ತುಳು ಸಂಘ ಬರೋಡಾ ವತಿಯಿಂದ 31ನೇ ವಾರ್ಷಿಕ ಬಿಸುಪರ್ಬ


Team Udayavani, Apr 18, 2018, 3:45 PM IST

1704mum02.jpg

ಬರೋಡಾ: ತುಳು ಸಂಘ ಬರೋಡಾದ ಮಹಿಳಾ ವಿಭಾಗವು ಇಂದು ಆಯೋಜಿಸಿರುವ ವೈಶಿಷ್ಟéಪೂರ್ಣ ಬಿಸು ಕಣಿ ದರ್ಶನ ಕಾರ್ಯಕ್ರಮ ಕಂಡು ಮನಸ್ಸಿಗೆ ಬಹಳ ಸಂತೋಷವಾಯಿತು. ನಾಡಿನ ಸಂಸ್ಕೃತಿ- ಸಂಸ್ಕಾರಗಳು ಇಂದು ಮರೆಯಾಗುತ್ತಿರುವ ಸಂದರ್ಭದಲ್ಲಿ ಇಲ್ಲಿನ ತುಳು-ಕನ್ನಡಿಗ ಮಹಿಳೆ ಯರು ಸಂಘಟಿತರಾಗಿ ಬಿಸುಹಬ್ಬವನ್ನು ಹಿಂದಿನ ಪರಂಪರೆಯಂತೆ ಆಚರಿಸಿ ಯುವ ಪೀಳಿಗೆಗೆ ಇದರ ಬಗ್ಗೆ ಅರಿವು ಮೂಡಿಸಿರುವುದು ಅಭಿನಂದನೀಯ. ದೂರದ ಗುಜರಾತಿನಲ್ಲಿ ನೆಲೆನಿಂತ ತುಳು-ಕನ್ನಡಿಗರು ಕಳೆದ ಮೂವತ್ತು ವರ್ಷಗಳಿಂದ ತಪಸ್ಸಿನಂತೆ ಬಹಳ ಸಡಗರದಿಂದ ಸಂಭ್ರಮವನ್ನು ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಸಂಸ್ಕೃತಿ, ಪರಂಪರೆಯನ್ನು ಉಳಿಸಿ-ಬೆಳೆಸುವ ಒಂದು ದೊಡ್ಡ ರಚನಾತ್ಮಕ ಯಜ್ಞ ಇದಾಗಿದೆ ಎಂದು ಮುಂಬಯಿ ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಇವರು ಅಭಿಪ್ರಾಯಿಸಿದರು.

ಎ. 14ರಂದು ತುಳು ಸಂಘ ಬರೋಡಾ ಇದರ ಮಹಿಳಾ ವಿಭಾಗದ ವತಿಯಿಂದ ಸಂಘ ತುಳು ಚಾವಡಿ ಸಭಾಗೃಹದಲ್ಲಿ ನಡೆದ 31ನೇ ವಾರ್ಷಿಕ ಬಿಸುಪರ್ಬ ಸಂಭ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಇವರು, ಹೆಣ್ಮಕ್ಕಳಿಗೆ ತವರು ಮನೆಯ ಯಾವ ಸುಖ, ಭೋಗಗಳು ಬೇಡ ಎಂದು ಅವರು ತಿಳಿಸಿದರು.

ಆದ್ದರಿಂದ ಪೋಷಕರು ಎಂತಹ ಕಷ್ಟದಲ್ಲಿದ್ದರೂ ಕೂಡಾ ತಮ್ಮ ಹೆಣ್ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುವ ಪಣ ತೊಡಬೇಕು. ಪಾಲಕರು ತಮ್ಮ ಈ ಹೊಣೆಗಾರಿಕೆಯಿಂದ ಯಾವ ಕಾರಣದಿಂದಲೂ ತಪ್ಪಿಸಿಕೊಳ್ಳಬಾರದು ಎಂದು ನಾನು ಕಳಕಳಿಯಿಂದ ಸೆರಗೊಡ್ಡಿ ಬೇಡಿ ಕೊಳ್ಳುತ್ತೇನೆ ಎಂದು ನುಡಿದು ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘ ಮಹಿಳಾ ವಿಭಾಗದ ಹಿರಿಯರಾದ ವಿನೋದಾ ಸುಧಾಕರ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಜಯಶ್ರೀ ಜಿನ ರಾಜ್‌ ಪೂಜಾರಿ, ತುಳು ಸಂಘ ಬರೋಡಾ ಮಹಿಳಾ ವಿಭಾಗದ ಅಧ್ಯಕ್ಷೆ ಶರ್ಮಿಳಾ ಮಹಾ ವೀರ್‌ ಜೈನ್‌ ಮತ್ತು ಕಾರ್ಯದರ್ಶಿ ಮಂಜುಳಾ ಗೌಡ ಇವರು ಉಪಸ್ಥಿತರಿದ್ದರು.

ಆರಂಭದಲ್ಲಿ ಅತಿಥಿ-ಗಣ್ಯರನ್ನು ಚೆಂಡೆ- ಮದ್ದಳೆ, ಕೊಂಬು-ವಾದ್ಯಗಳೊಂದಿಗೆ ಸಾಂಪ್ರದಾಯಿಕರಾಗಿ ಸ್ವಾಗತಿಸಿ ವೇದಿಕೆಗೆ ಆಹ್ವಾನಿಸಲಾಯಿತು. ಇದೇ ಸಂದರ್ಭದಲ್ಲಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಇವರ ಮಹಾಪ್ರಬಂಧ ಮುಂಬಯಿ ಕನ್ನಡಿಗರ ಸಿದ್ಧಿ-ಸಾಧನೆಗಳು ಕೃತಿಯನ್ನು ತುಳು ಸಂಘದ ಮಾಜಿ ಅಧ್ಯಕ್ಷೆ ಕುಸುಮಾ ಜಯರಾಮ ಶೆಟ್ಟಿ ಇವರು ಬಿಡು ಗಡೆಗೊಳಿಸಿ ಶುಭಹಾರೈಸಿದರು.

ಹಿರಿಯ ಲೇಖಕರಾದ ಎಸ್ಕೆ ಹಳೆಯಂಗಡಿ ಇವರು ಕೃತಿಯನ್ನು ಪರಿಚಯಿಸಿ ಮಾತನಾಡಿ, ಇದೊಂದು ಮುಂಬಯಿ ಕನ್ನಡಿಗರ ಎನ್‌ಸೈಕ್ಲೋ ಪಿಡಿಯಾ ಇದ್ದಂತೆ. ಇದನ್ನು ಅವಸರದಿಂದ ವಿಶ್ಲೇಷಿಸುವುದು ಲೇಖಕರಿಗೆ ದ್ರೋಹ ಬಗೆದಂತೆ. ನಮ್ಮ ಪೂರ್ವಜರು ಹೆಣ್ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡದೆ ದೊಡ್ಡ ಅನ್ಯಾಯವೆಸಗಿದ್ದಾರೆ. ಅಂದಿನಿಂದಲೇ ಅವರಿಗೆ ಸೂಕ್ತ ಶಿಕ್ಷಣ ನೀಡು ತ್ತಿದ್ದರೆ, ನಮ್ಮ ದೇಶದ ಭವಿಷ್ಯವೇ ಬದಲಾಗುತ್ತಿತ್ತು ಎಂದರು.

ಹಿರಿಯರಾದ ಎಸ್‌. ಜಯರಾಮ ಶೆಟ್ಟಿ, ಕಸ್ತೂರಿ ಶೆಟ್ಟಿ ಮೊದಲಾದವರು ಸಂದಭೋìಚಿತವಾಗಿ ಮಾತನಾಡಿ ಶುಭಹಾರೈಸಿದರು. ಶರ್ಮಿಳಾ ಜೈನ್‌ ಸ್ವಾಗತಿಸಿದರು. ಶಕುಂತಳಾ ಶೆಟ್ಟಿ ಇವರು ಅತಿಥಿಗಳನ್ನು ಪರಿಚಯಿಸಿದರು. 

ಮಂಜುಳಾ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಸವಿತಾ ಸೋಮನಾಥ್‌ ಪೂಜಾರಿ ವಂದಿಸಿದರು. ಕೊನೆಯಲ್ಲಿ ಮಹಾಪ್ರಸಾದ ವಿತರಣೆ ನಡೆಯಿತು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು-ಸದಸ್ಯೆಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.