿಕಾರಿ ಗಂಗಾಧರ ಬಂಗೇರ ಬಂಟ್ವಾಳ, ದಶಮಾನೋತ್ಸವ ಸಮಾರಂಭದ ಉಪ ಕಾರ್ಯಾಧ್ಯಕ್ಷ ವಿಜಯ ಕೆ. ಶೆಟ್ಟಿ, ವಾರ್ಷಿಕ ಸಮಾರಂಭದ ಅಧ್ಯಕ್ಷ  ಅನಿಲ್‌ ಶೆಟ್ಟಿ ಪಾಂಗಾಳ, ಮಾಜಿ ಅಧ್ಯಕ್ಷರಾದ ಪ್ರಕಾಶ್‌ ಆಳ್ವ, ಜಗದೀಶ್‌ ಶೆಟ್ಟಿ ನಾಡಾಜೆಗುತ್ತು, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಅಮರ್‌ನಾಥ್‌ ಶೆಟ್ಟಿ ಕಳತ್ತೂರು, ಉಪ ಕಾರ್ಯಾಧ್ಯಕ್ಷರಾದ ಗಿರೀಶ ಶೆಟ್ಟಿ ಬಂಟ್ವಾಳ, ಸತೀಶ್‌ ಎ. ರೈ, ಸುಕೇಶ್‌ ಶೆಟ್ಟಿ ಇರ್ವತ್ತೂರು, ಉಮೇಶ್‌ ಶೆಟ್ಟಿ ಇನ್ನ ಮೊದಲಾದವರು ಉಪಸ್ಥಿತರಿದ್ದರು. ಅಮರ್‌ನಾಥ್‌ ಶೆಟ್ಟಿ ಕಳತ್ತೂರು ಕಾರ್ಯಕ್ರಮ ನಿರ್ವಹಿಸಿದರು. ಶೈಲಶ್ರೀ ಅಮರ್‌ ಶೆಟ್ಟಿ ಪ್ರಾರ್ಥನೆಗೈದರು. ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.