ತುಳು ಕೂಟ ಫೌಂಡೇಶನ್‌ ನಲಸೋಪರ ವಾರ್ಷಿಕ ಮಹಾಸಭೆ


Team Udayavani, Sep 26, 2021, 1:03 PM IST

ತುಳು ಕೂಟ ಫೌಂಡೇಶನ್‌ ನಲಸೋಪರ ವಾರ್ಷಿಕ ಮಹಾಸಭೆ

ಮುಂಬಯಿ: ತುಳು ಕೂಟ ಫೌಂಡೇಶನ್‌ ನಲಸೋಪರ ಇದರ ಎರಡನೇ ವಾರ್ಷಿಕ ಮಹಾಸಭೆ ತುಳುಕೂಟದ ಅಧ್ಯಕ್ಷ ರಮೇಶ್‌ ವಿ. ಶೆಟ್ಟಿ ಕಾಪು ಅವರ ಅಧ್ಯಕ್ಷತೆಯಲ್ಲಿ ಸೆ. 12ರಂದು ನಲಸೋಪರ ರೀಜೆನ್ಸಿ ಬ್ಯಾಂಕ್ವೆಟ್‌ ಸಭಾಗೃಹದಲ್ಲಿ ನಡೆಯಿತು.

ಸಭೆಯನ್ನು ದೀಪಬೆಳಗಿಸಿ ಉದ್ಘಾಟಿಸಿದ ರಮೇಶ್‌ ಶೆಟ್ಟಿ ಕಾಪು ಮಾತನಾಡಿ, ಜನ್ಮಭೂಮಿ ತುಳುನಾಡಿನಿಂದ ಕರ್ಮಭೂಮಿಗೆ ಆಗಮಿಸಿರುವ ತುಳುವರು ಒಗ್ಗಟ್ಟಿನಲ್ಲಿ ಇರಬೇಕು ಎಂಬ ಅಭಿಮಾನದಿಂದ ಬಹಳ ಸಂಖ್ಯೆಯಲ್ಲಿ  ಸೇರಿರುವುದನ್ನು ಕಂಡಾಗ ಸಂತೋಷವಾಗುತ್ತದೆ. ಕಷ್ಟದಿಂದ ಇರುವ ತುಳು-ಬಂಧುಗಳಿಗೆ ಸಹಕಾರಿಯಾಗಬೇಕು, ಮಕ್ಕಳು ವಿದ್ಯಾವಂತರಾಗಬೇಕು, ಅವರಿಗೆ ಆರ್ಥಿಕ ಸಹಕಾರ ನೀಡುವುದು ಇನ್ನಿತರ ಉದ್ದೇಶಗಳಿಂದ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇದೀಗ ಮುಂದಿನ ಮೂರು ವರ್ಷಗಳ ಅವಧಿಗೆ ಸಮರ್ಥ ನಾಯಕನನ್ನು ಆಯ್ಕೆ ಮಾಡಿದ್ದೇವೆ. ಅವರ ಕಾಲಾವಧಿಯಲ್ಲಿ ಈ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲು ಎಲ್ಲರೂ ಸಹಕಾರ ನೀಡಬೇಕು ಎಂದರು.

ಉಪ ಕಾರ್ಯಾಧ್ಯಕ್ಷ ಗಣೇಶ್‌ ಸುವರ್ಣ ಸ್ವಾಗತಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಗನ್ನಾಥ್‌ ಡಿ. ಶೆಟ್ಟಿ  ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ ಆಂತರಿಕ ಲೆಕ್ಕ ಪರಿಶೋಧಕರಾಗಿ ವಿಜಯ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆ ಬಗ್ಗೆ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಮಲ್ಲಿಕಾ ಪೂಜಾರಿ ಮಾಹಿತಿ ನೀಡಿದರು.

ನೂತನ ಅಧ್ಯಕ್ಷ ಶಶಿಧರ ಶೆಟ್ಟಿ ಇನ್ನಂಜೆ ಮಾತನಾಡಿ, ಇಲ್ಲಿನ ಗ್ರಾಮೀಣ ಪ್ರದೇಶದ ತುಳುವರು ಒಗ್ಗಟ್ಟಾಗಿರಬೇಕು ಎನ್ನುವ ಉದ್ದೇಶದಿಂದ ತುಳುಕೂಟ ಸ್ಥಾಪನೆಗೊಂಡಿದೆ. ಜನಸಾಮಾನ್ಯರ ಕಷ್ಟಗಳನ್ನು ಗುರುತಿಸಿ ಅವರಿಗೆ ಬೆಂಬಲಿಸುವ ಸೇವೆ ಮುಂದಿನ ದಿನಗಳಲ್ಲಿ  ಹೆಚ್ಚಾಗಿ ನಡೆಯಲಿದೆ. ಲಾಕ್‌ಡೌನ್‌ ಸಮಯದಲ್ಲಿ  ನಮ್ಮ ಸಂಸ್ಥೆ 3,550 ಕುಟುಂಬಗಳಿಗೆ ಆಹಾರದ ಕಿಟ್‌ಗಳನ್ನು ವಿತರಿಸಿದೆ. ತುಳುಕೂಟ ಫೌಂಡೇಶನ್‌ ಅಲ್ಪಾವಧಿಯಲ್ಲಿ ಮಾಡಿದ ಸಾಧನೆ ಬಗ್ಗೆ ನಮಗೆ ಗೌರವವಿದ್ದು, ಹಲವಾರು ಯೋಜನೆಗಳನ್ನು ರೂಪಿಸಿದ್ದೇವೆ ಎಂದರು.

ಸಭಿಕರ ಪರವಾಗಿ ದಯಾನಂದ, ಜಯಂತ್‌ ಪಕ್ಕಳ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಬಳಿಕ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಶಿಧರ ಕೆ. ಶೆಟ್ಟಿ ಇನ್ನಂಜೆ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಚುನಾವಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಲ| ಕೃಷ್ಣಯ್ಯ ಎ. ಹೆಗ್ಡೆ ಅಡಂದಾಲು ಕಾರ್ಯಕಾರಿ ಮಂಡಳಿಗೆ ಆಯ್ಕೆಗೊಂಡಿರುವ ಸದಸ್ಯರ ಯಾದಿಯನ್ನು ವಾಚಿಸಿದರು.

ನಿರ್ಗಮನ ಅಧ್ಯಕ್ಷ ರಮೇಶ್‌ ಶೆಟ್ಟಿ ಕಾಪು, ಉಪಾಧ್ಯಕ್ಷರಾದ ಗಣೇಶ್‌ ವಿ. ಸುವರ್ಣ, ಗೌರವ ಕೋಶಾಧಿಕಾರಿ ಸುರೇಂದ್ರ ಜೆ. ಶೆಟ್ಟಿ, ಜತೆ ಕೋಶಾಧಿಕಾರಿ ದಿವಾಕರ ಬಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಸತೀಶ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಿತೇಶ್‌ ಶೆಟ್ಟಿ ಉಪಸ್ಥಿತರಿದ್ದರು.

ಕೊರೊನಾ ಲಾಕ್‌ಡೌನ್‌ ಸಂದರ್ಭ ಆಹಾರ ಸಾಮಗ್ರಿಗಳನ್ನು ಮನೆಬಾಗಿಲಿಗೆ ತಲುಪಿಸಲು ಸಹಕರಿಸಿದ ಜಗನ್ನಾಥ ಡಿ. ಶೆಟ್ಟಿ ಪಳ್ಳಿ, ಲ| ಕೃಷ್ಣಯ್ಯ ಎ. ಹೆಗ್ಡೆ ಅಡಂದಾಲು, ರಾಮಣ್ಣ ಶೆಟ್ಟಿ, ಸುಪ್ರಿತ್‌ ಶೆಟ್ಟಿ ನೀರೆ, ಪ್ರವೀಣ್‌ ಶೆಟ್ಟಿ ಕಣಂಜಾರು, ದಯಾನಂದ ಬಿ. ಶೆಟ್ಟಿ, ರಮೇಶ್‌ ಪೂಜಾರಿ, ಜಯ ಅಶೋಕ್‌ ಶೆಟ್ಟಿ, ಉಷಾ ಶ್ರೀಧರ ಶೆಟ್ಟಿ, ಪ್ರೇರಕ್‌ ಕೃಷ್ಣಯ್ಯ ಹೆಗ್ಡೆ, ಯಶೋದಾ ಎಸ್‌. ಕೋಟ್ಯಾನ್‌, ಮಲ್ಲಿಕಾ ಆರ್‌. ಪೂಜಾರಿ, ಉಮಾ ಸತೀಶ್‌ ಶೆಟ್ಟಿ, ಶುಭಾಷ್‌ ಶೆಟ್ಟಿ ಎರ್ಮಾಳ್‌, ಪ್ರತ್ವಿರಾಜ್‌ ಶ್ರೀಧರ್‌ ಶೆಟ್ಟಿ, ರಿತೇಶ್‌ ಶೆಟ್ಟಿ, ಹರಿಪ್ರಸಾದ್‌ ಶೆಟ್ಟಿ, ಲಕೇಶ್‌ ಶೆಟ್ಟಿ, ಪ್ರಸಾದ್‌ ಬನ್ಸೋಡೆ, ಮಂಜುನಾಥ್‌ ಪೈ ಹಾಗೂ ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ತಯಾರಿಸಿದ ರೀಜೆನ್ಸ್‌ ಬ್ಯಾಂಕ್ವೆಟ್‌ನ ರಾಮಣ್ಣ ಶೆಟ್ಟಿ  ಮತ್ತು ನೌಕರ ವೃದದವರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಕಣಂಜಾರು ನಿರ್ವಹಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಡಿ. ಶೆಟ್ಟಿ ಪಳ್ಳಿ ವಂದಿಸಿದರು.

 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.