ತುಳುನಾಡ ಫ್ರೆಂಡ್ಸ್‌ ಮೀರಾರೋಡ್‌ ತುಳುನಾಡು ಟ್ರೋಫಿ -2019  


Team Udayavani, Feb 26, 2019, 1:22 PM IST

2302mum01.jpg

ಮುಂಬಯಿ: ತುಳುನಾಡ ಫ್ರೆಂಡ್ಸ್‌ ಮೀರಾರೋಡ್‌ ಇದರ ಬೆಳ್ಳಿಹಬ್ಬದ ಪ್ರಯುಕ್ತ ಆಯೋಜಿಸಿದ್ದ ತುಳುನಾಡು ಟ್ರೋಫಿ-2019 ಇದರ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವು ಫೆ. 17ರಂದು ಸಂಜೆ ಮೀರಾರೋಡ್‌ ಪೂರ್ವದ ಶಾಂತಿ ನಗರ ಸೆಕ್ಟರ್‌-5 ಮೈದಾನದಲ್ಲಿ ನೆರವೇರಿತು.

16 ತಂಡಗಳು ಭಾಗವಹಿಸಿದ್ದ ಮಹಿಳೆಯ ತ್ರೋಬಾಲ್‌ ಪಂದ್ಯಾಟ ದಲ್ಲಿ ಶ್ರೀ ಕಟೀಲೇಶ್ವರಿ ಮುಂಬಯಿ ತಂಡ ಪ್ರಥಮ ಸ್ಥಾನ ಪಡೆದರೆ, ರಪ್ಟೆàರ್  ಮುಂಬಯಿ ತಂಡ ದ್ವಿತೀಯ ಸ್ಥಾನ ಗಳಿಸಿತು. 10 ತಂಡಗಳು ಭಾಗವಹಿಸಿದ್ದ ಪುರುಷರ ವಾಲಿಬಾಲ್‌ ಪಂದ್ಯಾಟದಲ್ಲಿ ಶ್ರೀ ಸಾಯಿ ಸನ್ನಿಧಿ ಮೀರಾರೋಡ್‌ ಪ್ರಥಮ, ಎ. ಆರ್‌. ಬಾಯ್ಸ ಮುಂಬಯಿ ದ್ವಿತೀಯ ಸ್ಥಾನ ಗಳಿಸಿ ನಗದು, ಪ್ರಮಾಣ ಪತ್ರ, ಟ್ರೋಫಿಯೊಂದಿಗೆ ಗೌರವ ಸ್ವೀಕರಿಸಿತು.

ತ್ರೋಬಾಲ್‌ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಶ್ರೀ ಕಟೀಲೇಶ್ವರಿ ತಂಡದ ಅಕ್ಷತಾ ಶೆಟ್ಟಿ, ವಾಲಿಬಾಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಮಹಾರಾಷ್ಟ್ರ ಪೊಲೀಸ್‌ ತಂಡದ ಓಂಕಾರ್‌ ಹಾಗೂ ಉತ್ತಮ ಲಿಫ್ಟರ್‌ ಆಗಿ ಎ. ಆರ್‌. ಬಾಯ್ಸ ತಂಡದ ಸುರಾಜ್‌ ಮತ್ತು ಶ್ರೀ ಸಾಯಿ ಸನ್ನಿಧಿ ಮೀರಾರೋಡ್‌ ತಂಡದ ರಿಯಾಜ್‌ ಅವರು ಆಲ್‌ರೌಂಡರ್‌ ಪ್ರಶಸ್ತಿಗೆ ಭಾಜನರಾದರು.

ಸಮಾರಂಭದಲ್ಲಿ ರಾಜ್ಯಮಟ್ಟದ ಪವರ್‌ ಲಿಫ್ಟರ್‌ ಕಾವ್ಯಾ ಜೆ. ಕರ್ಕೇರ, ಕಿರಿಯ ಅಂತಾರಾಷ್ಟ್ರೀಯ ಬ್ಯಾಡ್‌ಮಿಂಟನ್‌ ಆಟಗಾರ ಅಕ್ಷನ್‌ ಕೆ. ಶೆಟ್ಟಿ, ರಾಜ್ಯ ಮಟ್ಟದ ಬಾಕ್ಸರ್‌ ಕೃತಿ ತೇಜಾ³ಲ್‌ ಕರ್ಕೇರ ಅವರನ್ನು ಗಣ್ಯರು ಸಮ್ಮಾನಿಸಿದರು. ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಶೆಟ್ಟಿ ಕಾಪು ಅತಿಥಿಗಳನ್ನು ಪರಿಚಯಿಸಿ ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸಿದರು.

ಅಧ್ಯಕ್ಷ ಶಂಕರ್‌ ಕೋಟ್ಯಾನ್‌ ಗಣ್ಯರನ್ನು ಸ್ವಾಗತಿಸಿ ಗೌರವಿಸಿದರು. ಜತೆ ಕಾರ್ಯದರ್ಶಿ ಕಿರಣ್‌ ಮೆಂಡನ್‌ ಬಹುಮಾನಿತರ ಯಾದಿಯನ್ನು ವಾಚಿಸಿದರು. ಗೌರವಾಧ್ಯಕ್ಷ ಯಾಧೇಶ್‌ ಪುತ್ರನ್‌, ಉಪಾಧ್ಯಕ್ಷರುಗಳಾದ ವಿಲ್ಫೆ†ಡ್‌ ಮಾರ್ಟಿಸ್‌, ಲಕ್ಷ್ಮೀಕಾಂತ್‌ ಪೂಜಾರಿ, ಕೋಶಾಧಿಕಾರಿ ದೀಪಕ್‌ ಮೆಂಡನ್‌, ಜತೆ ಕೋಶಾಧಿಕಾರಿ ರವಿ ಸುವರ್ಣ ಹಾಗೂ ಸದಸ್ಯರು ಗಣ್ಯರನ್ನು ಗೌರವಿಸಿದರು. ಬೆಳಗ್ಗೆ ಸಂಸದ ಗೋಪಾಲ್‌ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ದಿನಪೂರ್ತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳಾದ ಗಿರೀಶ್‌ ಶೆಟ್ಟಿ ತೆಳ್ಳಾರ್‌, ರವೀಂದ್ರನಾಥ ಭಂಡಾರಿ, ಡಾ| ಅರುಣೋದಯ ರೈ, ಮುನ್ನಲಾಯಿಗುತ್ತು ಸಚ್ಚಿದಾನಂದ ಶೆಟ್ಟಿ, ಡಾ| ಹರೀಶ್‌ ಶೆಟ್ಟಿ, ಸುರೇಶ್‌ ಗಂಧರ್ವ, ಸಚಿನ್‌ ಶೆಟ್ಟಿ ದುಬೈ, ಸುರೇಶ್‌ ಕುಂದರ್‌, ಚಂದ್ರಹಾಸ ಶೆಟ್ಟಿ ಇನ್ನ, ಗಣೇಶ್‌ ಆಳ್ವ, ವಿಶ್ವನಾಥ್‌ ಸಾಲ್ಯಾನ್‌, ರಾಜೇಶ್‌ ಶೆಟ್ಟಿ ತೆಳ್ಳಾರ್‌, ಮಹೇಶ್‌ ಪೂಜಾರಿ, ಕಿಶೋರ್‌ ಶೆಟ್ಟಿ ಮಿಯ್ನಾರು, ರೋಹಿತ್‌ ಶೆಟ್ಟಿ, ರಮೇಶ್‌ ಶೆಟ್ಟಿ ಸಿದ್ದಕಟ್ಟೆ, ಲೀಲಾಧರ ಸನಿಲ್‌, ಜಿ. ಕೆ. ಕೆಂಚನಕೆರೆ, ತೇಜಾ³ಲ್‌ ಕರ್ಕೇರ, ವಿಜಯಲಕ್ಷ್ಮೀ ಡಿ. ಶೆಟ್ಟಿ ಇವರು ಉಪಸ್ಥಿತರಿದ್ದರು.

ದಿನಪೂರ್ತಿ ಮತ್ತು ರಾತ್ರಿಯ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾಟವನ್ನು ಅಧಿಕ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ವೀಕ್ಷಿಸಿ ಸಹಕರಿಸಿದರು. ಲಘು ಉಪಾಹಾರದೊಂದಿಗೆ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

 ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.