ತುಳು ಸಂಘ ಬರೋಡಾ: ದಸರಾ ಸಂಭ್ರಮಾಚರಣೆ
Team Udayavani, Oct 12, 2019, 5:10 PM IST
ಮುಂಬಯಿ, ಅ. 11: ತುಳು ಸಂಘ ಬರೋಡಾ ವತಿಯಿಂದ ವಾರ್ಷಿಕ ದರಸಾ ಸಂಭ್ರಮಾಚರಣೆಯು ಅ. 8ರಂದು ವಿಜಯದಶಮಿಯ ಶುಭದಿನದಂದು ಬರೋಡಾದ ಇಂಡಿಯನ್ ಬುಲ್ಸ್ ಮೆಘಾ ಮಾಲ್ನಲ್ಲಿರುವ ತುಳು ಚಾವಡಿ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ತುಳು ಸಂಘ ಬರೋಡಾ ಅಧ್ಯಕ್ಷ ಶಶಿಧರ್ ಬಿ. ಶೆಟ್ಟಿ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನೇರವೇರಿದ ಸಂಪ್ರಾದಾಯಿಕ ಕಾರ್ಯಕ್ರಮದಲ್ಲಿ ಪಾರುಲ್ ಆರ್ಯುವೇದಿಕ್ ಕಾಲೇಜ್ನ ಪಾಂಶುಪಾಲ ಡಾ| ಹೇಮಂತ್ ಟಿ. ಅವರು ಅತಿಥಿಯಾಗಿ ಪಾಲ್ಗೊಂಡು ತುಳುನಾಡ ಸಂಸ್ಕೃತಿಯನ್ನು ಸಾರುವ ಹಬ್ಬಕ್ಕೆ ಶುಭಹಾರೈಸಿದರು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ತುಳುವರು ಮತ್ತು ಸಂಘದ ಸದಸ್ಯರು ಕುರಾಲ್ ಪೂಜಾ, ಭಜನೆ ಮತ್ತು ಹಿತವಾಚನ ಕಾರ್ಯಕ್ರಮ ನೇರವೇರಿದರು. ಈ ಸಂದರ್ಭದಲ್ಲಿ ತುಳು ಸಂಘದ ಹಿರಿಯರೂ ಹಾಗೂ ಸಂಸ್ಥಾಪಕ ಸದಸ್ಯ ಕೊರಗಪ್ಪ ಶೆಟ್ಟಿ ಅವರ 75ನೇ ಜನ್ಮ ದಿನಾಚರಣೆ ಆಚರಿಸಿ ಮತ್ತೋರ್ವ ಹಿರಿಯ ಸದಸ್ಯ ರಾಮ್ದಾಸ್ ಶೆಟ್ಟಿ ದಂಪತಿಯನ್ನು ಸಮ್ಮಾನಿಸಿ ಅಭಿನಂದಿಸಲಾಯಿತು.
ತುಳು ಸಂಘ ಬರೋಡಾ ಗೌರವಾಧ್ಯಕ್ಷ ದಯಾನಂದ ಬೋಂಟ್ರಾ, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ವಾಸು ವಿ. ಸುವರ್ಣ, ಮಹಿಳಾ ವಿಭಾಗಾಧ್ಯಕ್ಷೆ ಡಾ| ಶರ್ಮಿಳಾ ಜೈನ್ ಹಾಗೂ ಜಯರಾಮ್ ಶೆಟ್ಟಿ, ಕುಸುಮಾ ಜೆ. ಶೆಟ್ಟಿ, ಮಾಧವ ಶೆಟ್ಟಿ, ಸತೀಶ್ ಶೆಟ್ಟಿ, ದಿನೇಶ್ ಶೆಟ್ಟಿ, ವಿಶಾಲ್ ಶಾಂತಾ, ಯಶವಂತ್ ಶೆಟ್ಟಿ ಮದನ್ ಗೌಡ, ಚಂದ್ರ ಶೆಟ್ಟಿ, ಪ್ರಮೀಳಾ ಶೆಟ್ಟಿ, ಕಸ್ತೂರಿ ಶೆಟ್ಟಿ, ಮಂಜುಳಾ ಗೌಡ ಹಾಗೂ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸ್ಥಳೀಯ ತುಳು-ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು, ಸ್ಥಳೀಯ ಉದ್ಯಮಿಗಳು, ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ- ವರದಿ: ರೊನಿಡಾ ಮುಂಬಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ