ತುಳು ಸಂಘ ಬರೋಡಾ ವತಿಯಿಂದ 31ನೇ ವಾರ್ಷಿಕ ಬಿಸುಪರ್ಬ


Team Udayavani, Apr 18, 2018, 3:45 PM IST

1704mum02.jpg

ಬರೋಡಾ: ತುಳು ಸಂಘ ಬರೋಡಾದ ಮಹಿಳಾ ವಿಭಾಗವು ಇಂದು ಆಯೋಜಿಸಿರುವ ವೈಶಿಷ್ಟéಪೂರ್ಣ ಬಿಸು ಕಣಿ ದರ್ಶನ ಕಾರ್ಯಕ್ರಮ ಕಂಡು ಮನಸ್ಸಿಗೆ ಬಹಳ ಸಂತೋಷವಾಯಿತು. ನಾಡಿನ ಸಂಸ್ಕೃತಿ- ಸಂಸ್ಕಾರಗಳು ಇಂದು ಮರೆಯಾಗುತ್ತಿರುವ ಸಂದರ್ಭದಲ್ಲಿ ಇಲ್ಲಿನ ತುಳು-ಕನ್ನಡಿಗ ಮಹಿಳೆ ಯರು ಸಂಘಟಿತರಾಗಿ ಬಿಸುಹಬ್ಬವನ್ನು ಹಿಂದಿನ ಪರಂಪರೆಯಂತೆ ಆಚರಿಸಿ ಯುವ ಪೀಳಿಗೆಗೆ ಇದರ ಬಗ್ಗೆ ಅರಿವು ಮೂಡಿಸಿರುವುದು ಅಭಿನಂದನೀಯ. ದೂರದ ಗುಜರಾತಿನಲ್ಲಿ ನೆಲೆನಿಂತ ತುಳು-ಕನ್ನಡಿಗರು ಕಳೆದ ಮೂವತ್ತು ವರ್ಷಗಳಿಂದ ತಪಸ್ಸಿನಂತೆ ಬಹಳ ಸಡಗರದಿಂದ ಸಂಭ್ರಮವನ್ನು ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಸಂಸ್ಕೃತಿ, ಪರಂಪರೆಯನ್ನು ಉಳಿಸಿ-ಬೆಳೆಸುವ ಒಂದು ದೊಡ್ಡ ರಚನಾತ್ಮಕ ಯಜ್ಞ ಇದಾಗಿದೆ ಎಂದು ಮುಂಬಯಿ ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಇವರು ಅಭಿಪ್ರಾಯಿಸಿದರು.

ಎ. 14ರಂದು ತುಳು ಸಂಘ ಬರೋಡಾ ಇದರ ಮಹಿಳಾ ವಿಭಾಗದ ವತಿಯಿಂದ ಸಂಘ ತುಳು ಚಾವಡಿ ಸಭಾಗೃಹದಲ್ಲಿ ನಡೆದ 31ನೇ ವಾರ್ಷಿಕ ಬಿಸುಪರ್ಬ ಸಂಭ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಇವರು, ಹೆಣ್ಮಕ್ಕಳಿಗೆ ತವರು ಮನೆಯ ಯಾವ ಸುಖ, ಭೋಗಗಳು ಬೇಡ ಎಂದು ಅವರು ತಿಳಿಸಿದರು.

ಆದ್ದರಿಂದ ಪೋಷಕರು ಎಂತಹ ಕಷ್ಟದಲ್ಲಿದ್ದರೂ ಕೂಡಾ ತಮ್ಮ ಹೆಣ್ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುವ ಪಣ ತೊಡಬೇಕು. ಪಾಲಕರು ತಮ್ಮ ಈ ಹೊಣೆಗಾರಿಕೆಯಿಂದ ಯಾವ ಕಾರಣದಿಂದಲೂ ತಪ್ಪಿಸಿಕೊಳ್ಳಬಾರದು ಎಂದು ನಾನು ಕಳಕಳಿಯಿಂದ ಸೆರಗೊಡ್ಡಿ ಬೇಡಿ ಕೊಳ್ಳುತ್ತೇನೆ ಎಂದು ನುಡಿದು ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘ ಮಹಿಳಾ ವಿಭಾಗದ ಹಿರಿಯರಾದ ವಿನೋದಾ ಸುಧಾಕರ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಜಯಶ್ರೀ ಜಿನ ರಾಜ್‌ ಪೂಜಾರಿ, ತುಳು ಸಂಘ ಬರೋಡಾ ಮಹಿಳಾ ವಿಭಾಗದ ಅಧ್ಯಕ್ಷೆ ಶರ್ಮಿಳಾ ಮಹಾ ವೀರ್‌ ಜೈನ್‌ ಮತ್ತು ಕಾರ್ಯದರ್ಶಿ ಮಂಜುಳಾ ಗೌಡ ಇವರು ಉಪಸ್ಥಿತರಿದ್ದರು.

ಆರಂಭದಲ್ಲಿ ಅತಿಥಿ-ಗಣ್ಯರನ್ನು ಚೆಂಡೆ- ಮದ್ದಳೆ, ಕೊಂಬು-ವಾದ್ಯಗಳೊಂದಿಗೆ ಸಾಂಪ್ರದಾಯಿಕರಾಗಿ ಸ್ವಾಗತಿಸಿ ವೇದಿಕೆಗೆ ಆಹ್ವಾನಿಸಲಾಯಿತು. ಇದೇ ಸಂದರ್ಭದಲ್ಲಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಇವರ ಮಹಾಪ್ರಬಂಧ ಮುಂಬಯಿ ಕನ್ನಡಿಗರ ಸಿದ್ಧಿ-ಸಾಧನೆಗಳು ಕೃತಿಯನ್ನು ತುಳು ಸಂಘದ ಮಾಜಿ ಅಧ್ಯಕ್ಷೆ ಕುಸುಮಾ ಜಯರಾಮ ಶೆಟ್ಟಿ ಇವರು ಬಿಡು ಗಡೆಗೊಳಿಸಿ ಶುಭಹಾರೈಸಿದರು.

ಹಿರಿಯ ಲೇಖಕರಾದ ಎಸ್ಕೆ ಹಳೆಯಂಗಡಿ ಇವರು ಕೃತಿಯನ್ನು ಪರಿಚಯಿಸಿ ಮಾತನಾಡಿ, ಇದೊಂದು ಮುಂಬಯಿ ಕನ್ನಡಿಗರ ಎನ್‌ಸೈಕ್ಲೋ ಪಿಡಿಯಾ ಇದ್ದಂತೆ. ಇದನ್ನು ಅವಸರದಿಂದ ವಿಶ್ಲೇಷಿಸುವುದು ಲೇಖಕರಿಗೆ ದ್ರೋಹ ಬಗೆದಂತೆ. ನಮ್ಮ ಪೂರ್ವಜರು ಹೆಣ್ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡದೆ ದೊಡ್ಡ ಅನ್ಯಾಯವೆಸಗಿದ್ದಾರೆ. ಅಂದಿನಿಂದಲೇ ಅವರಿಗೆ ಸೂಕ್ತ ಶಿಕ್ಷಣ ನೀಡು ತ್ತಿದ್ದರೆ, ನಮ್ಮ ದೇಶದ ಭವಿಷ್ಯವೇ ಬದಲಾಗುತ್ತಿತ್ತು ಎಂದರು.

ಹಿರಿಯರಾದ ಎಸ್‌. ಜಯರಾಮ ಶೆಟ್ಟಿ, ಕಸ್ತೂರಿ ಶೆಟ್ಟಿ ಮೊದಲಾದವರು ಸಂದಭೋìಚಿತವಾಗಿ ಮಾತನಾಡಿ ಶುಭಹಾರೈಸಿದರು. ಶರ್ಮಿಳಾ ಜೈನ್‌ ಸ್ವಾಗತಿಸಿದರು. ಶಕುಂತಳಾ ಶೆಟ್ಟಿ ಇವರು ಅತಿಥಿಗಳನ್ನು ಪರಿಚಯಿಸಿದರು. 

ಮಂಜುಳಾ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಸವಿತಾ ಸೋಮನಾಥ್‌ ಪೂಜಾರಿ ವಂದಿಸಿದರು. ಕೊನೆಯಲ್ಲಿ ಮಹಾಪ್ರಸಾದ ವಿತರಣೆ ನಡೆಯಿತು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು-ಸದಸ್ಯೆಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.