ಕರ್ನಾಟಕ ಸಮಾಜ ಸೂರತ್ ವತಿಯಿಂದ ತುಳು ಪರ್ಬ ಆಚರಣೆ
Team Udayavani, Jul 5, 2019, 5:06 PM IST
ಮುಂಬಯಿ: ಕರ್ನಾಟಕ ಸಮಾಜ ಸೂರತ್ ಸಂಸ್ಥೆಯ ವತಿಯಿಂದ ತುಳುಪರ್ಬ ಆಚರಣೆಯು ಜೂ. 30ರಂದು ಸೂರತ್ನ ಜೀವನ್ ಭಾರತಿ ಸಭಾಂಗಣದಲ್ಲಿ ತುಳು ಸಂಘ ಅಂಕಲೇಶ್ವರ ಇದರ ಗೌರವಾಧ್ಯಕ್ಷ ತೋನ್ಸೆ ರವಿನಾಥ್ ವಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್. ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗುಜರಾತ್ನಲ್ಲಿ ತುಳುವರು ತುಳು ಭಾಷೆಯ ಆರಾಧನೆಯನ್ನು ನಡೆಸುತ್ತಿರುವುದು ಅಭಿಮಾನದ ವಿಷಯವಾಗಿದೆ. ನಮ್ಮ ನಾಡಿನ ಆಚಾರ, ವಿಚಾರ ತುಳುಪರ್ಬದ ಮೂಲಕ ಆಚರಿಸುತ್ತಿರುವುದು ಪ್ರಶಂಸನೀಯವಾಗಿದೆ ಎಂದರು.
ಇನ್ನೋರ್ವ ಮುಖ್ಯ ಅತಿಥಿ ವಿದ್ಯಾಶ್ರೀ ಎಸ್. ಉಳ್ಳಾಲ್ ಅವರು, ತಮ್ಮ ಕವನದೊಂದಿಗೆ ಮಾತು ಆರಂಭಿಸಿ, ತುಳುನಾಡಿನ ಭಾಷೆ, ಆಚರಣೆ ಮತ್ತು ಸಂಸ್ಕೃತಿಯ ಬಗ್ಗೆ ನಾಗಾರಾಧನೆ ದೈವಾರಾಧನೆ ಬಗ್ಗೆ ಮಾತನಾಡಿ, ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಇಂದಿನ ಯುವಪೀಳಿಗೆಗೆ ತಿಳಿಯಪಡಿಸುವ ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಹೆಚ್ಚಾಗಿ ಭಾಗಿಯಾಗುವಂತೆ ಮಾಡುವುದು ಪಾಲಕರ ಕರ್ತವ್ಯವಾಗಿದೆ ಎಂದು ನುಡಿದು ಸಂಸ್ಥೆಗೆ ಶುಭ ಹಾರೈಸಿದರು.
ಕರ್ನಾಟಕ ಸಮಾಜ ಸೂರತ್ ಸಂಸ್ಥೆಯ ಅಧ್ಯಕ್ಷರಾದ ದಿನೇಶ್ ಶೆಟ್ಟಿಯವರು ಮಾತನಾಡಿ, ಸಂಘದ ಸದಸ್ಯರ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ತುಂಬು ಹೃದಯದಿಂದ ಸಹಕರಿಸುತ್ತಿರುವುದು ಅಭಿನಂದನೀಯ. ಸಂಘದ ಇಂತಹ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ನುಡಿದರು.
ಸಭಾ ಕಾರ್ಯಕ್ರಮವು ರವಿನಾಥ್ ವಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಕರ್ನಾಟಕ ಸಮಾಜ ಸೂರತ್ ಸಂಸ್ಥೆಯ ನಿಕಟ ಪೂರ್ವಾಧ್ಯಕ್ಷರಾದ ಮನೋಜ್ ಸಿ. ಪೂಜಾರಿ ಅವರು ಮಾತನಾಡಿ, ಸಂಘದ ಏಳ್ಗೆಗಾಗಿ ಎಲ್ಲರೂ ಒಮ್ಮತದಿಂದ ಶ್ರಮಿಸಬೇಕು. ನಾವೆಲ್ಲರೂ ಸಂಸ್ಥೆಯನ್ನು ಇನ್ನಷ್ಟು ಅಭಿವೃದ್ಧಿಯತ್ತ ಸಾಗಿಸೋಣ ಎಂದು ಕರೆ ನೀಡಿದರು.
ಬರೋಡ ತುಳು ಸಂಘದ ಅಧ್ಯಕ್ಷರಾದ ಶಶಿಧರ ಶೆಟ್ಟಿ ಅವರು ಸೂರತ್ ಕರ್ನಾಟಕ ಸಮಾಜವು ಸೂರತ್ನ ಅಕ್ಕ ಪಕ್ಕದ ಊರುಗಳಿಗೆ ಮಾದರಿಯಾಗಿದೆ ಎಂದರು. ರಂಜನಿ ಪಿ. ಶೆಟ್ಟಿ ಮತ್ತು ಪವಿತ್ರಾ ಬಿ. ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ತುಳು ಕವಿ ಕುಶಾಲಾಕ್ಷಿ ವಿ. ಕುಲಾಲ್ ಅವರು ಕಳುಹಿಸಿಕೊಟ್ಟ ಪನಿ ಮುತ್ತು ಮಾಲೆ ಕವನ ಸಂಕಲನದ ಹೊತ್ತಿಗೆಯನ್ನು ವೇದಿಕೆಯ ಗಣ್ಯರಿಗೆ ಹಸ್ತಾಂತರಿಸಲಾಯಿತು
ಕಾರ್ಯಕ್ರಮದಲ್ಲಿ ನವ ವಿವಾಹಿತ ದಂಪತಿಗಳನ್ನು ಸಮ್ಮಾನಿಸಲಾಯಿತು. ವಸಂತ್ ಶೆಟ್ಟಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಹಬ್ಬದ ಹಾಗೂ ರವಿನಾಥ್ ಶೆಟ್ಟಿ ದಂಪತಿ ಮತ್ತು ರಾಧಾಕೃಷ್ಣ ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬವನ್ನು ವೈಭವದಿಂದ ಆಚರಿಸಿ ಸಮ್ಮಾನಿಸಲಾಯಿತು. ಅಮಿತಾ ಯು. ಸಫಲಿಗ ಪ್ರಾರ್ಥನೆಗೈದರು. ಚಂದ್ರಶೇಖರ್ ಎಸ್. ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಂಕಲೇಶ್ವರ ಸೂರತ್ ತುಳುವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅಭಿನಯ ಮಂಟಪ ಮುಂಬಯಿ ಕಲಾವಿದರಿಂದ ಒಯಕ್ಲಾ ದಿನ ಬರೊಡು ನಾಟಕ ಪ್ರದರ್ಶನಗೊಂಡಿತು. ಪ್ರಾಯೋಜಕರನ್ನು ನೆನಪಿನ ಕಾಣಿಕೆ ನೀಡಿ ಸಮ್ಮಾನಿಸಲಾಯಿತು.
ಸಮಾರಂಭದ ವೇದಿಕೆಯಲ್ಲಿ ಅಧ್ಯಕ್ಷ ದಿನೇಶ್ ಬಿ. ಶೆಟ್ಟಿ, ಗೌರವಾಧ್ಯಕ್ಷ ರಾಮಚಂದ್ರ ವಿ. ಶೆಟ್ಟಿ, ಉಪಾಧ್ಯಕ್ಷರಾದ ರಮೇಶ್ ಭಂಡಾರಿ ಬಾಡೋìಲಿ, ಉಮೇಶ್ ಸಫಲಿಗ, ಅಜಿತ್ ಅಂಕಲೇಶ್ವರ್, ಪ್ರಭಾಕರ ಶೆಟ್ಟಿ ಕೊಸಂಬಾ, ವನಿತಾ ಜೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಮೂಲ್ಯ ಕೆ., ಜತೆ ಕಾರ್ಯದರ್ಶಿ ಶಾಂತಿ ಡಿ. ಶೆಟ್ಟಿ, ಕೋಶಾಧಿಕಾರಿ ಚಂದ್ರಹಾಸ್ ಬಿ. ಸಫಲಿಗ, ಜತೆ ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿಗಾರ್, ಸಂಘಟನಾ ಕಾರ್ಯದರ್ಶಿ ಸಂತೋಷ್ ವಿ. ಶೆಟ್ಟಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಸದಸ್ಯರಾದ ಮನೋಜ್ ಸಿ. ಪೂಜಾರಿ, ವಿಶ್ವನಾಥ್ ಪೂಜಾರಿ, ರತ್ನಾಕರ್ ಕೋಟ್ಯಾನ್, ಸುನಿತಾ ಆರ್. ಶೆಟ್ಟಿ, ರಮೇಶ್ ರೈ, ಅಮಿತಾ ಯು. ಸಫಲಿಗ, ರಂಜನಿ ಪಿ. ಶೆಟ್ಟಿ, ಅಮಿತಾ ಜೆ. ಶೆಟ್ಟಿ, ಗಂಗಾಧರ ಶೆಟ್ಟಿಗಾರ್, ಸತೀಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ